AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್

Jana Nayagan: 'ಜನ ನಾಯಗನ್' ಸಿನಿಮಾ ಈಗಾಗಲೇ ಸೆನ್ಸಾರ್ ಮಂಡಳಿಯ ತೊಡಕುಗಳು ಹಾಗೂ ದೃಶ್ಯಗಳ ಸೋರಿಕೆಯಿಂದಾಗಿ ಸಾಕಷ್ಟು ವಿಳಂಬವಾಗಿದ್ದು, ಸದ್ಯದಲ್ಲೇ ಹೊಸ ಬಿಡುಗಡೆಯ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಈ ಚಿತ್ರದ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ವಿಜಯ್ ಅದ್ಧೂರಿ ಮುಕ್ತಾಯ ಹಾಡಲಿದ್ದಾರೆ.

‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್
ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 16, 2026 | 7:00 AM

Share

ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳು ನಾಡು ಸಿಎಂ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಸಂಚಲನ ಮೂಡಿಸುತ್ತಿದೆ. ಈ ಸಿನಿಮಾದ ಮೂಲಕ ವಿಜಯ್ ತಮ್ಮ ಚಿತ್ರರಂಗದ ಸುದೀರ್ಘ ಪಯಣಕ್ಕೆ ವಿರಾಮ ಹಾಡಿ, ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಿರುವಾಗ, ಸಿನಿಮಾದ ಟೈಟಲ್ ಕಾರ್ಡ್ ವಿಷಯದಲ್ಲಿ ವಿಜಯ್ ತೆಗೆದುಕೊಂಡಿದ್ದಾರೆ ಎನ್ನಲಾದ ನಿರ್ಧಾರವೊಂದು ಈಗ ಸುದ್ದಿಯಲ್ಲಿದೆ.

ವರದಿಗಳ ಪ್ರಕಾರ, ‘ಜನ ನಾಯಗನ್’ ಚಿತ್ರದ ಆರಂಭದಲ್ಲಿ ವಿಜಯ್ ಅವರಿಗೆ ‘ಹಾನರೆಬಲ್ ಚೀಫ್ ಮಿನಿಸ್ಟರ್ ದಳಪತಿ ವಿಜಯ್’ ಎಂದು ಟೈಟಲ್ ಕಾರ್ಡ್ ಹಾಕಲು ಚಿತ್ರತಂಡ ಯೋಜಿಸಿತ್ತು. ವಿಜಯ್ ಅವರ ರಾಜಕೀಯ ಮಹತ್ವಾಕಾಂಕ್ಷೆಗೆ ಪೂರಕವಾಗಿ ಈ ಬಿರುದು ನೀಡಲು ಚಿತ್ರತಂಡ ಉತ್ಸುಕವಾಗಿತ್ತು. ಆದರೆ, ಈ ಪ್ರಸ್ತಾಪವನ್ನು ವಿಜಯ್ ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ಬದಲಾಗಿ, ದಶಕಗಳಿಂದ ತಮ್ಮ ಅಭಿಮಾನಿಗಳು ಪ್ರೀತಿಯಿಂದ ಕರೆಯುವ ‘ದಳಪತಿ’ ಎಂಬ ಬಿರುದನ್ನೇ ಉಳಿಸಿಕೊಳ್ಳಲು ಅವರು ಸೂಚಿಸಿದ್ದಾರೆ ಎನ್ನಲಾಗಿದೆ.

ತಮ್ಮ ಸಿನಿಮಾ ಬದುಕು ಮತ್ತು ರಾಜಕೀಯ ಬದುಕಿನ ನಡುವೆ ಸ್ಪಷ್ಟವಾದ ಗೆರೆ ಇರಲಿ ಎಂಬುದು ವಿಜಯ್ ಅವರ ಆಶಯ. ಸಿನಿಮಾ ಪ್ರೇಕ್ಷಕರು ತಮ್ಮನ್ನು ಯಾವ ರೂಪದಲ್ಲಿ ನೋಡಲು ಇಷ್ಟಪಡುತ್ತಾರೋ ಅದೇ ಶೈಲಿಯಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳುವುದು ಅವರ ಉದ್ದೇಶ. ‘ದಳಪತಿ’ ಎಂಬ ಬಿರುದು ಕೇವಲ ಹೆಸರಲ್ಲ, ಅದು ಅಭಿಮಾನಿಗಳ ಭಾವನೆ. ಹಾಗಾಗಿ ತಮ್ಮ ಕೊನೆಯ ಸಿನಿಮಾದಲ್ಲೂ ಅದೇ ಹೆಸರಿನಿಂದ ಗುರುತಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾ ಬಿಡುಗಡೆ ತಡೆದಿದ್ದು ಯಾರು? ಮಾಹಿತಿ ನೀಡಿದ ನಿರ್ಮಾಪಕ

‘ಜನ ನಾಯಗನ್’ ಸಿನಿಮಾ ಈಗಾಗಲೇ ಸೆನ್ಸಾರ್ ಮಂಡಳಿಯ ತೊಡಕುಗಳು ಹಾಗೂ ದೃಶ್ಯಗಳ ಸೋರಿಕೆಯಿಂದಾಗಿ ಸಾಕಷ್ಟು ವಿಳಂಬವಾಗಿದ್ದು, ಸದ್ಯದಲ್ಲೇ ಹೊಸ ಬಿಡುಗಡೆಯ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಈ ಚಿತ್ರದ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ವಿಜಯ್ ಅದ್ಧೂರಿ ಮುಕ್ತಾಯ ಹಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ