AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಿಯಲ್ಲೇ ಮುಗಿದೋಯ್ತು ಹಲ್ಲೆ ಪ್ರಕರಣ? ದೂರನ್ನೇ ದಾಖಲಿಸಿಲ್ಲ ರವೀನಾ ಟಂಡನ್

ಜೋನ್ 9ರ ಡಿಸಿಪಿ ರಾಜ್ ತಿಲಕ್ ರೋಷನ್ ಅವರು ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ‘ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಯಾರಿಗೂ ಕಾರು ಟಚ್ ಮಾಡಿಲ್ಲ. ಆದಾಗ್ಯೂ ಮಾತಿನ ಚಕಮಕಿ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಿಯಲ್ಲೇ ಮುಗಿದೋಯ್ತು ಹಲ್ಲೆ ಪ್ರಕರಣ? ದೂರನ್ನೇ ದಾಖಲಿಸಿಲ್ಲ ರವೀನಾ ಟಂಡನ್
ರವೀನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 03, 2024 | 10:22 AM

Share

ರವೀನಾ ಟಂಡನ್ (Raveena Tondon) ಮೇಲೆ ಕೆಲವರು ದಾಳಿ ಮಾಡಿದ್ದಾರೆ. ಕಾರು ಹಿಂದಕ್ಕೆ ತೆಗೆಯುವಾಗ ನಡೆದ ಕಿರಿಕ್​ನಲ್ಲಿ ರವೀನಾಗೆ ಕೆಲವರು ತೊಂದರೆ ಕೊಟ್ಟಿದ್ದಾರೆ. ‘ನನಗೆ ಹೊಡೆಯಬೇಡಿ’ ಎಂದು ರವೀನಾ ಬೇಡಿಕೊಂಡಿರೋದು ವಿಡಿಯೋದಲ್ಲಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಅಪ್​ಡೇಟ್ ನೀಡಿದ್ದಾರೆ. ಸದ್ಯ ಈ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎನ್ನುವುದನ್ನು ನೋಡಬೇಕಿದೆ. ಸೆಲೆಬ್ರಿಟಿಗಳಿಗೆ ಈ ರೀತಿ ಆದರೆ, ಜನಸಾಮಾನ್ಯರ ಸ್ಥಿತಿ ಏನಾಗಬೇಡ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಜೋನ್ 9ರ ಡಿಸಿಪಿ ರಾಜ್ ತಿಲಕ್ ರೋಷನ್ ಅವರು ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಅವರು ಘಟನೆ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ‘ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಯಾರಿಗೂ ಕಾರು ಟಚ್ ಮಾಡಿಲ್ಲ. ಆದಾಗ್ಯೂ ಮಾತಿನ ಚಕಮಕಿ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ರವೀನಾ ಆಗಲಿ, ನಮ್ಮ ಮೇಲೆ ಹಲ್ಲೆ ಆಗಿದೆ ಎಂದವರಾಗಲಿ ದೂರು ದಾಖಲು ಮಾಡಿಲ್ಲ. ಹೀಗಾಗಿ ಯಾವುದೇ ಕೇಸ್ ಇಲ್ಲ. ಯಾರಿಗೂ ಹಾನಿ ಆಗಿಲ್ಲ. ಡ್ರೈವರ್ ಬಳಿ ಕೆಳಗೆ ಬರುವಂತೆ ಅಲ್ಲಿಯವರು ಒತ್ತಾಯ ಹೇರಿದ್ದರು. ರವೀನಾ ಅವರನ್ನು ಪ್ರಕರಣದಲ್ಲಿ ತರಲಾಯಿತು ಎನ್ನಲಾಗಿದೆ.

ರವೀನಾ ಅವರು ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಅವರು ‘ಅರಣ್ಯಕ್’ ಮೂಲಕ ಒಟಿಟಿಗೆ ಕಾಲಿಟ್ಟಿದ್ದಾರೆ. ಅವರು ‘ಕೆಜಿಎಫ್ 3’ ಸಿನಿಮಾದಲ್ಲೂ ನಟಿಸಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಎದುರಿದ್ದವರು ಹೇಳೋದೇ ಬೇರೆ..

ರವೀನಾ ಟಂಡನ್​ ಅವರಿಂದ ಹಲ್ಲೆ ಆಗಿದೆ ಅನ್ನೋದು ಮೊಹಮ್ಮದ್ ಎಂಬಾತನ ಹೇಳಿಕೆ. ‘ರಿವರ್ಸ್ ತೆಗೆಯುವಾಗ ಕಾರು ತಾಯಿಗೆ ತಾಗಿದೆ, ಕಾರು ಚಾಲಕ ನನ್ನ ತಾಯಿಗೆ ಹೊಡದಿದ್ದಾನೆ’ ಎಂದು ಮೊಹಮ್ಮದ್ ಆರೋಪ ಮಾಡಿದ್ದಾರೆ. ಇನ್ನು ಪೊಲೀಸ್ ಠಾಣೆಗೆ ಹೋದರೆ ದೂರು ತೆಗೆದುಕೊಳ್ಳುತ್ತಿಲ್ಲ ಎಂದು ಕೂಡ ಅವರು ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೆ ಪೊಲೀಸರು ಯಾವುದೇ ದೂರು ದಾಖಲಾಗಿಲ್ಲ ಎಂದಿದ್ದಾರೆ. ರಾಜಿಯಲ್ಲಿ ಈ ಪ್ರಕರಣ ಮುಗಿದು ಹೋಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK