AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ

ಸೈರಾ ಬಾನು ಅವರು ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ರೆಹಮಾನ್ ಜೊತೆ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆ ಮಾಡಿಕೊಂಡಿದ್ದಾರೆ. ಸೈರಾ ಈ ಬಗ್ಗೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಮೋಹಿನಿ ಕೂಡ ತಮ್ಮ ಪತಿ ಮಾರ್ಕ್​ ಅವರಿಂದ ಬೇರೆ ಆಗುತ್ತಿರುವುದಾಗಿ ಹೇಳಿದ್ದಾರೆ. ಇದನ್ನು ಕೆಲವರು ಲಿಂಕ್ ಮಾಡಿದ್ದಾರೆ. ಇಬ್ಬರ

ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ
ಮಾಲಿನಿ-ರೆಹಮಾನ್
ರಾಜೇಶ್ ದುಗ್ಗುಮನೆ
|

Updated on:Nov 21, 2024 | 12:03 PM

Share

ಎಆರ್ ರೆಹಮಾನ್ ಅವರು ಪತ್ನಿ ಸೈರಾ ಭಾನು ಅವರಿಂದ ಬೇರೆ ಆಗಿದ್ದಾರೆ. ಇದರ ಜೊತೆಗೆ ರೆಹಮಾನ್ ತಂಡದಲ್ಲಿ ಇರೋ ಮೊಹಿನಿ ಡೇ ಕೂಡ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಕೆಲವೇ ಗಂಟೆಗಳ ಅಂತರದಲ್ಲಿ ಈ ಎರಡೂ ಘೋಷಣೆ ಆಗಿದೆ. ಅನೇಕರು ಈ ಎರಡು ಪ್ರಕರಣಗಳ ಮಧ್ಯೆ ಲಿಂಕ್ ಮಾಡುತ್ತಾ ಇದ್ದಾರೆ. ಈ ಬಗ್ಗೆ ಸೈರಾ ಬಾನು ಅವರು ವಕೀಲರು ಸ್ಪಷ್ಟನೆ ನೀಡಿದ್ದಾರೆ. ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಲಿಂಕ್ ಇಲ್ಲ ಎಂದಿದ್ದಾರೆ.

ಸೈರಾ ಬಾನು ಅವರು ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ರೆಹಮಾನ್ ಜೊತೆ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆ ಮಾಡಿಕೊಂಡಿದ್ದಾರೆ. ಸೈರಾ ಈ ಬಗ್ಗೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಮೋಹಿನಿ ಕೂಡ ತಮ್ಮ ಪತಿ ಮಾರ್ಕ್​ ಅವರಿಂದ ಬೇರೆ ಆಗುತ್ತಿರುವುದಾಗಿ ಹೇಳಿದ್ದಾರೆ. ಇದನ್ನು ಕೆಲವರು ಲಿಂಕ್ ಮಾಡಿದ್ದಾರೆ. ಇಬ್ಬರ ಮಧ್ಯೆ ಏನೋ ನಡೆದಿರಬಹುದು ಎಂದು ಹೇಳಲಾಗಿತ್ತು. ಈ ಕುರಿತು ಸೈರಾ ಪರ ವಕೀಲರಾದ ವಂದನಾ ಶಾ ಅವರು ಸ್ಪಷ್ಟನೆ ನೀಡಿದ್ದಾರೆ.

‘ಈ ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಕನೆಕ್ಷನ್ ಇಲ್ಲ. ಸೈರಾ ಹಾಗೂ ರೆಹಮಾನ್ ಅವರದ್ದು ಇದು ಸ್ವಂತ ನಿರ್ಧಾರ’ ಎಂದು ಹೇಳಿದ್ದಾರೆ ವಂದನಾ. ‘ಮದುವೆ ಆಗಿ ಹಲವು ವರ್ಷಗಳ ಬಳಿಕ ಜೀವನದಲ್ಲಿ ಏರಿಳಿತ ಇದ್ದೇ ಇರುತ್ತದೆ. ಇಬ್ಬರೂ ಒಳ್ಳೆಯ ರೀತಿಯಲ್ಲಿ ಸಂಬಂಧ ಕೊನೆ ಮಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಬೆಂಬಲ ನೀಡಿಕೊಳ್ಳುವುದಾಗಿ ಹೇಳಿದ್ದಾರೆ’ ಎಂದಿದ್ದಾರೆ ಸೈರಾ.

ಸದ್ಯ ವಂದನಾ ಅವರು ಸೈರಾ ಹಾಗೂ ರೆಹಮಾನ್ ಅವರ ಸಂಬಂಧ ಕೊನೆ ಆಗಲು ಕಾರಣ ಏನು ಎಂಬುದನ್ನು ರಿವೀಲ್ ಮಾಡಿಲ್ಲ. ‘ಅವರ ವಿಚ್ಛೇದನವು ಸೌಹಾರ್ದಯುತವಾಗಿದೆ ಮತ್ತು ಸದ್ಯಕ್ಕೆ ಹಣಕಾಸಿನ ಅಂಶದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೆಹಮಾನ್ ವಿಚ್ಛೇದನದ ಬಳಿಕ ದೊಡ್ಡ ಬೆಳವಣಿಗೆ; ಗಾಯಕನ ತಂಡದಲ್ಲಿದ್ದವಳಿಂದಲೂ ಡಿವೋರ್ಸ್ ಘೋಷಣೆ

ಎಆರ್ ರೆಹಮಾನ್ ಹಾಗೂ ಸೈರಾ ದಂಪತಿಗೆ ಮೂವರು ಮಕ್ಕಳು. ಖತಿಜಾ, ರಹಿಮಾ ಹಾಗೂ ಅಮೀನ್ ರೆಹಮಾನ್ ಹೆಸರಿನ ಮಕ್ಕಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:52 am, Thu, 21 November 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ