AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ

ಸೈರಾ ಬಾನು ಅವರು ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ರೆಹಮಾನ್ ಜೊತೆ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆ ಮಾಡಿಕೊಂಡಿದ್ದಾರೆ. ಸೈರಾ ಈ ಬಗ್ಗೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಮೋಹಿನಿ ಕೂಡ ತಮ್ಮ ಪತಿ ಮಾರ್ಕ್​ ಅವರಿಂದ ಬೇರೆ ಆಗುತ್ತಿರುವುದಾಗಿ ಹೇಳಿದ್ದಾರೆ. ಇದನ್ನು ಕೆಲವರು ಲಿಂಕ್ ಮಾಡಿದ್ದಾರೆ. ಇಬ್ಬರ

ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ
ಮಾಲಿನಿ-ರೆಹಮಾನ್
Follow us
ರಾಜೇಶ್ ದುಗ್ಗುಮನೆ
|

Updated on:Nov 21, 2024 | 12:03 PM

ಎಆರ್ ರೆಹಮಾನ್ ಅವರು ಪತ್ನಿ ಸೈರಾ ಭಾನು ಅವರಿಂದ ಬೇರೆ ಆಗಿದ್ದಾರೆ. ಇದರ ಜೊತೆಗೆ ರೆಹಮಾನ್ ತಂಡದಲ್ಲಿ ಇರೋ ಮೊಹಿನಿ ಡೇ ಕೂಡ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಕೆಲವೇ ಗಂಟೆಗಳ ಅಂತರದಲ್ಲಿ ಈ ಎರಡೂ ಘೋಷಣೆ ಆಗಿದೆ. ಅನೇಕರು ಈ ಎರಡು ಪ್ರಕರಣಗಳ ಮಧ್ಯೆ ಲಿಂಕ್ ಮಾಡುತ್ತಾ ಇದ್ದಾರೆ. ಈ ಬಗ್ಗೆ ಸೈರಾ ಬಾನು ಅವರು ವಕೀಲರು ಸ್ಪಷ್ಟನೆ ನೀಡಿದ್ದಾರೆ. ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಲಿಂಕ್ ಇಲ್ಲ ಎಂದಿದ್ದಾರೆ.

ಸೈರಾ ಬಾನು ಅವರು ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ರೆಹಮಾನ್ ಜೊತೆ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆ ಮಾಡಿಕೊಂಡಿದ್ದಾರೆ. ಸೈರಾ ಈ ಬಗ್ಗೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಮೋಹಿನಿ ಕೂಡ ತಮ್ಮ ಪತಿ ಮಾರ್ಕ್​ ಅವರಿಂದ ಬೇರೆ ಆಗುತ್ತಿರುವುದಾಗಿ ಹೇಳಿದ್ದಾರೆ. ಇದನ್ನು ಕೆಲವರು ಲಿಂಕ್ ಮಾಡಿದ್ದಾರೆ. ಇಬ್ಬರ ಮಧ್ಯೆ ಏನೋ ನಡೆದಿರಬಹುದು ಎಂದು ಹೇಳಲಾಗಿತ್ತು. ಈ ಕುರಿತು ಸೈರಾ ಪರ ವಕೀಲರಾದ ವಂದನಾ ಶಾ ಅವರು ಸ್ಪಷ್ಟನೆ ನೀಡಿದ್ದಾರೆ.

‘ಈ ಎರಡೂ ಪ್ರಕರಣಗಳ ಮಧ್ಯೆ ಯಾವುದೇ ಕನೆಕ್ಷನ್ ಇಲ್ಲ. ಸೈರಾ ಹಾಗೂ ರೆಹಮಾನ್ ಅವರದ್ದು ಇದು ಸ್ವಂತ ನಿರ್ಧಾರ’ ಎಂದು ಹೇಳಿದ್ದಾರೆ ವಂದನಾ. ‘ಮದುವೆ ಆಗಿ ಹಲವು ವರ್ಷಗಳ ಬಳಿಕ ಜೀವನದಲ್ಲಿ ಏರಿಳಿತ ಇದ್ದೇ ಇರುತ್ತದೆ. ಇಬ್ಬರೂ ಒಳ್ಳೆಯ ರೀತಿಯಲ್ಲಿ ಸಂಬಂಧ ಕೊನೆ ಮಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಬೆಂಬಲ ನೀಡಿಕೊಳ್ಳುವುದಾಗಿ ಹೇಳಿದ್ದಾರೆ’ ಎಂದಿದ್ದಾರೆ ಸೈರಾ.

ಸದ್ಯ ವಂದನಾ ಅವರು ಸೈರಾ ಹಾಗೂ ರೆಹಮಾನ್ ಅವರ ಸಂಬಂಧ ಕೊನೆ ಆಗಲು ಕಾರಣ ಏನು ಎಂಬುದನ್ನು ರಿವೀಲ್ ಮಾಡಿಲ್ಲ. ‘ಅವರ ವಿಚ್ಛೇದನವು ಸೌಹಾರ್ದಯುತವಾಗಿದೆ ಮತ್ತು ಸದ್ಯಕ್ಕೆ ಹಣಕಾಸಿನ ಅಂಶದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೆಹಮಾನ್ ವಿಚ್ಛೇದನದ ಬಳಿಕ ದೊಡ್ಡ ಬೆಳವಣಿಗೆ; ಗಾಯಕನ ತಂಡದಲ್ಲಿದ್ದವಳಿಂದಲೂ ಡಿವೋರ್ಸ್ ಘೋಷಣೆ

ಎಆರ್ ರೆಹಮಾನ್ ಹಾಗೂ ಸೈರಾ ದಂಪತಿಗೆ ಮೂವರು ಮಕ್ಕಳು. ಖತಿಜಾ, ರಹಿಮಾ ಹಾಗೂ ಅಮೀನ್ ರೆಹಮಾನ್ ಹೆಸರಿನ ಮಕ್ಕಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:52 am, Thu, 21 November 24

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ