AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿಯಲ್ಲೂ ‘ಗುಂಟೂರು ಖಾರಂ’ ರಿಲೀಸ್ ಆಗೋದು ಅನುಮಾನ ಎಂದವರಿಗೆ ಮಹೇಶ್ ಬಾಬು ಉತ್ತರ

‘ಗುಂಟೂರು ಖಾರಂ’ ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ತ್ರಿವಿಕ್ರಂ ಶ್ರೀನಿವಾಸ್. ಇವರ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಎದುರಾದ ಅಡ್ಡಿಗಳು ಒಂದೆರಡಲ್ಲ. ಮಹೇಶ್ ಬಾಬು ತಂದೆ-ತಾಯಿ ನಿಧನ ಹೊಂದಿದ್ದರಿಂದ ಶೂಟಿಂಗ್ ವಿಳಂಬ ಆಯಿತು. ನಟಿ ಪೂಜಾ ಹೆಗ್ಡೆ ಚಿತ್ರದಿಂದ ಹೊರ ನಡೆದಿದ್ದೂ ಸಮಸ್ಯೆ ಆಗಿದೆ.

ಜನವರಿಯಲ್ಲೂ ‘ಗುಂಟೂರು ಖಾರಂ’ ರಿಲೀಸ್ ಆಗೋದು ಅನುಮಾನ ಎಂದವರಿಗೆ ಮಹೇಶ್ ಬಾಬು ಉತ್ತರ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Aug 21, 2023 | 7:06 AM

Share

ನಟ ಮಹೇಶ್ ಬಾಬು (Mahesh Babu) ಅವರು ಸಿನಿಮಾ ಜೊತೆಗೆ ಕುಟುಂಬಕ್ಕೂ ಹೆಚ್ಚು ಆದ್ಯತೆ ನೀಡುತ್ತಾರೆ. ವರ್ಷಕ್ಕೆ ಒಂದು ಸಿನಿಮಾ ರಿಲೀಸ್ ಮಾಡೋದು ಅವರ ವಾಡಿಕೆ ಆಗಿತ್ತು. ಆದರೆ, ‘ಸರ್ಕಾರು ವಾರಿ ಪಾಟ’ ಸಿನಿಮಾ ಬಳಿಕ ಅವರು ತುಂಬಾನೇ ನಿಧಾನಗತಿಯಲ್ಲಿ ಶೂಟಿಂಗ್ ಮಾಡಿದರು. ಇದಕ್ಕೆ ಅವರ ಕುಟುಂಬದಲ್ಲಿ ನಡೆದ ಹಲವು ಘಟನೆಗಳೂ ಕಾರಣ. ಈಗ ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಈ ಚಿತ್ರ ರಿಲೀಸ್ ಆಗಬೇಕಿದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಮಹೇಶ್ ಬಾಬು ಬ್ರೇಕ್ ಮೇಲೆ ಬ್ರೇಕ್ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಈಗ ಎಲ್ಲಾ ವದಂತಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ತ್ರಿವಿಕ್ರಂ ಶ್ರೀನಿವಾಸ್. ಇವರ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಎದುರಾದ ಅಡ್ಡಿಗಳು ಒಂದೆರಡಲ್ಲ. ಮಹೇಶ್ ಬಾಬು ತಂದೆ-ತಾಯಿ ನಿಧನ ಹೊಂದಿದ್ದರಿಂದ ಶೂಟಿಂಗ್ ವಿಳಂಬ ಆಯಿತು. ನಟಿ ಪೂಜಾ ಹೆಗ್ಡೆ ಚಿತ್ರದಿಂದ ಹೊರ ನಡೆದಿದ್ದೂ ಸಮಸ್ಯೆ ಆಗಿದೆ. ಇದರ ಜೊತೆಗೆ ಎಸ್​. ಥಮನ್ ಸಂಗೀತ ಸಂಯೋಜನೆ ಮಹೇಶ್ ಬಾಬುಗೆ ಖುಷಿ ನೀಡುತ್ತಿಲ್ಲ ಎನ್ನಲಾಗಿದೆ. ಇನ್ನು, ಮಹೇಶ್ ಬಾಬು ಅವರು ಸಖತ್ ಸುತ್ತಾಟ ನಡೆಸುತ್ತಿದ್ದಾರೆ. ಇದು ಕೂಡ ಸಿನಿಮಾ ವಿಳಂಬಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಮಹೇಶ್ ಬಾಬು ಫ್ಯಾಮಿಲಿ ಟ್ರೀ: ಸ್ಟಾರ್ ನಟನ ಕುಟುಂಬದ ಬಗ್ಗೆ ನಿಮಗೆಷ್ಟು ಗೊತ್ತು?

ಸದ್ಯ ಮಹೇಶ್ ಬಾಬು ಮತ್ತೆ ಸೆಟ್​ಗೆ ಮರಳಿದ್ದಾರೆ. ಅವರು ಇನ್ನು ಯಾವುದೇ ಬ್ರೇಕ್ ಪಡೆಯದೇ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಭಾನುವಾರ (ಆಗಸ್ಟ್ 20) ಅವರು ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರು ಬಂದಿದ್ದು ಸೆಟ್​ನಿಂದ. ಭಾನುವಾರವೂ ಮಹೇಶ್ ಬಾಬು ಶೂಟಿಂಗ್​ನಲ್ಲಿ ಭಾಗಿ ಆಗಿರುವು ವಿಚಾರಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಈ ಕಾರ್ಯಕ್ರಮದ ವೇದಿಕೆ ಮೇಲೆ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ ಎನ್ನಲಾಗಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ತೆರೆಗೆ ತರುವುದಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ