AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಬಾಲಿವುಡ್ ನಟಿ ನೋರಾ ಫತೇಹಿ ಅವರು ಅಭಿನಯಿಸಿದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಕಾರಣ ಆಗಿದೆ. ದೇಶಾದ್ಯಂತ ವಿರೋಧ ವ್ಯಕ್ತವಾದ ಬಳಿಕ ನೋರಾ ಫತೇಹಿ ಅವರೇ ಜನರ ಎದುರು ಬಂದು ಸ್ಪಷ್ಟನೆ ನೀಡಿದ್ದಾರೆ. ಹಾಡಿನ ಸಾಹಿತ್ಯ ಸರಿ ಇಲ್ಲ ಎಂದು ಈ ಮೊದಲೇ ನಿರ್ದೇಶಕ ಪ್ರೇಮ್​​ಗೆ ತಾವು ಎಚ್ಚರಿಕೆ ನೀಡಿದ್ದಾಗಿ ನೋರಾ ತಿಳಿಸಿದ್ದಾರೆ.

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು
Nora Fatehi, Prem
ಮದನ್​ ಕುಮಾರ್​
|

Updated on: Mar 18, 2026 | 3:41 PM

Share

ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂಬುದು ನನಗೆ ಗೊತ್ತೇ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ನೋರಾ ಫತೇಹಿ ಅವರು ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ್ದಾರೆ. ‘ಕೆಲವು ವಿಷಯಗಳನ್ನು ನಾನು ಸ್ಪಷ್ಟಪಡಿಸಬೇಕಿದೆ. ನಾನು ಈ ಹಾಡನ್ನು 3 ವರ್ಷಗಳ ಹಿಂದೆ ಕನ್ನಡ ಭಾಷೆಯಲ್ಲಿ ಚಿತ್ರೀಕರಿಸಿದ್ದು. ಸಂಜಯ್ ದತ್ ಅವರಂತಹ ದೊಡ್ಡ ಕಲಾವಿದರು ಇರುವ ದೊಡ್ಡ ಸಿನಿಮಾ ಎಂಬ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೆ. ಕನ್ನಡ ಭಾಷೆ ನನಗೆ ತಿಳಿಯುವುದಿಲ್ಲ. ಶೂಟಿಂಗ್ ಮಾಡುವಾಗ ಹಾಡಿನ ಅರ್ಥ ತಿಳಿಯಲು ನಾನು ಚಿತ್ರತಂಡದ ಮೇಲೆ ಅವಲಂಬಿತಳಾಗಿದ್ದೆ. ಅವರು ಭಾಷಾಂತರ ಮಾಡಿ ಹೇಳಿದಾಗ ನನಗೆ ಯಾವುದೂ ಅಸಭ್ಯ ಅಂತ ಅನಿಸಿರಲಿಲ್ಲ’ ಎಂದು ನೋರಾ ಫತೇಹಿ ಹೇಳಿದ್ದಾರೆ.

‘ಆದರೆ ಈಗ ಹಿಂದಿಗೆ ಭಾಷಾಂತರ ಮಾಡಿರುವುದು ತುಂಬ ಆಕ್ಷೇಪಾರ್ಹವಾಗಿದೆ. ಅದರ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ. ನನ್ನ ಅನುಮತಿಯನ್ನು ಚಿತ್ರತಂಡದವರು ಪಡೆದುಕೊಂಡಿಲ್ಲ. ಹಾಡು ಬಿಡುಗಡೆಗೆ ನನ್ನನ್ನು ಕರೆದಾಗ ನನ್ನ ಫೋಟೋಗಳನ್ನು ಬಳಸಿದ ರೀತಿ ಕಂಡು ನನಗೆ ಬೇಸರ ಆಯಿತು. ನನ್ನ ಮತ್ತು ಸಂಜಯ್ ದತ್ ಅವರ ಫೋಟೋಗಳನ್ನು ಎಐ ಮೂಲಕ ಸೃಷ್ಟಿಸಿ ಬಳಸಿದ್ದಾರೆ. ಅದನ್ನು ನಾನು ವಿರೋಧಿಸುತ್ತೇನೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲೇ ನನಗೆ ಕಿರಿಕಿರಿ ಆಯಿತು’ ಎಂದಿದ್ದಾರೆ ನೋರಾ ಫತೇಹಿ.

View this post on Instagram

A post shared by Nora Fatehi (@norafatehi)

‘ನಾನು ಅಲ್ಲಿ ಎಲ್ಲರ ಎದುರು ಗೌರವಯುತವಾಗಿ ನಡೆದುಕೊಳ್ಳಲೇ ಬೇಕಿತ್ತು. ಹಿಂದಿ ವರ್ಷನ್ ಹಾಡು ಪ್ಲೇ ಮಾಡಿದಾಗ ನನಗೆ ಎಲ್ಲವೂ ತಿಳಿಯಿತು. ಇದು ವಿವಾದ ಆಗುತ್ತೆ ಎಂಬುದು ಗೊತ್ತಾಯಿತು. ಯಾಕೆಂದರೆ ನನಗೆ ಹಿಂದಿ ಅರ್ಥ ಆಗುತ್ತದೆ. ಇದು ಸರಿ ಅಲ್ಲ ಅಂತ ನಾನು ನಿರ್ದೇಶಕರಿಗೆ ಆಗಲೇ ಎಚ್ಚರಿಕೆ ನೀಡಿದೆ. ನಾನು ಸಿನಿಮಾದಿಂದ ಹೊರಗೆ ಬರುತ್ತೇನೆ. ನಾವು ಯಾವುದೇ ಕಾರಣಕ್ಕೂ ಇದನ್ನು ಪ್ರಚಾರ ಮಾಡಲ್ಲ. ನನ್ನ ಘನತೆಗೆ ಧಕ್ಕೆ ಆಗಿದೆ ಅಂತ ನಿರ್ದೇಶಕರಿಗೆ ಹೇಳಿದೆ’ ಎಂದಿದ್ದಾರೆ ನೋರಾ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಸಿನಿಮಾದ ಹಾಡಿನ ಅಶ್ಲೀಲತೆಗೆ ಕಂಗನಾ ರಣಾವತ್ ಆಕ್ರೋಶ

‘ನನ್ನಂಥ ಕಲಾವಿದರಿಗೆ ಹೆಚ್ಚಿನ ಶಕ್ತಿ ಇರುವುದಿಲ್ಲ. ಇಂಥ ಚಿತ್ರರಂಗದಲ್ಲಿ ನನ್ನ ಅಭಿಪ್ರಾಯವನ್ನು ಯಾರೂ ಕೇಳಲ್ಲ. ವಿರೋಧ ವ್ಯಕ್ತವಾದ ಬಳಿಕ ಹಾಡನ್ನು ಡಿಲೀಟ್ ಮಾಡಿದ್ದಾರೆ ಎಂಬುದು ಸಮಾಧಾನಕರ ಸಂಗತಿ. ನೀವೆಲ್ಲ ವಿರೋಧಿಸಿದಕ್ಕೆ ಧನ್ಯವಾದಗಳು. ಇಂಥ ಹಾಡು ಸರಿಯಲ್ಲ ಎನಿಸಿದರೆ ಅದನ್ನು ತಯಾರಿಸಿದ ಚಿತ್ರತಂಡವನ್ನು ಹೊಣೆಗಾರರನ್ನಾಗಿ ಮಾಡಬೇಕು. ವಿರೋಧಿಸುವಾಗ ಅವರ ಹೆಸರು ಮತ್ತು ಫೋಟೋವನ್ನೇ ಬಳಸಬೇಕು. ಆಗ ಮಾತ್ರ ಅವರಿಗೆ ಭಯ ಇರುತ್ತದೆ. ಇನ್ಮುಂದೆ ಬಹಳ ಎಚ್ಚರಿಕೆಯಿಂದ ಇರುತ್ತೇನೆ’ ಎಂದು ನೋರಾ ಫತೇಹಿ ಅವರು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ