ಆಸ್ಪತ್ರೆಗೆ ದಾಖಲಾದ ವಿಕ್ರಮ್​ ಆರೋಗ್ಯ ಸ್ಥಿತಿ ಹೇಗಿದೆ? ಮ್ಯಾನೇಜರ್ ಕಡೆಯಿಂದ ಸಿಕ್ತು ಹೆಲ್ತ್​ ಅಪ್ಡೇಟ್

ಇಂದು ಮಧ್ಯಾಹ್ನ ವಿಕ್ರಮ್​ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬೆನ್ನಲ್ಲೇ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹರಿದಾಡಿತು.

ಆಸ್ಪತ್ರೆಗೆ ದಾಖಲಾದ  ವಿಕ್ರಮ್​ ಆರೋಗ್ಯ ಸ್ಥಿತಿ ಹೇಗಿದೆ? ಮ್ಯಾನೇಜರ್ ಕಡೆಯಿಂದ ಸಿಕ್ತು ಹೆಲ್ತ್​ ಅಪ್ಡೇಟ್
ವಿಕ್ರಮ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 08, 2022 | 5:58 PM

ಹಲವು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿ ಗಮನ ಸೆಳೆದಿರುವ ತಮಿಳುಜ ನಟ ವಿಕ್ರಮ್ (Vikram) ಅವರಿಗೆ ಹಾರ್ಟ್​ ಅಟ್ಯಾಕ್ ಆಗಿದೆ ಎಂಬ ಸುದ್ದಿ ಇಂದು (ಜುಲೈ 8) ಮಧ್ಯಾಹ್ನ ಹರಿದಾಡಿತ್ತು. ಇದು ಅವರ ಫ್ಯಾನ್ಸ್​​ ವಲಯದಲ್ಲಿ ಆತಂಕ ಮೂಡಿಸಿತ್ತು. ಇದು ಸುಳ್ಳು ಸುದ್ದಿ ಆಗಿರಲಿ ಎಂದು ಅನೇಕರು ಬೇಡಿಕೊಂಡಿದ್ದರು. ಫ್ಯಾನ್ಸ್ ಪ್ರಾರ್ಥನೆ ಫಲಿಸಿದೆ. ವಿಕ್ರಮ್​ಗೆ ಹೃದಯಾಘಾತ (Heart Attack) ಆಗಿದೆ ಎಂಬುದು ಸುಳ್ಳು ಸುದ್ದಿ ಎಂದು ವಿಕ್ರಮ್ ಅವರ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಧ್ಯಾಹ್ನ ವಿಕ್ರಮ್​ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬೆನ್ನಲ್ಲೇ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹರಿದಾಡಿತು. ಇದರಿಂದ ಫ್ಯಾನ್ಸ್​ ವಲಯದಲ್ಲಿ ಆತಂಕ ಹೆಚ್ಚಿತು. ಈಗ ಮ್ಯಾನೇಜರ್ ಕಡೆಯಿಂದ ಸ್ಪಷ್ಟನೆ ಸಿಕ್ಕಿರುವುದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ
Image
Hemalatha Death: ಗುಬ್ಬಿ ವೀರಣ್ಣ ಪುತ್ರಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಹೃದಯಾಘಾತದಿಂದ ನಿಧನ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
ಎಂ.ಎಸ್ ​ಧೋನಿಯನ್ನು ಭೇಟಿಯಾದ ನಟ ಚಿಯಾನ್​ ವಿಕ್ರಮ್​; ಫೋಟೋ ನೋಡಿ ಸಂತಸಗೊಂಡ ಅಭಿಮಾನಿಗಳು

ವಿಕ್ರಮ್ ಮ್ಯಾನೇಜರ್ ಸೂರ್ಯ ನಾರಾಯಣ ಅವರು ಟ್ವಿಟರ್​ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ವಿಕ್ರಮ್​ ಅವರಿಗೆ ಚೆಸ್ಟ್ ಡಿಸ್‌ಕಂಫರ್ಟ್ ಆಗಿತ್ತು ಅಷ್ಟೇ. ಹಾರ್ಟ್​​ಅಟ್ಯಾಕ್ ಆಗಿದೆ ಅನ್ನೋದು ಸುಳ್ಳು ಸುದ್ದಿ. ಸದ್ಯ ವಿಕ್ರಮ್ ಆರೋಗ್ಯ ಸ್ಥಿರವಾಗಿದೆ. ಒಂದು ದಿನದಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ’ ಎಂದು ಸೂರ್ಯ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಹಲವು ಪ್ರಾಜೆಕ್ಟ್​ಗಳಲ್ಲಿ ವಿಕ್ರಮ್​ ಅವರು ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಪೊನ್ನಿಯಿನ್​ ಸೆಲ್ವನ್​’ ಮತ್ತು ‘ಕೋಬ್ರಾ’ ಸಿನಿಮಾಗಳು ಹೆಚ್ಚು ನಿರೀಕ್ಷೆ ಮೂಡಿಸಿವೆ. ಈಗಾಗಲೇ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರದಲ್ಲಿನ ಅವರ ಕೆಲವು ಪೋಸ್ಟರ್​ಗಳು ಸಖತ್​ ಹೈಪ್​ ಸೃಷ್ಟಿ ಮಾಡಿವೆ. ಇಂದು (ಜುಲೈ 8) ಸಂಜೆ 6 ಗಂಟೆಗೆ ಈ ಸಿನಿಮಾದ ಟೀಸರ್​​ ಲಾಂಚ್​ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಕ್ರಮ್​ ಭಾಗಿ ಆಗಬೇಕಿತ್ತು. ಆದರೆ ಅಷ್ಟರಲ್ಲೇ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ.

Published On - 4:57 pm, Fri, 8 July 22

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು