AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು.

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
TV9 Web
| Edited By: |

Updated on:Aug 20, 2021 | 3:59 PM

Share

ಬಿಗ್​ ಬಾಸ್​ ಸ್ಪರ್ಧಿ, ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಹೀಗಿರುವಾಗಲೇ ಅವರು ನಾಲ್ಕನೇ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಕಾರಣವಾಗಿದ್ದು ಒಂದು ಫೋಟೋ. ಶೂಟಿಂಗ್​ನಲ್ಲಿ ಬರುವ ಮದುವೆ ದೃಶ್ಯದ ಫೋಟೋ ಇಟ್ಟುಕೊಂಡು ವನಿತಾ ನಾಲ್ಕನೇ ಮದುವೆ ಆಗಿದ್ದಾರೆ ಎಂದು ಅನೇಕರು ಬಿಂಬಿಸಿದ್ದರು. ಇದಕ್ಕೆ ಅವರು ಈಗ ತಿರುಗೇಟು ನೀಡಿದ್ದಾರೆ.

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು. ಪೀಟರ್​ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ವನಿತಾ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು.

ಇತ್ತೀಚೆಗೆ ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವ ಫೋಟೋ ವೈರಲ್​ ಆಗಿತ್ತು. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿತ್ತು. ಸಂದರ್ಶನವೊಂದರಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ವನಿತಾ ಖಾರವಾಗಿ ಉತ್ತರಿಸಿದ್ದಾರೆ. ‘ನಾನು ನಾಲ್ಕಲ್ಲ, ನಲವತ್ತು ಬಾರಿ ಮದುವೆ ಆಗುತ್ತೇನೆ’ ಎಂದಿದ್ದಾರೆ. ನಂತರ ‘ನಾನು ಸಿಟ್ಟಲ್ಲಿ ಆ ರೀತಿ ಹೇಳಿದ್ದೇನೆ ಅಷ್ಟೆ. ಆ ರೀತಿಯ ಆಲೋಚನೆ ಇಲ್ಲ’ ಎಂದು ಅವರು ನಕ್ಕಿದ್ದಾರೆ.

ವನಿತಾ ‘ಬಿಗ್​ ಬಾಸ್​ ಜೋಡಿಗಳ್’​ ಶೋನಲ್ಲಿ ಸ್ಪರ್ಧಿಯಾಗಿದ್ದರು. ಇದರ ಜತೆಗೆ ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Published On - 3:55 pm, Fri, 20 August 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?