‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು.

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 20, 2021 | 3:59 PM

ಬಿಗ್​ ಬಾಸ್​ ಸ್ಪರ್ಧಿ, ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಹೀಗಿರುವಾಗಲೇ ಅವರು ನಾಲ್ಕನೇ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಕಾರಣವಾಗಿದ್ದು ಒಂದು ಫೋಟೋ. ಶೂಟಿಂಗ್​ನಲ್ಲಿ ಬರುವ ಮದುವೆ ದೃಶ್ಯದ ಫೋಟೋ ಇಟ್ಟುಕೊಂಡು ವನಿತಾ ನಾಲ್ಕನೇ ಮದುವೆ ಆಗಿದ್ದಾರೆ ಎಂದು ಅನೇಕರು ಬಿಂಬಿಸಿದ್ದರು. ಇದಕ್ಕೆ ಅವರು ಈಗ ತಿರುಗೇಟು ನೀಡಿದ್ದಾರೆ.

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು. ಪೀಟರ್​ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ವನಿತಾ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು.

ಇತ್ತೀಚೆಗೆ ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವ ಫೋಟೋ ವೈರಲ್​ ಆಗಿತ್ತು. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿತ್ತು. ಸಂದರ್ಶನವೊಂದರಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ವನಿತಾ ಖಾರವಾಗಿ ಉತ್ತರಿಸಿದ್ದಾರೆ. ‘ನಾನು ನಾಲ್ಕಲ್ಲ, ನಲವತ್ತು ಬಾರಿ ಮದುವೆ ಆಗುತ್ತೇನೆ’ ಎಂದಿದ್ದಾರೆ. ನಂತರ ‘ನಾನು ಸಿಟ್ಟಲ್ಲಿ ಆ ರೀತಿ ಹೇಳಿದ್ದೇನೆ ಅಷ್ಟೆ. ಆ ರೀತಿಯ ಆಲೋಚನೆ ಇಲ್ಲ’ ಎಂದು ಅವರು ನಕ್ಕಿದ್ದಾರೆ.

ವನಿತಾ ‘ಬಿಗ್​ ಬಾಸ್​ ಜೋಡಿಗಳ್’​ ಶೋನಲ್ಲಿ ಸ್ಪರ್ಧಿಯಾಗಿದ್ದರು. ಇದರ ಜತೆಗೆ ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Published On - 3:55 pm, Fri, 20 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!