AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು.

‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
‘ನಾಲ್ಕಲ್ಲ ನಲವತ್ತು ಬಾರಿ ಮದುವೆ ಆಗುತ್ತೇನೆ’; ಬಿಗ್​ ಬಾಸ್​ ಸ್ಪರ್ಧಿಯ ಖಡಕ್​ ಮಾತು
TV9 Web
| Edited By: |

Updated on:Aug 20, 2021 | 3:59 PM

Share

ಬಿಗ್​ ಬಾಸ್​ ಸ್ಪರ್ಧಿ, ನಟಿ ವನಿತಾ ವಿಜಯ್​ಕುಮಾರ್​ ಅವರು ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿ ಆಗುತ್ತಿರುತ್ತಾರೆ. ಈಗಾಗಲೇ ಅವರು ಮೂರು ಮದುವೆ ಆಗಿದ್ದು, ಮೂರೂ ಸಂಬಂಧಗಳು ಮುರಿದು ಬಿದ್ದಿವೆ. ಹೀಗಿರುವಾಗಲೇ ಅವರು ನಾಲ್ಕನೇ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಕಾರಣವಾಗಿದ್ದು ಒಂದು ಫೋಟೋ. ಶೂಟಿಂಗ್​ನಲ್ಲಿ ಬರುವ ಮದುವೆ ದೃಶ್ಯದ ಫೋಟೋ ಇಟ್ಟುಕೊಂಡು ವನಿತಾ ನಾಲ್ಕನೇ ಮದುವೆ ಆಗಿದ್ದಾರೆ ಎಂದು ಅನೇಕರು ಬಿಂಬಿಸಿದ್ದರು. ಇದಕ್ಕೆ ಅವರು ಈಗ ತಿರುಗೇಟು ನೀಡಿದ್ದಾರೆ.

ವನಿತಾ ವಿಜಯ್​ಕುಮಾರ್​ 2007ರಲ್ಲಿ ಆಕಾಶ್​ ಹಾಗೂ 2010ರಲ್ಲಿ ಆನಂದ್​ ರಾಜ್​ ಜತೆ ವಿಚ್ಛೇದನ ಪಡೆದುಕೊಂಡಿದ್ದರು. ಕಳೆದ ವರ್ಷ ಜೂನ್​ 27ರಂದು ಪೀಟರ್​ ಪೌಲ್​ ಜತೆ ಅವರು ಮದುವೆ ಆಗಿದ್ದರು. ಪೀಟರ್​ ಪೌಲ್​ಗೆ ಆಗಲೇ ವಿವಾಹ ಆಗಿತ್ತು. ಪೀಟರ್​ ಮೊದಲನೇ ಪತ್ನಿ ಜಗಳ ತೆಗೆದಿದ್ದರು. ‘ನನಗೆ ವಿಚ್ಛೇದನ ನೀಡದೇ ನನ್ನ ಪತಿ ಎರಡನೇ ಮದುವೆ ಆಗಿದ್ದಾನೆ. ಹೀಗಾಗಿ, ಆತನ ಎರಡನೇ ಮದುವೆಗೆ ಕಾನೂನಿನಲ್ಲಿ ಮನ್ನಣೆ ಇಲ್ಲ’ ಎಂದು ಅವರ ಪತ್ನಿ ವಾದಿಸಿದ್ದರು. ಪೀಟರ್​ ಹೆಚ್ಚಾಗಿ ಕುಡಿಯುತ್ತಿದ್ದ. ಕೆಲ ಸಮಯ ಇದನ್ನು ವನಿತಾ ಸಹಿಸಿಕೊಂಡರು. ಕೊನೆಗೆ ಕಳೆದ ನವೆಂಬರ್​ ತಿಂಗಳಲ್ಲಿ ಇಬ್ಬರೂ ಬೇರೆ ಆದರು. ಈ ಮೂಲಕ ವನಿತಾ ಮೂರನೇ ಸಂಬಂಧವೂ ಮುರಿದು ಬಿದ್ದಿತ್ತು.

ಇತ್ತೀಚೆಗೆ ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವ ಫೋಟೋ ವೈರಲ್​ ಆಗಿತ್ತು. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿತ್ತು. ಸಂದರ್ಶನವೊಂದರಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ವನಿತಾ ಖಾರವಾಗಿ ಉತ್ತರಿಸಿದ್ದಾರೆ. ‘ನಾನು ನಾಲ್ಕಲ್ಲ, ನಲವತ್ತು ಬಾರಿ ಮದುವೆ ಆಗುತ್ತೇನೆ’ ಎಂದಿದ್ದಾರೆ. ನಂತರ ‘ನಾನು ಸಿಟ್ಟಲ್ಲಿ ಆ ರೀತಿ ಹೇಳಿದ್ದೇನೆ ಅಷ್ಟೆ. ಆ ರೀತಿಯ ಆಲೋಚನೆ ಇಲ್ಲ’ ಎಂದು ಅವರು ನಕ್ಕಿದ್ದಾರೆ.

ವನಿತಾ ‘ಬಿಗ್​ ಬಾಸ್​ ಜೋಡಿಗಳ್’​ ಶೋನಲ್ಲಿ ಸ್ಪರ್ಧಿಯಾಗಿದ್ದರು. ಇದರ ಜತೆಗೆ ಅವರು ತಮ್ಮ ಟಿವಿ ಶೋ ಹಾಗೂ ಯೂಟ್ಯೂಬ್​ ಚಾನೆಲ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

Published On - 3:55 pm, Fri, 20 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ