ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..

ಪೂನಂ ಪಾಂಡೆ ಇವತ್ತು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಗರ್ಭಕಂಠ ಕ್ಯಾನ್ಸರ್​ನಿಂದ ಸತ್ತಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ. ಬಾಲಿವುಡ್ ತಾರೆಯರು ಪಬ್ಲಿಸಿಟಿ ಸ್ಟಂಟ್ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿರುವುದು ಇದೇ ಮೊದಲಲ್ಲ.

ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..
ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 03, 2024 | 2:17 PM

ನಟಿ- ಮಾಡೆಲ್ ಪೂನಂ ಪಾಂಡೆ (Poonam Pandey) ಅವರ ಹಠಾತ್ ಸಾವಿನ ಸುದ್ದಿ ಸಂಚಲನ ಮೂಡಿಸಿತ್ತು. ಅವರ ಸಾವಿನ ಸುದ್ದಿ ಹೊರ ಬಿದ್ದ ನಂತರ ಅನೇಕ ಪ್ರತಿಕ್ರಿಯೆಗಳು ಬಂದವು. ಗರ್ಭಕಂಠದ ಕ್ಯಾನ್ಸರ್​ನಿಂದ ಪೂನಂ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಜನರನ್ನು ಬೆಚ್ಚಿ ಬೀಳಿಸಿತ್ತು. ಹಲವರು ಇದನ್ನು ನಂಬಲಿಲ್ಲ. ಪೂನಂ ಸಾವಿನ ಸುದ್ದಿ ಸುಳ್ಳು ಎಂದು ಹಲವರು ಅನುಮಾನಿಸಿದ್ದರು. ಹಾಗೆಯೇ ಆಗಿದೆ. ಪೂನಂ ಬದುಕಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮೊದಲು ಪ್ರಚಾರಕ್ಕಾಗಿ ಸಾಕಷ್ಟು ಗಿಮಿಕ್ ಮಾಡಿದ್ದರು.

ಪೂನಂ ಪಾಂಡೆ ಇವತ್ತು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಗರ್ಭಕಂಠ ಕ್ಯಾನ್ಸರ್​ನಿಂದ ಸತ್ತಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ. ಬಾಲಿವುಡ್ ತಾರೆಯರು ಪಬ್ಲಿಸಿಟಿ ಸ್ಟಂಟ್ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂಡಸ್ಟ್ರಿಯಲ್ಲಿ ಹಲವು ಬಾರಿ ಈ ರೀತಿ ನಡೆದಿದೆ. ಇದರಲ್ಲಿ ಹಲವು ದೊಡ್ಡ ತಾರೆಯರ ಹೆಸರುಗಳಿವೆ. ಬಾಲಿವುಡ್ ತಾರೆಯರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಲು ಭಾವನೆಗಳ ಜೊತೆ ಆಟ ಆಡಿದ್ದರು. ಅಂತಹ ಅನೇಕ ಕಥೆಗಳಿವೆ.

‘ಗುಲಾಮ್‌’ ಚಿತ್ರಕ್ಕಾಗಾಗಿ ಅಮೀರ್ ಮಾಡಿದ ಸಾಹಸ ಸುದ್ದಿಯಲ್ಲಿತ್ತು

ಆಮಿರ್ ಖಾನ್ ನಟನೆಯ ‘ಗುಲಾಮ್’ ಚಿತ್ರ 1998ರಲ್ಲಿ ಬಿಡುಗಡೆಯಾಯಿತು. ಈ ಸಿನಿಮಾದಲ್ಲಿ ಆಮಿರ್ ಖಾನ್ ಮುಖ್ಯ ಭೂಮಿಕೆಯಲ್ಲಿದ್ದರು. ಶೂಟಿಂಗ್ ವೇಳೆ ಅಮೀರ್ ಖಾನ್ ಆ್ಯಕ್ಷನ್ ಸ್ಟಂಟ್ ಮಾಡುವಾಗ ಸಾವಿನ ದವಡೆಯಿಂದ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಪ್ರೇಕ್ಷಕರಿಗೆ ತಲುಪಿದಾಗ, ಜನರು ತುಂಬಾ ಆತಂಕಕ್ಕೊಳಗಾಗಿದ್ದರು. ಆದರೆ, ಚಿತ್ರ ಬಿಡುಗಡೆಯಾದ ನಂತರ ಇದು ವದಂತಿ ಎಂದು ಸಾಬೀತಾಯಿತು. ಇದು ಕೇವಲ ಪ್ರಚಾರದ ಸ್ಟಂಟ್ ಆಗಿತ್ತು.

ಮಲೈಕಾ ಅರೋರಾ ಕೂಡ ಫೇಕ್ ನ್ಯೂಸ್​ನಿಂದಾಗಿ ಸುದ್ದಿಯಲ್ಲಿದ್ದರು

ಕೆಲ ಸಮಯದ ಹಿಂದೆ ನಟಿ ಮಲೈಕಾ ಅರೋರಾ ಗರ್ಭಿಣಿ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯಿಂದ ಎಲ್ಲರೂ ಶಾಕ್ ಆಗಿದ್ದರು. ಆದರೆ ನಂತರ, ಮಲೈಕಾ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ್ದರು. ಪ್ರೆಗ್ನೆಂಟ್ ಸುದ್ದಿಯು ಅವರ ಕಾರ್ಯಕ್ರಮವನ್ನು ಪ್ರಚಾರ ಮಾಡಲು ಬಳಸಿಕೊಂಡಿದ್ದರು. ಆದರೆ ಇದಕ್ಕೆ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು.

ಇದನ್ನೂ ಓದಿ: ‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

ವಿದ್ಯಾ ಬಾಲನ್ ಬೀದಿಯಲ್ಲಿ ಭಿಕ್ಷೆ ಬೇಡಿದಾಗ

‘ಬಾಬಿ ಜಾಸೂಸ್’ ಚಿತ್ರದ ಪ್ರಚಾರದ ಸಮಯದಲ್ಲಿ ನಟಿ ವಿದ್ಯಾ ಬಾಲನ್ ತಮ್ಮ ಚಿತ್ರದ ಪ್ರಚಾರಕ್ಕಾಗಿ ವಿಭಿನ್ನ ಮಾರ್ಗವನ್ನು ಕಂಡುಕೊಂಡರು. ಆಗ ನಟಿ ಹೈದರಾಬಾದ್‌ನ ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದರು. ಇದು ಪಬ್ಲಿಸಿಟಿ ಸ್ಟಂಟ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ದರ್ಶನ್​ಗಾಗಿ ಜೈಲು ಅಧಿಕಾರಿಗಳ ಕರ್ತವ್ಯ ಲೋಪ; ಗೃಹ ಸಚಿವರಿಗೆ ಪ್ರಶ್ನೆಯ ಮಳೆ
ದರ್ಶನ್​ಗಾಗಿ ಜೈಲು ಅಧಿಕಾರಿಗಳ ಕರ್ತವ್ಯ ಲೋಪ; ಗೃಹ ಸಚಿವರಿಗೆ ಪ್ರಶ್ನೆಯ ಮಳೆ
ಬಡವರ ಬಗ್ಗೆ ಮಾತಾಡುವ ನೈತಿಕತೆ ಪ್ರಲ್ಹಾದ್ ಜೋಶಿಗಿಲ್ಲ: ಸಿದ್ದರಾಮಯ್ಯ
ಬಡವರ ಬಗ್ಗೆ ಮಾತಾಡುವ ನೈತಿಕತೆ ಪ್ರಲ್ಹಾದ್ ಜೋಶಿಗಿಲ್ಲ: ಸಿದ್ದರಾಮಯ್ಯ
ಜೈಲೊಳಗಿನ ಅವ್ಯವಹಾರಗಳಲ್ಲಿ ಉನ್ನತಾಧಿಕಾರಿಗಳು ಶಾಮೀಲು: ಆನೇಕಲ್ ನಿವಾಸಿ
ಜೈಲೊಳಗಿನ ಅವ್ಯವಹಾರಗಳಲ್ಲಿ ಉನ್ನತಾಧಿಕಾರಿಗಳು ಶಾಮೀಲು: ಆನೇಕಲ್ ನಿವಾಸಿ
ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು
ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಪರಾಧ ಹೆಚ್ಚಿವೆ: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಪರಾಧ ಹೆಚ್ಚಿವೆ: ಆರ್ ಅಶೋಕ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್