AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..

ಪೂನಂ ಪಾಂಡೆ ಇವತ್ತು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಗರ್ಭಕಂಠ ಕ್ಯಾನ್ಸರ್​ನಿಂದ ಸತ್ತಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ. ಬಾಲಿವುಡ್ ತಾರೆಯರು ಪಬ್ಲಿಸಿಟಿ ಸ್ಟಂಟ್ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿರುವುದು ಇದೇ ಮೊದಲಲ್ಲ.

ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..
ಪೂನಂ ಪಾಂಡೆ ಮಾತ್ರವಲ್ಲ ಬಾಲಿವುಡ್‌ನ ಈ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಹೀಗೆಲ್ಲ ಮಾಡಿದ್ದರು..
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 03, 2024 | 2:17 PM

Share

ನಟಿ- ಮಾಡೆಲ್ ಪೂನಂ ಪಾಂಡೆ (Poonam Pandey) ಅವರ ಹಠಾತ್ ಸಾವಿನ ಸುದ್ದಿ ಸಂಚಲನ ಮೂಡಿಸಿತ್ತು. ಅವರ ಸಾವಿನ ಸುದ್ದಿ ಹೊರ ಬಿದ್ದ ನಂತರ ಅನೇಕ ಪ್ರತಿಕ್ರಿಯೆಗಳು ಬಂದವು. ಗರ್ಭಕಂಠದ ಕ್ಯಾನ್ಸರ್​ನಿಂದ ಪೂನಂ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಜನರನ್ನು ಬೆಚ್ಚಿ ಬೀಳಿಸಿತ್ತು. ಹಲವರು ಇದನ್ನು ನಂಬಲಿಲ್ಲ. ಪೂನಂ ಸಾವಿನ ಸುದ್ದಿ ಸುಳ್ಳು ಎಂದು ಹಲವರು ಅನುಮಾನಿಸಿದ್ದರು. ಹಾಗೆಯೇ ಆಗಿದೆ. ಪೂನಂ ಬದುಕಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮೊದಲು ಪ್ರಚಾರಕ್ಕಾಗಿ ಸಾಕಷ್ಟು ಗಿಮಿಕ್ ಮಾಡಿದ್ದರು.

ಪೂನಂ ಪಾಂಡೆ ಇವತ್ತು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಗರ್ಭಕಂಠ ಕ್ಯಾನ್ಸರ್​ನಿಂದ ಸತ್ತಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ. ಬಾಲಿವುಡ್ ತಾರೆಯರು ಪಬ್ಲಿಸಿಟಿ ಸ್ಟಂಟ್ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂಡಸ್ಟ್ರಿಯಲ್ಲಿ ಹಲವು ಬಾರಿ ಈ ರೀತಿ ನಡೆದಿದೆ. ಇದರಲ್ಲಿ ಹಲವು ದೊಡ್ಡ ತಾರೆಯರ ಹೆಸರುಗಳಿವೆ. ಬಾಲಿವುಡ್ ತಾರೆಯರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಲು ಭಾವನೆಗಳ ಜೊತೆ ಆಟ ಆಡಿದ್ದರು. ಅಂತಹ ಅನೇಕ ಕಥೆಗಳಿವೆ.

‘ಗುಲಾಮ್‌’ ಚಿತ್ರಕ್ಕಾಗಾಗಿ ಅಮೀರ್ ಮಾಡಿದ ಸಾಹಸ ಸುದ್ದಿಯಲ್ಲಿತ್ತು

ಆಮಿರ್ ಖಾನ್ ನಟನೆಯ ‘ಗುಲಾಮ್’ ಚಿತ್ರ 1998ರಲ್ಲಿ ಬಿಡುಗಡೆಯಾಯಿತು. ಈ ಸಿನಿಮಾದಲ್ಲಿ ಆಮಿರ್ ಖಾನ್ ಮುಖ್ಯ ಭೂಮಿಕೆಯಲ್ಲಿದ್ದರು. ಶೂಟಿಂಗ್ ವೇಳೆ ಅಮೀರ್ ಖಾನ್ ಆ್ಯಕ್ಷನ್ ಸ್ಟಂಟ್ ಮಾಡುವಾಗ ಸಾವಿನ ದವಡೆಯಿಂದ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಪ್ರೇಕ್ಷಕರಿಗೆ ತಲುಪಿದಾಗ, ಜನರು ತುಂಬಾ ಆತಂಕಕ್ಕೊಳಗಾಗಿದ್ದರು. ಆದರೆ, ಚಿತ್ರ ಬಿಡುಗಡೆಯಾದ ನಂತರ ಇದು ವದಂತಿ ಎಂದು ಸಾಬೀತಾಯಿತು. ಇದು ಕೇವಲ ಪ್ರಚಾರದ ಸ್ಟಂಟ್ ಆಗಿತ್ತು.

ಮಲೈಕಾ ಅರೋರಾ ಕೂಡ ಫೇಕ್ ನ್ಯೂಸ್​ನಿಂದಾಗಿ ಸುದ್ದಿಯಲ್ಲಿದ್ದರು

ಕೆಲ ಸಮಯದ ಹಿಂದೆ ನಟಿ ಮಲೈಕಾ ಅರೋರಾ ಗರ್ಭಿಣಿ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯಿಂದ ಎಲ್ಲರೂ ಶಾಕ್ ಆಗಿದ್ದರು. ಆದರೆ ನಂತರ, ಮಲೈಕಾ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ್ದರು. ಪ್ರೆಗ್ನೆಂಟ್ ಸುದ್ದಿಯು ಅವರ ಕಾರ್ಯಕ್ರಮವನ್ನು ಪ್ರಚಾರ ಮಾಡಲು ಬಳಸಿಕೊಂಡಿದ್ದರು. ಆದರೆ ಇದಕ್ಕೆ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು.

ಇದನ್ನೂ ಓದಿ: ‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

ವಿದ್ಯಾ ಬಾಲನ್ ಬೀದಿಯಲ್ಲಿ ಭಿಕ್ಷೆ ಬೇಡಿದಾಗ

‘ಬಾಬಿ ಜಾಸೂಸ್’ ಚಿತ್ರದ ಪ್ರಚಾರದ ಸಮಯದಲ್ಲಿ ನಟಿ ವಿದ್ಯಾ ಬಾಲನ್ ತಮ್ಮ ಚಿತ್ರದ ಪ್ರಚಾರಕ್ಕಾಗಿ ವಿಭಿನ್ನ ಮಾರ್ಗವನ್ನು ಕಂಡುಕೊಂಡರು. ಆಗ ನಟಿ ಹೈದರಾಬಾದ್‌ನ ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದರು. ಇದು ಪಬ್ಲಿಸಿಟಿ ಸ್ಟಂಟ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು