AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 3’ ಇಲ್ಲ, ಅಲ್ಲು ಅರ್ಜುನ್ ಬದಲು ಬೇರೊಬ್ಬ ಸ್ಟಾರ್ ಜೊತೆ ಕೈ ಜೋಡಿಸಿದ ಸುಕುಮಾರ್

Ram Charan-Sukumar: ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ‘ಪುಷ್ಪ 3’ ಸಿನಿಮಾ ಬರಲಿದೆ ಎಂಬ ಸುಳಿವನ್ನು ‘ಪುಷ್ಪ 2’ನಲ್ಲಿ ನೀಡಲಾಗಿತ್ತು. ಅಭಿಮಾನಿಗಳು ಸಹ ‘ಪುಷ್ಪ 3’ ನಿರೀಕ್ಷೆಯಲ್ಲಿದ್ದರು ಆದರೆ ‘ಪುಷ್ಪ 3’ ಸಿನಿಮಾ ಬರುತ್ತಿಲ್ಲ ಬದಲಿಗೆ ಸುಕುಮಾರ್ ತೆಲುಗಿನ ಮತ್ತೊಬ್ಬ ಸ್ಟಾರ್ ನಟನ ಜೊತೆಗೆ ಕೈಜೋಡಿಸಿದ್ದಾರೆ.

‘ಪುಷ್ಪ 3’ ಇಲ್ಲ, ಅಲ್ಲು ಅರ್ಜುನ್ ಬದಲು ಬೇರೊಬ್ಬ ಸ್ಟಾರ್ ಜೊತೆ ಕೈ ಜೋಡಿಸಿದ ಸುಕುಮಾರ್
Sukumar
ಮಂಜುನಾಥ ಸಿ.
|

Updated on: Oct 17, 2025 | 8:51 AM

Share

ಪುಷ್ಪ 2’ (Pushpa 2) ಸಿನಿಮಾ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಸುಕುಮಾರ್ ನಿರ್ದೇಶಿಸಿದ್ದ ಈ ಸಿನಿಮಾ ಗಳಿಕೆಯಲ್ಲಿ ಹೊಸ ದಾಖಲೆಗಳನ್ನು ಬರೆಯಿತು. ಅತಿ ಹೆಚ್ಚು ಗಳಿಕೆ ಮಾಡಿದ ಭಾರತದ ಸಿನಿಮಾಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ‘ಪುಷ್ಪ 2’. ಈ ಸಿನಿಮಾದ ಅಂತ್ಯದಲ್ಲಿ ‘ಪುಷ್ಪ 3’ ಸಹ ಬರುವುದಾಗಿ ಸುಳಿವನ್ನು ಸುಕುಮಾರ್ ನೀಡಿದ್ದರು. ‘ಪುಷ್ಪ 3’ ಸಿನಿಮಾದ ಒನ್​​ಲೈನರ್ ರೆಡಿ ಇದೆ ಎಂದು ಸಹ ಸುಕುಮಾರ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ ಈಗ ಸುಕುಮಾರ್ ಹಠಾತ್ತನೆ ‘ಪುಷ್ಪ 3’ ಸಿನಿಮಾ ಪ್ರಾಜೆಕ್ಟ್​​ ಅನ್ನು ಕೈಬಿಟ್ಟಿದ್ದಾರೆ.

‘ಪುಷ್ಪ’ ಸಿನಿಮಾ ಮುಗಿದ ಬಳಿಕ ಸುಕುಮಾರ್ ಅವರು ‘ಪುಷ್ಪ 2’ ಸಿನಿಮಾ ಪ್ರಾರಂಭ ಮಾಡಿದರು. ಅದು ಮುಗಿದ ಕೂಡಲೇ ‘ಪುಷ್ಪ 3’ ಸಿನಿಮಾ ಪ್ರಾರಂಭಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸುಕುಮಾರ್ ಅವರು ಇದೀಗ ಬೇರೆ ನಟನ ಜೊತೆ ಕೈಜೋಡಿಸಲು ಮುಂದಾಗಿದ್ದು ಬೇರೊಂದು ಸಿನಿಮಾಕ್ಕಾಗಿ ಚಿತ್ರಕತೆ ತಯಾರಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಿನಿಮಾದ ಬಗ್ಗೆ ಸ್ವತಃ ನಿರ್ಮಾಪಕರು ಅಧಿಕೃತವಾಗಿ ಮಾತನಾಡಿದ್ದಾರೆ.

ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಸುಕುಮಾರ್ ಅವರ ಪ್ರಥಮ ಶಿಷ್ಯ ಬುಚ್ಚಿಬಾಬು ಸನಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಮೈತ್ರಿ ಮೂವಿ ಮೇಕರ್ಸ್. ‘ಪೆದ್ದಿ’ ಸಿನಿಮಾ ಮಾರ್ಚ್, 2026 ರಲ್ಲಿ ಬಿಡುಗಡೆ ಆಗಲಿದೆ. ‘ಪೆದ್ದಿ’ ಸಿನಿಮಾದ ಶೂಟಿಂಗ್ ಪೂರ್ತಿ ಆಗುತ್ತಿದ್ದಂತೆ ರಾಮ್ ಚರಣ್, ಸುಕುಮಾರ್ ಜೊತೆಗಿನ ಸಿನಿಮಾ ಪ್ರಾರಂಭ ಮಾಡಲಿದ್ದಾರೆ.

ಇದನ್ನೂ ಓದಿ:40ನೇ ವರ್ಷದ ಜನ್ಮದಿನ ಆಚರಿಸಿಕೊಂಡ ಅಲ್ಲು ಅರ್ಜುನ್ ಪತ್ನಿ

ಮೈತ್ರಿ ಮೂವಿ ಮೇಕರ್ಸ್​​ನವರೇ ಸುಕುಮಾರ್-ರಾಮ್ ಚರಣ್ ಸಿನಿಮಾಕ್ಕೂ ಬಂಡವಾಳ ಹೂಡುತ್ತಿದ್ದು, ಈ ಬಗ್ಗೆ ಅವರೇ ಖಾತ್ರಿ ಪಡಿಸಿದ್ದಾರೆ. ಸದ್ಯಕ್ಕೆ ಸುಕುಮಾರ್ ದುಬೈನಲ್ಲಿದ್ದು ರಾಮ್ ಚರಣ್ ಸಿನಿಮಾಕ್ಕೆ ಚಿತ್ರಕತೆ ಸಿದ್ಧಪಡಿಸುತ್ತಿದ್ದಾರೆ. ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಸುಕುಮಾರ್ ಸಿನಿಮಾ ಚಿತ್ರೀಕರಣ ಪ್ರಾರಂಭ ಆಗಲಿದೆ ಎಂದು ಮೈತ್ರಿ ಮೂವಿ ಮೇಕರ್ಸ್​​ನ ನಿರ್ಮಾಪಕರು ತಿಳಿಸಿದ್ದಾರೆ. ಇದೊಂದು ಭಾರಿ ಬಜೆಟ್ ಸಿನಿಮಾ ಆಗಿದ್ದು ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ನಿರ್ಮಾಣ ಆಗಲಿದೆ.

ಅಸಲಿಗೆ ಸುಕುಮಾರ್ ಹಾಗೂ ರಾಮ್ ಚರಣ್ ಒಟ್ಟಿಗೆ ಕೆಲಸ ಮಾಡುತ್ತಿರುವ ಎರಡನೇ ಸಿನಿಮಾ ಇದು. ಈ ಮೊದಲು ‘ರಂಗಸ್ಥಲಂ’ ಸಿನಿಮಾನಲ್ಲಿ ಈ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಸಿನಿಮಾನಲ್ಲಿ ಕಿವುಡನ ಪಾತ್ರದಲ್ಲಿ ಮಿಂಚಿದ್ದರು ರಾಮ್ ಚರಣ್. ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಈಗ ಮತ್ತೊಮ್ಮೆ ರಾಮ್ ಚರಣ್ ಮತ್ತು ಸುಕುಮಾರ್ ಅದೇ ಮ್ಯಾಜಿಕ್ ಪುನರಾವರ್ತನೆ ಮಾಡುತ್ತಾರೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್