ಸಂಭಾವನೆ ಬೇಡ, ಪಾಲು ಕೊಡಿ: ಅಟ್ಲಿ ಷರತ್ತಿಗೆ ಅಲ್ಲು ಅರ್ಜುನ್​ ಒಪ್ಪುತ್ತಾರಾ?

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಅಭಿನಯಿಸಲಿರುವ ಮುಂದಿನ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಸೃಷ್ಟಿ ಆಗಲಿದೆ. ಅದಕ್ಕೆ ತಕ್ಕಂತೆ ಸಿನಿಮಾ ಮಾಡುವಾಗ ಡೈರೆಕ್ಟರ್​ ಮೇಲೆ ಜವಾಬ್ದಾರಿ ಹೆಚ್ಚಿರುತ್ತದೆ. ಹಾಗಾಗಿ ನಿರ್ದೇಶಕ ಅಟ್ಲಿ ಅವರು ಸಂಭಾವನೆ ಬದಲು, ಸಿನಿಮಾದಿಂದ ಬರುವ ಲಾಭದಲ್ಲಿ ಪಾಲು ಪಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಭಾವನೆ ಬೇಡ, ಪಾಲು ಕೊಡಿ: ಅಟ್ಲಿ ಷರತ್ತಿಗೆ ಅಲ್ಲು ಅರ್ಜುನ್​ ಒಪ್ಪುತ್ತಾರಾ?
ಅಲ್ಲು ಅರ್ಜುನ್​, ಅಟ್ಲಿ

Updated on: Mar 31, 2024 | 8:51 PM

ಕಾಲಿವುಡ್​ ನಿರ್ದೇಶಕ ಅಟ್ಲಿ (Atlee) ಅವರು ಈಗ ಕೇವಲ ದಕ್ಷಿಣ ಭಾರತಕ್ಕೆ ಸೀಮಿತವಾಗಿ ಉಳಿದುಕೊಂಡಿಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ. ಶಾರುಖ್​ ಖಾನ್​ ಜೊತೆ ‘ಜವಾನ್​’ ಸಿನಿಮಾ ಮಾಡಿ ಅವರು ದೊಡ್ಡ ಗೆಲುವು ಕಂಡರು. ಆ ಬಳಿಕ ಅವರಿಗೆ ಇರುವ ಬೇಡಿಕೆ ಹತ್ತು ಪಟ್ಟ ಅಧಿಕ ಆಗಿದೆ. ಆ ಬೇಡಿಕೆಗೆ ತಕ್ಕಂತೆಯೇ ಅವರ ಸಂಭಾವನೆ (Atlee Remuneration) ಕೂಡ ಹೆಚ್ಚಾಗಿದೆ. ಆದರೆ ಸಂಭಾವನೆ ಬದಲು ಲಾಭದಲ್ಲಿ ಪಾಲು ಕೇಳಲು ಅಟ್ಲಿ ನಿರ್ಧರಿಸಿದ್ದಾರೆ ಎಂದು ಸುದ್ದಿ ಆಗಿದೆ. ಅಲ್ಲು ಅರ್ಜುನ್​ (Allu Arjun) ಜೊತೆಗಿನ ಸಿನಿಮಾಗೆ ಅವರು ಸಂಬಳದ ಬದಲು ಪಾಲು ಕೇಳುತ್ತಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ.

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ನಂತರ ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಅಷ್ಟರಲ್ಲಾಗಲೇ ನಿರ್ದೇಶಕರ ಸಂಭಾವನೆ ಬಗ್ಗೆ ಟಾಲಿವುಡ್​ ಅಂಗಳಲ್ಲಿ ಗುಸುಗುಸು ಕೇಳಿಬರಲು ಆರಂಭಿಸಿದೆ.

ಇದನ್ನೂ ಓದಿ: ಹೈದರಾಬಾದ್​ ಪೊಲೀಸರಿಂದ ಅಲ್ಲು ಅರ್ಜುನ್​ ಬಂಧನವಾಯ್ತಾ? ಇಲ್ಲಿದೆ ನೋಡಿ ಅಸಲಿ ವಿಚಾರ

‘ಪುಷ್ಪ 2’ ಸಿನಿಮಾ ಗೆದ್ದರೆ ಅಲ್ಲು ಅರ್ಜುನ್​ ಅವರ ಮುಂದಿನ ಸಿನಿಮಾ ಮೇಲೆ ಇನ್ನೂ ಹೆಚ್ಚಿನ ನಿರೀಕ್ಷೆ ಸೃಷ್ಟಿಯಾಗಲಿದೆ. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮಾಡಬೇಕು ಎಂದರೆ ನಿರ್ದೇಶಕರ ಮೇಲೆ ಜವಾಬ್ದಾರಿ ಜಾಸ್ತಿ ಇರುತ್ತದೆ. ಹಾಗಾಗಿ ಅಟ್ಲಿ ಅವರು ಸಂಬಳದ ಬದಲು ಬರುವ ಲಾಭದಲ್ಲಿ ಪಾಲು ಪಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಷರತ್ತಿಗೆ ಅಲ್ಲು ಅರ್ಜುನ್​ ಅವರು ಒಪ್ಪುತ್ತಾರೋ ಅಥವಾ ಇಲ್ಲವೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ದುಬೈನಲ್ಲಿ ತಮ್ಮದೇ ಮೇಣದ ಪ್ರತಿಮೆ ಅನಾವರಣ ಮಾಡಿದ ‘ಪುಷ್ಪ 2’ ನಟ ಅಲ್ಲು ಅರ್ಜುನ್​

ಸಾಮಾಜಿಕ ಸಂದೇಶ ಸಾರುವಂತಹ ಮಾಸ್​ ಸಿನಿಮಾಗಳನ್ನು ಮಾಡುವ ಮೂಲಕ ಅಟ್ಲಿ ಅವರು ಫೇಮಸ್​ ಆಗಿದ್ದಾರೆ. ಕಾಲಿವುಡ್​ನಲ್ಲಿ ಅವರು ದಳಪತಿ ವಿಜಯ್​ ಜೊತೆ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅಟ್ಲಿ ಮತ್ತು ಶಾರುಖ್​ ಖಾನ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ‘ಜವಾನ್​’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಮಾಯಿ ಮಾಡಿತು. ಆ ಬಳಿಕ ಅಟ್ಲಿ ಅವರು ಪ್ಯಾನ್​ ಇಂಡಿಯಾ ನಿರ್ದೇಶಕನಾಗಿ ಮಿಂಚಲು ಆರಂಭಿಸಿದರು. ಅವರ ಮುಂದಿನ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us