AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ‘ಪುಷ್ಪ 2’ ಚಿತ್ರದಲ್ಲಿ ಐಟಂ ಡ್ಯಾನ್ಸ್​ ಮಾಡೋದು ಯಾರು? ಸಮಂತಾ ಬದಲು ಬೇರೆ ನಟಿಗೆ ಚಿತ್ರತಂಡ ಮಣೆ

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ದೊಡ್ಡ ಮಟ್ಟದಲ್ಲಿಯೇ ‘ಪುಷ್ಪ 2’ ಚಿತ್ರವನ್ನು ನಿರ್ಮಿಸಲಾಗುತ್ತಿದೆ.

Pushpa 2: ‘ಪುಷ್ಪ 2’ ಚಿತ್ರದಲ್ಲಿ ಐಟಂ ಡ್ಯಾನ್ಸ್​ ಮಾಡೋದು ಯಾರು? ಸಮಂತಾ ಬದಲು ಬೇರೆ ನಟಿಗೆ ಚಿತ್ರತಂಡ ಮಣೆ
ಸಮಂತಾ
TV9 Web
| Edited By: |

Updated on: Sep 29, 2022 | 7:30 AM

Share

ಸುಕುಮಾರ್​ ನಿರ್ದೇಶನದ ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಯಿತು. ಆ ಸಿನಿಮಾದ ಗೆಲುವಿನಲ್ಲಿ ಹಾಡುಗಳಿಗೂ ಹೆಚ್ಚಿನ ಕ್ರಿಡಿಟ್​ ಸಲ್ಲಬೇಕು. ಅದರಲ್ಲೂ ಸಮಂತಾ ರುತ್​ ಪ್ರಭು (Samantha) ನಟಿಸಿದ್ದ ‘ಹೂ ಅಂತಿಯಾ ಮಾವ.. ಊಹೂ ಅಂತಿಯಾ ಮಾವ..’ ಹಾಡು ಸಿಕ್ಕಾಪಟ್ಟೆ ಧೂಳೆಬ್ಬಿಸಿತು. ಯೂಟ್ಯೂಬ್​ನಲ್ಲಿ ಈ ಗೀತೆ ಹಲವು ದಾಖಲೆಗಳನ್ನು ಬರೆದಿದೆ. ಅಲ್ಲು ಅರ್ಜುನ್​ ಮತ್ತು ಸಮಂತಾ ಅವರು ಕುಣಿದ ರೀತಿಗೆ ಅಭಿಮಾನಿಗಳು ಫಿದಾ ಆಗಿದ್ದು ಗೊತ್ತೇ ಇದೆ. ಈಗ ‘ಪುಷ್ಪ 2’ (Pushpa 2) ಸಿನಿಮಾ ಸೆಟ್ಟೇರಿದೆ. ಈ ಸೀಕ್ವೆಲ್​ನಲ್ಲಿಯೂ ಒಂದು ಭರ್ಜರಿಯಾದ ಐಟಂ ಸಾಂಗ್ ಇರುವುದು ಖಚಿತ. ಆದರೆ ಅದರಲ್ಲಿ ನಟಿಸುವುದು ಯಾರು ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿದೆ. ಸಮಂತಾ ಬದಲು ಕಾಜಲ್​ ಅಗರ್​ವಾಲ್​ (Kajal Aggarwal) ಅವರ ಹೆಸರು ಜಾಲ್ತಿಗೆ ಬಂದಿದೆ.

‘ಪುಷ್ಪ 2’ ಸಿನಿಮಾದಲ್ಲಿ ಯಾರು ಐಟಂ ಡ್ಯಾನ್ಸ್​ ಮಾಡುತ್ತಾರೆ ಎಂಬ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಗಾಸಿಪ್​ ಮಂದಿ ಮಾತ್ರ ಕಾಜಲ್​ ಅಗರ್​ವಾಲ್​ ಕಡೆಗೆ ಕೈ ತೋರಿಸುತ್ತಿದ್ದಾರೆ. ಮೊದಲ ಮಗುವಿಗೆ ಜನ್ಮ ನೀಡಿರುವ ಕಾಜಲ್​ ಅವರು ಬಣ್ಣದ ಲೋಕಕ್ಕೆ ಕಮ್​ಬ್ಯಾಕ್​ ಮಾಡಲಿದ್ದಾರೆ. ಅವರಿಗೆ ‘ಪುಷ್ಪ 2’ ಚಿತ್ರತಂಡ ಆಫರ್​ ನೀಡಿದೆ ಎಂದೆಲ್ಲ ಗುಸುಗುಸು ಹರಿದಾಡುತ್ತಿದೆ.

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ದೊಡ್ಡ ಮಟ್ಟದಲ್ಲಿಯೇ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ನಿರ್ದೇಶಕ ಸುಕುಮಾರ್​ ಅವರು ಸ್ಕ್ರಿಪ್ಟ್​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ ಎಂಬ ಮಾತಿದೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ಮುಂದುವರಿದಿದ್ದಾರೆ. ರಕ್ತ ಚಂದನ ಕಳ್ಳ ಸಾಗಾಣಿಕೆಯ ಕಥೆಯಲ್ಲಿ ಮುಂದೇನಾಗುತ್ತದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾತುರರಾಗಿದ್ದಾರೆ.

ಇದನ್ನೂ ಓದಿ
Image
‘ಪುಷ್ಪ 2’ ಚಿತ್ರದಲ್ಲಿ ಅಸಲಿ ವಿಲನ್ ಯಾರು? ಅಲ್ಲು ಅರ್ಜುನ್ ಚಿತ್ರದಲ್ಲಿದೆ ದೊಡ್ಡ ಟ್ವಿಸ್ಟ್
Image
‘ಪುಷ್ಪ 2’ ಚಿತ್ರದ ಮುಹೂರ್ತಕ್ಕೆ ಗೈರಾದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ; ಕಾರಣ ಏನು?
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಅಕ್ಟೋಬರ್​ 1ರಂದು ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ಮಾಪಕರಿಂದ ಅಧಿಕೃತ ಹೇಳಿಕೆ ಪ್ರಕಟ ಆಗಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಅನುಮಾನ ಮೂಡಿದೆ. ಚಿತ್ರದ ಶೂಟಿಂಗ್​ ಮತ್ತೆ ಮುಂದೂಡಿಕೆ ಆಗಿರಬಹುದೇ ಎಂದು ಫ್ಯಾನ್ಸ್​ ಪ್ರಶ್ನಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಬದಲಾಗಲಿದೆ ಎಂಬ ಸುದ್ದಿ ಕೂಡ ಇದೆ.

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮಾತ್ರವಲ್ಲದೇ ಡಾಲಿ ಧನಂಜಯ್​, ಫಹಾದ್ ಫಾಸಿಲ್​ ಮುಂತಾದ ಘಟಾನುಘಟಿ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಆ ಕಾರಣದಿಂದಲೂ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ