Jr. NTR: ಅಂತೂ ಇಂತೂ NTR30 ಚಿತ್ರಕ್ಕೆ ಶುರುವಾಯ್ತು ಶೂಟಿಂಗ್; ವೇದಿಕೆ ಮೇಲೆ ಅಪರೂಪದ ಸಮಾಗಮ

ಕೊನೆಗೂ NTR30 ಸಿನಿಮಾ ಸೆಟ್ಟೇರಿದೆ. ಇಂದು (ಮಾರ್ಚ್​ 23) ಹೈದರಾಬಾದ್​ನಲ್ಲಿ ಸಿನಿಮಾ ಪೂಜೆ ಕಾರ್ಯಕ್ರಮ ನಡೆದಿದೆ.

Jr. NTR: ಅಂತೂ ಇಂತೂ NTR30 ಚಿತ್ರಕ್ಕೆ ಶುರುವಾಯ್ತು ಶೂಟಿಂಗ್; ವೇದಿಕೆ ಮೇಲೆ ಅಪರೂಪದ ಸಮಾಗಮ
ಎನ್​ಟಿಆರ್​ 30ನೇ ಚಿತ್ರಕ್ಕೆ ಮುಹೂರ್ತ

Updated on: Mar 23, 2023 | 12:37 PM

‘ಆರ್​ಆರ್​ಆರ್​’ ಸಿನಿಮಾ (RRR Movie) ತೆರೆಕಂಡು ಮಾರ್ಚ್ 24ಕ್ಕೆ ಒಂದು ವರ್ಷ ಆಗಲಿದೆ. ಈ ಸಿನಿಮಾ ಮಾಡಿದ ಸಾಧನೆ ತುಂಬಾನೇ ದೊಡ್ಡದು. ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್ ಗೆದ್ದು ದಾಖಲೆ ಬರೆಯಿತು. ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಈ ಚಿತ್ರದ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ಈಗ ಈ ಚಿತ್ರದ ಪ್ರಮುಖರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಜೂ. ಎನ್​ಟಿಆರ್ ಅವರ 30ನೇ ಸಿನಿಮಾಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮ ಅಪರೂಪದ ಸಮಾಗಮಕ್ಕೆ ಸಾಕ್ಷಿ ಆಯಿತು. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೈದರಾಬಾದ್​ನಲ್ಲಿ ಪೂಜೆ

ಕಳೆದ ಒಂದು ವರ್ಷದಲ್ಲಿ ಜೂನಿಯರ್ ಎನ್​ಟಿಆರ್ ‘ಆರ್​ಆರ್​ಆರ್​’ ಚಿತ್ರದ ಸಕ್ಸಸ್​ನ ಎಂಜಾಯ್ ಮಾಡಿದ್ದಾರೆ. ಇದರ ಜೊತೆಗೆ ಅವರ ಕುಟುಂಬದಲ್ಲಿ ಕೆಲ ಕಹಿ ಘಟನೆ ನಡೆಯಿತು. ಈ ಕಾರಣಕ್ಕೆ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳೋಕೆ ಅವರಿಗೆ ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇತ್ತು. ಕೊನೆಗೂ ಹೊಸ ಸಿನಿಮಾ ಸೆಟ್ಟೇರಿದೆ. ಇಂದು (ಮಾರ್ಚ್​ 23) ಹೈದರಾಬಾದ್​ನಲ್ಲಿ ಸಿನಿಮಾ ಪೂಜೆ ಕಾರ್ಯಕ್ರಮ ನಡೆದಿದೆ.

ಅಪರೂಪದ ಸಮಾಗಮ

ರಾಜಮೌಳಿ, ಪ್ರಶಾಂತ್ ನೀಲ್, ಪ್ರಕಾಶ್ ರಾಜ್ ಮೊದಲಾದವರು ಈ ಕಾರ್ಯಕ್ರಮಕ್ಕೆ ಆಗಮಿಸಿದರು. ‘ಆರ್​ಆರ್​ಆರ್​’ ಚಿತ್ರದ ಮೂಲಕ ರಾಜಮೌಳಿ ಜನಪ್ರಿಯತೆ ಹೆಚ್ಚಿತು. ‘ಕೆಜಿಎಫ್ 2’ ಮೂಲಕ ಪ್ರಶಾಂತ್ ನೀಲ್ ದೊಡ್ಡ ಯಶಸ್ಸು ಪಡೆದರು. ಇಬ್ಬರ ಸಮಾಗಮ ಇಲ್ಲಿ ಆಯಿತು. ಇಬ್ಬರು ಸ್ಟಾರ್ ಡೈರೆಕ್ಟರ್​ಗಳು ಶೇಕ್​ಹ್ಯಾಂಡ್ ಮಾಡಿದರು.

ಇದನ್ನೂ ಓದಿ: NTR 30: ಮಾರ್ಚ್​ 23ರಂದು ಜೂನಿಯರ್​ ಎನ್​ಟಿಆರ್​ ಹೊಸ ಸಿನಿಮಾಗೆ ಅದ್ದೂರಿ ಮುಹೂರ್ತ

ಮುಂಬೈನಿಂದ ಬಂದ ಜಾನ್ವಿ

‘ಎನ್​ಟಿಆರ್​30’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಅವರು ಈ ಚಿತ್ರದ ಮುಹೂರ್ತಕ್ಕಾಗಿ ಮುಂಬೈನಿಂದ ಆಗಮಿಸಿದ್ದಾರೆ. ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸುತ್ತಿರೋದು ಇದೇ ಮೊದಲು. ಅವರು ಕಾರ್ಯಕ್ರಮದಲ್ಲಿ ಭಾಗಿ ಆದರು.

ಫ್ಯಾನ್ಸ್​ಗೆ ಖುಷಿ

ಜೂನಿಯರ್ ಎನ್​ಟಿಆರ್ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ಅಪ್​ಡೇಟ್ ಕೇಳುತ್ತಲೇ ಇದ್ದರು. ಕಾರ್ಯಕ್ರಮ ಒಂದರಲ್ಲಿ ವೇದಿಕೆ ಏರಿದ್ದ ಅವರಿಗೆ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಕಡೆಯಿಂದ ಇತ್ತೀಚೆಗೆ ಒತ್ತಾಯ ಬಂದಿತ್ತು. ಇದು ಅವರಿಗೆ ಸಿಟ್ಟು ತರಿಸಿತ್ತು. ‘ನೀವು ನನ್ನನ್ನು ಮತ್ತೊಮ್ಮೆ ಅಪ್‌ಡೇಟ್‌ಗಾಗಿ ಕೇಳಿದರೆ ನಾನು ಆ ಸಿನಿಮಾನ ಮಾಡುತ್ತಿಲ್ಲ ಎಂದು ಹೇಳುತ್ತೇನೆ. ನೀವು ಮತ್ತೆ ಮತ್ತೆ ಅದನ್ನೇ ಪ್ರಶ್ನಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ’ ಎಂದು ಏರು ಧ್ವನಿಯಲ್ಲೇ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 12:37 pm, Thu, 23 March 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us