AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಹೊಸ ಘಟಕ ಉದ್ಘಾಟನೆಗೆ ಆಗಮಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡುವಾಗ ಅಭಿಮಾನಿಗಳು ಜೋರಾಗಿ ಕೂಗಿದ್ದಕ್ಕೆ, ಮೌನ ವಹಿಸುವಂತೆ ಖಡಕ್ ಎಚ್ಚರಿಕೆ ನೀಡಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗೌರವ ನೀಡುವ ಬಗ್ಗೆ ಮಾತನಾಡಿದ ಜೂ. ಎನ್​ಟಿಆರ್, ಕಿಮ್ಸ್ ಜೊತೆ ತನಗಿರುವ ವೈಯಕ್ತಿಕ ನಂಟನ್ನೂ ಸ್ಮರಿಸಿದರು.

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್
ಜೂನಿಯರ್ ಎನ್​​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 09, 2026 | 7:47 AM

Share

ಟಾಲಿವುಡ್ ನಟ ಜೂನಿಯರ್ ಎನ್​​ಟಿಆರ್ (JR NTR) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳು ಇದಕ್ಕೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗುತ್ತಿದ್ದರು. ಆಗ ಜೂನಿಯರ್ ಎನ್​​ಟಿಆರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಜೂನಿಯರ್​ ಎನ್​​ಟಿಆರ್ ಕಿಮ್ಸ್ ಘಟಕ ಉದ್ಘಾಟನೆಗೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ ಎನ್​​​ಟಿಆರ್ ಅವರ ತಾತ ಎನ್​​ಟಿಆರ್ ಅವರೇ ಕಿಮ್ಸ್​​ಗೆ ಅಡಿಗಲ್ಲು ಹಾಕಿದ್ದರು. 2009ರಲ್ಲಿ ಜೂ ಎನ್​​ಟಿಆರ್ ಭಾರಿ ರಸ್ತೆ ಅಪಘಾತಕ್ಕೆ ಒಳಾಗಾದಾಗ ಅವರು ಕಿಮ್ಸ್​​ನಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಇದೇ ಕಾರಣಕ್ಕೆ ಇಂದು ಕಿಮ್ಸ್​​ನ ಹೊಸ ಘಟಕದ ಉದ್ಘಾಟನೆಗೆ ಅವರು ಆಗಮಿಸಿದ್ದರು. ಅವರನ್ನು ಅಭಿಮಾನಿಗಳು ಖುಷಿಯಿಂದ ಸ್ವಾಗತಿಸಿದರು. ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೂ ಎನ್​​ಟಿಆರ್: ಬಂದಿದ್ದೇಕೆ? ಆಡಿದ ಮಾತುಗಳೇನು?

ಮಾರ್ಚ್ 8 ಮಹಿಳಾ ದಿನಾಚರಣೆ ಆಗಿತ್ತು. ಹೀಗಾಗಿ ಆ ಬಗ್ಗೆ ಅವರು ಮಾತನಾಡಿದರು. ‘ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂದು ಪದೇ ಪದೇ ಹೇಳುವುದು ತನಗೆ ಇಷ್ಟವಿಲ್ಲ. ಪ್ರತಿಯೊಬ್ಬ ಪುರುಷನೂ ಆ ಸಂಸ್ಕೃತಿಯೊಂದಿಗೆ ಹುಟ್ಟಬೇಕು’ ಎಂದರು. ಅಲ್ಲದೆ, ತಮ್ಮ ಮಕ್ಕಳಿಗೂ ಮಹಿಳೆಯರನ್ನು ಗೌರವಿಸುವುದನ್ನು ಹೇಳಿಕೊಡೋದಾಗಿ ಹೇಳಿದರು. ಸಿನಿಮಾ ಮಾತ್ರವಲ್ಲದೆ ಹೊರಗೆಯೂ ತುಂಬಾ ಸಾಧಾರಣವಾಗಿ ವರ್ತಿಸುವ ಎನ್​​​​ಟಿಆರ್, ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ತುಂಬಾ ಚೆನ್ನಾಗಿ ಮಾತನಾಡಿದ್ದಕ್ಕಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳ ಬಗ್ಗೆಯೂ ಮಾತನಾಡಿದರು ಮತ್ತು ಮನೆಗೆ ಎಚ್ಚರಿಕೆಯಿಂದ ಹೋಗುವಂತೆ ಸಲಹೆ ನೀಡಿದರು.

View this post on Instagram

A post shared by H A R I (@harii_postings)

ಜೂನಿಯರ್ ಎನ್​​ಟಿಆರ್ ಅವರು ಮಾತು ಆರಂಭಿಸುವಾಗ ಫ್ಯಾನ್ಸ್ ಅವರ ಹೆಸರನ್ನು ಕೂಗಿದರು.. ಆಗ ಫ್ಯಾನ್ಸ್ ಜೂನಿಯರ್ ಎನ್​​ಟಿಆರ್ ಅವರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಸುಮ್ಮನಿರಿ, ಸುಮ್ಮನಿರಿ ಎಂದು ಖಡಕ್ ಎಚ್ಚರಿಕೆ ನೀಡಿದ ಬಳಿಕ ಫ್ಯಾನ್ಸ್ ಸುಮ್ಮನಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ