Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ

ಕಾಬೂಲ್​ನಿಂದ ಭಾರತಕ್ಕೆ ವಿಶೇಷ ವಿಮಾನದ ಮೂಲಕ ಅನೇಕರನ್ನು ಕರೆತರಲಾಗಿದೆ. ಈ ಪೈಕಿ ನೂಪರ್​ ಸಹೋದರಿ ಜಿಗ್ಯಾಸ ಅವರ ಗಂಡ ಇಲ್ಲ. ಇದರಿಂದ ಕುಟುಂಬದವರು ಸಾಕಷ್ಟು ಆತಂಕಗೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ
ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 29, 2021 | 6:06 PM

ಅಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ತಾಲಿಬಾನಿಗಳು ಸಾಕಷ್ಟು ಜನರನ್ನು ಹತ್ಯೆ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಹಿಂದಿ ಕಿರುತೆರೆ ನಟಿ ನೂಪುರ್​ ಅಲಂಕಾರ್​ ಕಣ್ಣೀರು ಹಾಕಿದ್ದಾರೆ. ಆಫ್ಘನ್​ನಲ್ಲಿರುವ ಭಾವ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಅವರ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

ಕಾಬೂಲ್​ನಿಂದ ಭಾರತಕ್ಕೆ ವಿಶೇಷ ವಿಮಾನದ ಮೂಲಕ ಅನೇಕರನ್ನು ಕರೆತರಲಾಗಿದೆ. ಈ ಪೈಕಿ ನೂಪರ್​ ಸಹೋದರಿ ಜಿಗ್ಯಾಸ ಅವರ ಗಂಡ ಇಲ್ಲ. ಇದರಿಂದ ಕುಟುಂಬದವರು ಸಾಕಷ್ಟು ಆತಂಕಗೊಂಡಿದ್ದಾರೆ. ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನಿಗಳ ವಶವಾದಾಗ ಒಮ್ಮೆ ಅವರು ಕರೆ ಮಾಡಿದ್ದರು. ಇದಾದ ನಂತರದಲ್ಲಿ ಜಿಗ್ಯಾಸ ಗಂಡನ ಸುಳಿವು ಸಿಗುತ್ತಿಲ್ಲ.

‘ಜಿಗ್ಯಾಸಳ​ ಪತಿ ಜತೆ ಮಾತನಾಡುವಾಗ ಏಕಾಏಕಿ ಕಾಲ್​ ಕಟ್​ ಆಗಿತ್ತು. ಮೊಬೈಲ್​ ಚಾರ್ಜ್​ ಹಾಕೋಕೆ ಸಾಧ್ಯವಾಗುತ್ತಿಲ್ಲ ಎಂದು ಆತ ಹೇಳಿದ್ದ. ತನ್ನನ್ನು ಸಂಪರ್ಕಿಸೋಕೆ ಬೇರೊಬ್ಬರ ನಂಬರ್​ ಕೊಡುತ್ತೀನಿ ಎಂದು ಹೇಳಿದ್ದ. ಆದರೆ, ಈ ವರೆಗೆ ಆತನ ಸುಳಿವಿಲ್ಲ’ ಎಂದು ಕಣ್ಣೀರು ಹಾಕಿದ್ದಾರೆ ನೂಪುರ್​.

ನೂಪುರ್​ ಅವರು ‘ಸ್ವರಗಿಣಿ’, ‘ಇಸ್​ ಪ್ಯಾರ್​ ಕೊ ಕ್ಯಾ ನಾಮ್​ ದೂ?’, ‘ಏಕ್​ ಬಾರ್ ಫಿರ್’​ ಮೊದಲಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷದ ಲಾಕ್​ಡೌನ್​ ವೇಳೆ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಆಗ ಅವರು ಚಿನ್ನದ ಸರವನ್ನು ಮಾರಾಟ ಮಾಡಿ ಹಣ ಹೊಂದಿಸಿದ್ದರು. ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಅಲ್ಲದೆ, ಸಹಾಯ ಮಾಡುವಂತೆ ಅವರು ಜನರಲ್ಲಿ ಕೋರಿದ್ದರು. ಅಕ್ಷಯ್​ ಕುಮಾರ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ನೂಪುರ್​ಗೆ ಸಹಾಯ ಮಾಡಿದ್ದರು.

ಅಪ್ಘಾನಿಸ್ತಾನ​ ಸಂಪೂರ್ಣವಾಗಿ ತಾಲಿಬಾನಿಗಳ ಕಪಿಮುಷ್ಟಿ ಸೇರಿದೆ. ಈ ಕಾರಣಕ್ಕೆ ಅನೇಕರು ದೇಶಬಿಟ್ಟು ತೆರಳುತ್ತಿದ್ದಾರೆ. ಈ ಮಧ್ಯೆ ತಾಲಿಬಾನಿಗಳು ಸಿನಿಮಾ ನಿರ್ಮಾಣದ ಮೇಲೆ ತಾಲಿಬಾನಿಗಳು ನಿರ್ಬಂಧ ಹೇರಿದ್ದಾರೆ.  ಹೀಗಾಗಿ, ಅಲ್ಲಿನ ಸಿನಿಮಾ ನಿರ್ಮಾತೃರರು ದೇಶ ಬಿಟ್ಟು ತೊರೆಯುತ್ತಿದ್ದಾರೆ. ಇತ್ತೀಚೆಗೆ ಫಿಲ್ಮ್​ ಮೇಕರ್​ ಹಾಗೂ ಫೋಟೋ ಜರ್ನಲಿಸ್ಟ್​ ರೋಯಾ ಹೈದರಿ ಅಪ್ಘಾನಿಸ್ತಾನ ತೊರೆದು ಫ್ರಾನ್ಸ್ ಸೇರಿದ್ದರು. ಅವರು ಭಾವನಾತ್ಮಕ ಪತ್ರ ಒಂದನ್ನು ಬರೆದುಕೊಂಡಿದ್ದರು.

ಇದನ್ನೂ ಓದಿ: ನಾಲ್ಕು ಕಾರ್ ಹಾಗೂ ಹೆಲಿಕಾಪ್ಟರ್​ನಲ್ಲಿ ಕೊಂಡೊಯ್ದ ಅಫ್ಘಾನಿಸ್ತಾನದ ಹಣವನ್ನು ಹಿಂತಿರುಗಿಸಿ: ಅಶ್ರಫ್ ಘನಿಗೆ ತಾಲಿಬಾನ್ ಎಚ್ಚರಿಕೆ

ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ