AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ

ಕಾಬೂಲ್​ನಿಂದ ಭಾರತಕ್ಕೆ ವಿಶೇಷ ವಿಮಾನದ ಮೂಲಕ ಅನೇಕರನ್ನು ಕರೆತರಲಾಗಿದೆ. ಈ ಪೈಕಿ ನೂಪರ್​ ಸಹೋದರಿ ಜಿಗ್ಯಾಸ ಅವರ ಗಂಡ ಇಲ್ಲ. ಇದರಿಂದ ಕುಟುಂಬದವರು ಸಾಕಷ್ಟು ಆತಂಕಗೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ
ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ
TV9 Web
| Edited By: |

Updated on: Aug 29, 2021 | 6:06 PM

Share

ಅಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ತಾಲಿಬಾನಿಗಳು ಸಾಕಷ್ಟು ಜನರನ್ನು ಹತ್ಯೆ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಹಿಂದಿ ಕಿರುತೆರೆ ನಟಿ ನೂಪುರ್​ ಅಲಂಕಾರ್​ ಕಣ್ಣೀರು ಹಾಕಿದ್ದಾರೆ. ಆಫ್ಘನ್​ನಲ್ಲಿರುವ ಭಾವ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಅವರ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

ಕಾಬೂಲ್​ನಿಂದ ಭಾರತಕ್ಕೆ ವಿಶೇಷ ವಿಮಾನದ ಮೂಲಕ ಅನೇಕರನ್ನು ಕರೆತರಲಾಗಿದೆ. ಈ ಪೈಕಿ ನೂಪರ್​ ಸಹೋದರಿ ಜಿಗ್ಯಾಸ ಅವರ ಗಂಡ ಇಲ್ಲ. ಇದರಿಂದ ಕುಟುಂಬದವರು ಸಾಕಷ್ಟು ಆತಂಕಗೊಂಡಿದ್ದಾರೆ. ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನಿಗಳ ವಶವಾದಾಗ ಒಮ್ಮೆ ಅವರು ಕರೆ ಮಾಡಿದ್ದರು. ಇದಾದ ನಂತರದಲ್ಲಿ ಜಿಗ್ಯಾಸ ಗಂಡನ ಸುಳಿವು ಸಿಗುತ್ತಿಲ್ಲ.

‘ಜಿಗ್ಯಾಸಳ​ ಪತಿ ಜತೆ ಮಾತನಾಡುವಾಗ ಏಕಾಏಕಿ ಕಾಲ್​ ಕಟ್​ ಆಗಿತ್ತು. ಮೊಬೈಲ್​ ಚಾರ್ಜ್​ ಹಾಕೋಕೆ ಸಾಧ್ಯವಾಗುತ್ತಿಲ್ಲ ಎಂದು ಆತ ಹೇಳಿದ್ದ. ತನ್ನನ್ನು ಸಂಪರ್ಕಿಸೋಕೆ ಬೇರೊಬ್ಬರ ನಂಬರ್​ ಕೊಡುತ್ತೀನಿ ಎಂದು ಹೇಳಿದ್ದ. ಆದರೆ, ಈ ವರೆಗೆ ಆತನ ಸುಳಿವಿಲ್ಲ’ ಎಂದು ಕಣ್ಣೀರು ಹಾಕಿದ್ದಾರೆ ನೂಪುರ್​.

ನೂಪುರ್​ ಅವರು ‘ಸ್ವರಗಿಣಿ’, ‘ಇಸ್​ ಪ್ಯಾರ್​ ಕೊ ಕ್ಯಾ ನಾಮ್​ ದೂ?’, ‘ಏಕ್​ ಬಾರ್ ಫಿರ್’​ ಮೊದಲಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷದ ಲಾಕ್​ಡೌನ್​ ವೇಳೆ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಆಗ ಅವರು ಚಿನ್ನದ ಸರವನ್ನು ಮಾರಾಟ ಮಾಡಿ ಹಣ ಹೊಂದಿಸಿದ್ದರು. ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಅಲ್ಲದೆ, ಸಹಾಯ ಮಾಡುವಂತೆ ಅವರು ಜನರಲ್ಲಿ ಕೋರಿದ್ದರು. ಅಕ್ಷಯ್​ ಕುಮಾರ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ನೂಪುರ್​ಗೆ ಸಹಾಯ ಮಾಡಿದ್ದರು.

ಅಪ್ಘಾನಿಸ್ತಾನ​ ಸಂಪೂರ್ಣವಾಗಿ ತಾಲಿಬಾನಿಗಳ ಕಪಿಮುಷ್ಟಿ ಸೇರಿದೆ. ಈ ಕಾರಣಕ್ಕೆ ಅನೇಕರು ದೇಶಬಿಟ್ಟು ತೆರಳುತ್ತಿದ್ದಾರೆ. ಈ ಮಧ್ಯೆ ತಾಲಿಬಾನಿಗಳು ಸಿನಿಮಾ ನಿರ್ಮಾಣದ ಮೇಲೆ ತಾಲಿಬಾನಿಗಳು ನಿರ್ಬಂಧ ಹೇರಿದ್ದಾರೆ.  ಹೀಗಾಗಿ, ಅಲ್ಲಿನ ಸಿನಿಮಾ ನಿರ್ಮಾತೃರರು ದೇಶ ಬಿಟ್ಟು ತೊರೆಯುತ್ತಿದ್ದಾರೆ. ಇತ್ತೀಚೆಗೆ ಫಿಲ್ಮ್​ ಮೇಕರ್​ ಹಾಗೂ ಫೋಟೋ ಜರ್ನಲಿಸ್ಟ್​ ರೋಯಾ ಹೈದರಿ ಅಪ್ಘಾನಿಸ್ತಾನ ತೊರೆದು ಫ್ರಾನ್ಸ್ ಸೇರಿದ್ದರು. ಅವರು ಭಾವನಾತ್ಮಕ ಪತ್ರ ಒಂದನ್ನು ಬರೆದುಕೊಂಡಿದ್ದರು.

ಇದನ್ನೂ ಓದಿ: ನಾಲ್ಕು ಕಾರ್ ಹಾಗೂ ಹೆಲಿಕಾಪ್ಟರ್​ನಲ್ಲಿ ಕೊಂಡೊಯ್ದ ಅಫ್ಘಾನಿಸ್ತಾನದ ಹಣವನ್ನು ಹಿಂತಿರುಗಿಸಿ: ಅಶ್ರಫ್ ಘನಿಗೆ ತಾಲಿಬಾನ್ ಎಚ್ಚರಿಕೆ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್