AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ
ನುಸ್ರತ್
ರಾಜೇಶ್ ದುಗ್ಗುಮನೆ
|

Updated on: May 20, 2021 | 7:34 PM

Share

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ಸೋನು ಕೆ ಟಿಟ್ಟೂ ಕಿ ಸ್ವೀಟಿ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಈಗ ಅವರು ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್ ಆಗಿದ್ದಾರೆ. ಹಾಗಂತ ನಿಜ ಜೀವನದಲ್ಲಲ್ಲ. ಅವರ ಮುಂದಿನ ಚಿತ್ರದಲ್ಲಿ ಹೀಗೊಂದು ಭಿನ್ನ ಪಾತ್ರವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ರಾಜ್​ ಶಾಂಡಿಲ್ಯ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನುಸ್ರತ್​ ಬರುಚಾ ನಟಿಸುತ್ತಿದ್ದಾರೆ. ಜನ್​​ಹಿತ್​ ಮೆ ಜಾರಿ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿದೆ. ಈ ಚಿತ್ರಕ್ಕಾಗಿ ನುಸ್ರತ್​ ಈ ಹೊಸ ಅವತಾರ ತಾಳಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಬಗ್ಗೆ ಸಿನಿಮಾ ನಿರ್ದೇಶಕ ಶಾಂಡಿಲ್ಯ ಆಂಗ್ಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ‘ಯುವತಿಯೊಬ್ಬಳು ಕೆಲಸ ಹುಡುಕಿಕೊಂಡು ನಗರಕ್ಕೆ ಬರುತ್ತಾಳೆ. ಅವಳಿಗೆ ಕಾಂಡೋಮ್ ಸೆಲ್ಸ್​ ಎಕ್ಸಿಕ್ಯೂಟಿವ್​ ಜಾಬ್​ ಸಿಗಲಿದೆ. ಪ್ರತಿ ಮೆಡಿಕಲ್​ ಸ್ಟೋರ್​ಗೆ ಹೋಗಿ ಕಾಂಡೋಮ್​ ಮಾರುವ ಕೆಲಸ ಕಥಾ ನಾಯಕಿಯದ್ದು. ಇಡೀ ಚಿತ್ರದಲ್ಲಿ ಇದುವೇ ಹೈಲೈಟ್​. ಸಿನಿಮಾ ನೋಡಿದ ಪ್ರತಿಯೊಬ್ಬರೂ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ’ ಎಂದಿದ್ದಾರೆ ಅವರು.

ಈ ಸಿನಿಮಾದ ಶೂಟಿಂಗ್ ಏಪ್ರಿಲ್​ನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೊವಿಡ್​ ಕಾರಣಕ್ಕೆ ಸಿನಿಮಾ ಶೂಟಿಂಗ್​ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೇ ಜೋರಿರುವುದರಿಂದ ಸಿನಿಮಾ ಶೂಟಿಂಗ್​ಗೆ ಅನೇಕ ರಾಜ್ಯಗಳು ತಡೆ ನೀಡಿವೆ. ಮಹಾರಾಷ್ಟ್ರ ಕೂಡ ಇದೇ ನಿಯಮ ಜಾರಿಗೆ ತಂದಿದೆ. ಹೀಗಾಗಿ, ಶೂಟಿಂಗ್​ಗೆ ಅವಕಾಶ ನೀಡಿದ ನಂತರ ಚಿತ್ರದ ಶೂಟಿಂಗ್​ ನಡೆಯಲಿದೆ.

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ನೆಟ್​ಫ್ಲಿಕ್​ ಹಾಗೂ ಅಮೆಜಾನ್​ ಪ್ರೈಂನಲ್ಲಿ ತೆರೆಕಾಣುತ್ತಿವೆ.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

 ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ