AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ
ನುಸ್ರತ್
ರಾಜೇಶ್ ದುಗ್ಗುಮನೆ
|

Updated on: May 20, 2021 | 7:34 PM

Share

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ಸೋನು ಕೆ ಟಿಟ್ಟೂ ಕಿ ಸ್ವೀಟಿ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಈಗ ಅವರು ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್ ಆಗಿದ್ದಾರೆ. ಹಾಗಂತ ನಿಜ ಜೀವನದಲ್ಲಲ್ಲ. ಅವರ ಮುಂದಿನ ಚಿತ್ರದಲ್ಲಿ ಹೀಗೊಂದು ಭಿನ್ನ ಪಾತ್ರವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ರಾಜ್​ ಶಾಂಡಿಲ್ಯ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನುಸ್ರತ್​ ಬರುಚಾ ನಟಿಸುತ್ತಿದ್ದಾರೆ. ಜನ್​​ಹಿತ್​ ಮೆ ಜಾರಿ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿದೆ. ಈ ಚಿತ್ರಕ್ಕಾಗಿ ನುಸ್ರತ್​ ಈ ಹೊಸ ಅವತಾರ ತಾಳಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಬಗ್ಗೆ ಸಿನಿಮಾ ನಿರ್ದೇಶಕ ಶಾಂಡಿಲ್ಯ ಆಂಗ್ಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ‘ಯುವತಿಯೊಬ್ಬಳು ಕೆಲಸ ಹುಡುಕಿಕೊಂಡು ನಗರಕ್ಕೆ ಬರುತ್ತಾಳೆ. ಅವಳಿಗೆ ಕಾಂಡೋಮ್ ಸೆಲ್ಸ್​ ಎಕ್ಸಿಕ್ಯೂಟಿವ್​ ಜಾಬ್​ ಸಿಗಲಿದೆ. ಪ್ರತಿ ಮೆಡಿಕಲ್​ ಸ್ಟೋರ್​ಗೆ ಹೋಗಿ ಕಾಂಡೋಮ್​ ಮಾರುವ ಕೆಲಸ ಕಥಾ ನಾಯಕಿಯದ್ದು. ಇಡೀ ಚಿತ್ರದಲ್ಲಿ ಇದುವೇ ಹೈಲೈಟ್​. ಸಿನಿಮಾ ನೋಡಿದ ಪ್ರತಿಯೊಬ್ಬರೂ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ’ ಎಂದಿದ್ದಾರೆ ಅವರು.

ಈ ಸಿನಿಮಾದ ಶೂಟಿಂಗ್ ಏಪ್ರಿಲ್​ನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೊವಿಡ್​ ಕಾರಣಕ್ಕೆ ಸಿನಿಮಾ ಶೂಟಿಂಗ್​ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೇ ಜೋರಿರುವುದರಿಂದ ಸಿನಿಮಾ ಶೂಟಿಂಗ್​ಗೆ ಅನೇಕ ರಾಜ್ಯಗಳು ತಡೆ ನೀಡಿವೆ. ಮಹಾರಾಷ್ಟ್ರ ಕೂಡ ಇದೇ ನಿಯಮ ಜಾರಿಗೆ ತಂದಿದೆ. ಹೀಗಾಗಿ, ಶೂಟಿಂಗ್​ಗೆ ಅವಕಾಶ ನೀಡಿದ ನಂತರ ಚಿತ್ರದ ಶೂಟಿಂಗ್​ ನಡೆಯಲಿದೆ.

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ನೆಟ್​ಫ್ಲಿಕ್​ ಹಾಗೂ ಅಮೆಜಾನ್​ ಪ್ರೈಂನಲ್ಲಿ ತೆರೆಕಾಣುತ್ತಿವೆ.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

 ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More