AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ
ನುಸ್ರತ್
ರಾಜೇಶ್ ದುಗ್ಗುಮನೆ
|

Updated on: May 20, 2021 | 7:34 PM

Share

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ಸೋನು ಕೆ ಟಿಟ್ಟೂ ಕಿ ಸ್ವೀಟಿ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಈಗ ಅವರು ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್ ಆಗಿದ್ದಾರೆ. ಹಾಗಂತ ನಿಜ ಜೀವನದಲ್ಲಲ್ಲ. ಅವರ ಮುಂದಿನ ಚಿತ್ರದಲ್ಲಿ ಹೀಗೊಂದು ಭಿನ್ನ ಪಾತ್ರವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ರಾಜ್​ ಶಾಂಡಿಲ್ಯ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನುಸ್ರತ್​ ಬರುಚಾ ನಟಿಸುತ್ತಿದ್ದಾರೆ. ಜನ್​​ಹಿತ್​ ಮೆ ಜಾರಿ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿದೆ. ಈ ಚಿತ್ರಕ್ಕಾಗಿ ನುಸ್ರತ್​ ಈ ಹೊಸ ಅವತಾರ ತಾಳಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಬಗ್ಗೆ ಸಿನಿಮಾ ನಿರ್ದೇಶಕ ಶಾಂಡಿಲ್ಯ ಆಂಗ್ಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ‘ಯುವತಿಯೊಬ್ಬಳು ಕೆಲಸ ಹುಡುಕಿಕೊಂಡು ನಗರಕ್ಕೆ ಬರುತ್ತಾಳೆ. ಅವಳಿಗೆ ಕಾಂಡೋಮ್ ಸೆಲ್ಸ್​ ಎಕ್ಸಿಕ್ಯೂಟಿವ್​ ಜಾಬ್​ ಸಿಗಲಿದೆ. ಪ್ರತಿ ಮೆಡಿಕಲ್​ ಸ್ಟೋರ್​ಗೆ ಹೋಗಿ ಕಾಂಡೋಮ್​ ಮಾರುವ ಕೆಲಸ ಕಥಾ ನಾಯಕಿಯದ್ದು. ಇಡೀ ಚಿತ್ರದಲ್ಲಿ ಇದುವೇ ಹೈಲೈಟ್​. ಸಿನಿಮಾ ನೋಡಿದ ಪ್ರತಿಯೊಬ್ಬರೂ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ’ ಎಂದಿದ್ದಾರೆ ಅವರು.

ಈ ಸಿನಿಮಾದ ಶೂಟಿಂಗ್ ಏಪ್ರಿಲ್​ನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೊವಿಡ್​ ಕಾರಣಕ್ಕೆ ಸಿನಿಮಾ ಶೂಟಿಂಗ್​ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೇ ಜೋರಿರುವುದರಿಂದ ಸಿನಿಮಾ ಶೂಟಿಂಗ್​ಗೆ ಅನೇಕ ರಾಜ್ಯಗಳು ತಡೆ ನೀಡಿವೆ. ಮಹಾರಾಷ್ಟ್ರ ಕೂಡ ಇದೇ ನಿಯಮ ಜಾರಿಗೆ ತಂದಿದೆ. ಹೀಗಾಗಿ, ಶೂಟಿಂಗ್​ಗೆ ಅವಕಾಶ ನೀಡಿದ ನಂತರ ಚಿತ್ರದ ಶೂಟಿಂಗ್​ ನಡೆಯಲಿದೆ.

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ನೆಟ್​ಫ್ಲಿಕ್​ ಹಾಗೂ ಅಮೆಜಾನ್​ ಪ್ರೈಂನಲ್ಲಿ ತೆರೆಕಾಣುತ್ತಿವೆ.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

 ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!