AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್​ ಆದ್ರು ಬಾಲಿವುಡ್​ ಸ್ಟಾರ್​ ನಟಿ
ನುಸ್ರತ್
ರಾಜೇಶ್ ದುಗ್ಗುಮನೆ
|

Updated on: May 20, 2021 | 7:34 PM

Share

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ಸೋನು ಕೆ ಟಿಟ್ಟೂ ಕಿ ಸ್ವೀಟಿ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಈಗ ಅವರು ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್ ಆಗಿದ್ದಾರೆ. ಹಾಗಂತ ನಿಜ ಜೀವನದಲ್ಲಲ್ಲ. ಅವರ ಮುಂದಿನ ಚಿತ್ರದಲ್ಲಿ ಹೀಗೊಂದು ಭಿನ್ನ ಪಾತ್ರವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ರಾಜ್​ ಶಾಂಡಿಲ್ಯ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನುಸ್ರತ್​ ಬರುಚಾ ನಟಿಸುತ್ತಿದ್ದಾರೆ. ಜನ್​​ಹಿತ್​ ಮೆ ಜಾರಿ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿದೆ. ಈ ಚಿತ್ರಕ್ಕಾಗಿ ನುಸ್ರತ್​ ಈ ಹೊಸ ಅವತಾರ ತಾಳಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಬಗ್ಗೆ ಸಿನಿಮಾ ನಿರ್ದೇಶಕ ಶಾಂಡಿಲ್ಯ ಆಂಗ್ಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ‘ಯುವತಿಯೊಬ್ಬಳು ಕೆಲಸ ಹುಡುಕಿಕೊಂಡು ನಗರಕ್ಕೆ ಬರುತ್ತಾಳೆ. ಅವಳಿಗೆ ಕಾಂಡೋಮ್ ಸೆಲ್ಸ್​ ಎಕ್ಸಿಕ್ಯೂಟಿವ್​ ಜಾಬ್​ ಸಿಗಲಿದೆ. ಪ್ರತಿ ಮೆಡಿಕಲ್​ ಸ್ಟೋರ್​ಗೆ ಹೋಗಿ ಕಾಂಡೋಮ್​ ಮಾರುವ ಕೆಲಸ ಕಥಾ ನಾಯಕಿಯದ್ದು. ಇಡೀ ಚಿತ್ರದಲ್ಲಿ ಇದುವೇ ಹೈಲೈಟ್​. ಸಿನಿಮಾ ನೋಡಿದ ಪ್ರತಿಯೊಬ್ಬರೂ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ’ ಎಂದಿದ್ದಾರೆ ಅವರು.

ಈ ಸಿನಿಮಾದ ಶೂಟಿಂಗ್ ಏಪ್ರಿಲ್​ನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೊವಿಡ್​ ಕಾರಣಕ್ಕೆ ಸಿನಿಮಾ ಶೂಟಿಂಗ್​ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೇ ಜೋರಿರುವುದರಿಂದ ಸಿನಿಮಾ ಶೂಟಿಂಗ್​ಗೆ ಅನೇಕ ರಾಜ್ಯಗಳು ತಡೆ ನೀಡಿವೆ. ಮಹಾರಾಷ್ಟ್ರ ಕೂಡ ಇದೇ ನಿಯಮ ಜಾರಿಗೆ ತಂದಿದೆ. ಹೀಗಾಗಿ, ಶೂಟಿಂಗ್​ಗೆ ಅವಕಾಶ ನೀಡಿದ ನಂತರ ಚಿತ್ರದ ಶೂಟಿಂಗ್​ ನಡೆಯಲಿದೆ.

ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ನೆಟ್​ಫ್ಲಿಕ್​ ಹಾಗೂ ಅಮೆಜಾನ್​ ಪ್ರೈಂನಲ್ಲಿ ತೆರೆಕಾಣುತ್ತಿವೆ.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

 ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?