AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ದಾಸ್​ಗುಪ್ತಾಗೆ ಪ್ರೀತಿಯಿಂದ ಗಂಡ ಎಂದ ನಟಿ ನುಸ್ರತ್​; ಬರ್ತ್​ಡೇ ಫೋಟೋ ವೈರಲ್​

ಯಶ್ ದಾಸ್​​ಗುಪ್ತ ಜತೆ ನುಸ್ರತ್​ ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ನುಸ್ರತ್​ ಮತ್ತು ನಿಖಿಲ್​ ಸಂಸಾರದಲ್ಲಿ ಬಿರುಗಾಳಿ ಬೀಸಲು ನಟ ಯಶ್​ ದಾಸ್​​ಗುಪ್ತ ಕಾರಣ ಎಂದು ಹೇಳಲಾಗಿತ್ತು.

ಯಶ್​ ದಾಸ್​ಗುಪ್ತಾಗೆ ಪ್ರೀತಿಯಿಂದ ಗಂಡ ಎಂದ ನಟಿ ನುಸ್ರತ್​; ಬರ್ತ್​ಡೇ ಫೋಟೋ ವೈರಲ್​
ಯಶ್​ ಮತ್ತು ನುಸ್ರತ್​
TV9 Web
| Edited By: |

Updated on: Oct 11, 2021 | 7:17 PM

Share

ಪಶ್ಚಿಮ ಬಂಗಾಳ ಟಿಎಂಸಿ ನಾಯಕಿ, ನಟಿ ನುಸ್ರತ್​ ಜಹಾನ್ ವೈಯಕ್ತಿಕ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಆಗಸ್ಟ್​​ 26ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಅವರು, ಯಶ್​ ದಾಸ್​ಗುಪ್ತ ಈ ಮಗುವಿಗೆ ತಂದೆ ಎಂದು ಹೇಳಿದ್ದರು. ಈಗ ಯಶ್​ ದಾಸ್​ಗುಪ್ತಾ ಜನ್ಮದಿನದ ಫೋಟೋಗಳನ್ನು ನುಸ್ರತ್​ ಹಂಚಿಕೊಂಡಿದ್ದು, ಅವರನ್ನು ಪತಿ ಎಂದು ಪ್ರೀತಿಯಿಂದ ಕರೆದಿದ್ದಾರೆ.

2019ರಲ್ಲಿ ನಿಖಿಲ್​ ಜೈನ್​ ಎಂಬ ಉದ್ಯಮಿಯನ್ನು ಟರ್ಕಿಯಲ್ಲಿ ಮದುವೆಯಾಗಿದ್ದರು ನುಸ್ರತ್​. ಆದರೆ ಭಾರತೀಯ ಕಾನೂನಿನ ಅನ್ವಯ ಆ ವಿವಾಹ ಮಾನ್ಯವಾಗಿಲ್ಲ ಎಂದು ನುಸ್ರತ್ ಹೇಳಿದ್ದರು. 2020ರ ನವೆಂಬರ್​​ ತಿಂಗಳಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದಾಗಿ ತಿಳಿಸಿದ್ದ ಅವರು, ನಂತರ ತಾವು ಗರ್ಭಿಣಿ ಎಂದು ಘೋಷಿಸಿದರು. ಆಗಸ್ಟ್​ನಲ್ಲಿ ಮಗುವಿಗೆ ಜನ್ಮ ನೀಡಿದರು.

ಯಶ್ ದಾಸ್​​ಗುಪ್ತ ಜತೆ ನುಸ್ರತ್​ ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ನುಸ್ರತ್​ ಮತ್ತು ನಿಖಿಲ್​ ಸಂಸಾರದಲ್ಲಿ ಬಿರುಗಾಳಿ ಬೀಸಲು ನಟ ಯಶ್​ ದಾಸ್​​ಗುಪ್ತ ಕಾರಣ ಎಂದು ಹೇಳಲಾಗಿತ್ತು. ‘ಒನ್​’ ಸಿನಿಮಾದಲ್ಲಿ ಯಶ್​ ಮತ್ತು ನುಸ್ರತ್​ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಯಶ್​ ದಾಸ್​​ಗುಪ್ತ ಮಗುವಿನ ತಂದೆ ಎಂದಿದ್ದ ನುಸ್ರತ್,​ ಈಗ ಯಶ್​ಗೆ ಪ್ರೀತಿಯಿಂದ ಗಂಡ ಎಂದಿದ್ದಾರೆ.

ಯಶ್​ ಜನ್ಮದಿನಕ್ಕೆ ತಂದ ಕೇಕ್​ಅನ್ನು ನುಸ್ರತ್​ ಹಂಚಿಕೊಂಡಿದ್ದಾರೆ. ಈ ಕೇಕ್​ ಮೇಲೆ ಅವರು ಮೇಲ್ಭಾಗದಲ್ಲಿ ಪತಿ ಎಂದು ಬರೆದರೆ ಕೆಳಭಾಗದಲ್ಲಿ ತಂದೆ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ.

ಇತ್ತೀಚೆಗೆ ನುಸ್ರತ್​ ಜಹಾನ್​ ಮತ್ತು ಯಶ್​ ಒಟ್ಟಿಗೇ ಕೋಲ್ಕತ್ತ ಮುನ್ಸಿಪಲ್​ ಕಾರ್ಪೋರೇಶನ್​ನಲ್ಲಿ ಕಾಣಿಸಿಕೊಂಡಿದ್ದರು. ಅವರು ಕೊವಿಡ್​ 19 ಲಸಿಕೆ ಎರಡನೇ ಡೋಸ್​ ಪಡೆಯಲು ಬಂದಿದ್ದಾರೆಂದೇ ಹೇಳಲಾಗಿತ್ತು. ಆದರೆ ಅವರು ಮಗುವಿನ ಬರ್ತ್​ ಸರ್ಟಿಫಿಕೇಟ್​ ಸಂಬಂಧದ ಕೆಲಸಕ್ಕೆ ಬಂದಿದ್ದರೆಂದು ನಂತರ ವರದಿ ಆಗಿತ್ತು.

ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್​

ನಟಿ ನುಸ್ರತ್​ ಜಹಾನ್​​ ಮಗುವಿನ ತಂದೆ ಹೆಸರು ಅಂತೂ ಬಹಿರಂಗವಾಯ್ತು; ರೂಮರ್​ ನಿಜವಾಯ್ತು !

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು