ಸುಶಾಂತ್​ ಸಾವಿನ ಘಟನೆ ಆಧಾರಿತ ಸಿನಿಮಾ ಟ್ರೇಲರ್ ರಿಲೀಸ್​​; ಅಭಿಮಾನಿಗಳಿಗೆ ಶಾಕ್​ ನೀಡಿದ ಡೈಲಾಗ್​​ಗಳು

Nyay The Justice trailer: ಇಲ್ಲಿ ಎಲ್ಲ ಪಾತ್ರಗಳ ಹೆಸರನ್ನು ಬದಲಿಸಲಾಗಿದೆ. ಸುಶಾಂತ್​ ಸಿಂಗ್​ ರಜಪೂತ್​ ಪಾತ್ರಕ್ಕೆ ಮಹೇಂದ್ರ ಸಿಂಗ್​ ಎಂದು ಹೆಸರಿಡಲಾಗಿದೆ. ಅವರ ಪ್ರೇಯಸಿ ರಿಯಾ ಚಕ್ರವರ್ತಿ ಪಾತ್ರವನ್ನು ಊರ್ವಶಿ ಎಂದು ಕರೆಯಲಾಗಿದೆ!

ಸುಶಾಂತ್​ ಸಾವಿನ ಘಟನೆ ಆಧಾರಿತ ಸಿನಿಮಾ ಟ್ರೇಲರ್ ರಿಲೀಸ್​​; ಅಭಿಮಾನಿಗಳಿಗೆ ಶಾಕ್​ ನೀಡಿದ ಡೈಲಾಗ್​​ಗಳು
ನ್ಯಾಯ್: ದಿ ಜಸ್ಟೀಸ್ ಸಿನಿಮಾದ ಟ್ರೇಲರ್​ ದೃಶ್ಯಗಳು

Updated on: Jun 11, 2021 | 1:42 PM

ನಟ ಸುಶಾಂತ್ ಸಿಂಗ್​ ರಜಪೂತ್​​ ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ. ಅವರು ನಿಧನರಾಗಿ ಒಂದು ವರ್ಷ ಕಳೆಯುತ್ತಿದ್ದರೂ ಕೂಡ ತನಿಖೆ ಪ್ರಗತಿಯಲ್ಲಿದೆ. ಸುಶಾಂತ್​ ಅನುಮಾನಾಸ್ಪದವಾಗಿ ಸಾವಿಗೀಡಾದ ಕೆಲವೇ ದಿನಗಳಲ್ಲಿ ಕೆಲವರು ಅವರ ಕುರಿತು ಸಿನಿಮಾ ಮಾಡಲು ಮುಂದೆ ಬಂದರು. ಅದಕ್ಕೆ ಸುಶಾಂತ್​ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಆ ವಿರೋಧಗಳನ್ನೆಲ್ಲ ದಾಟಿಕೊಂಡು ‘ನ್ಯಾಯ್​: ದಿ ಜಸ್ಟೀಸ್​’ ಸಿನಿಮಾ ಸಿದ್ಧವಾಗಿದೆ. ಅಲ್ಲದೇ ಅದರ ಟ್ರೇಲರ್​ ಕೂಡ ರಿಲೀಸ್​ ಆಗಿದೆ.

ಈ ಸಿನಿಮಾದಲ್ಲಿ ನೇರವಾಗಿ ಇದು ಸುಶಾಂತ್​ ಸಾವಿಗೆ ಸಂಬಂಧಿಸಿದ ಕಥೆ ಎಂದು ಹೇಳಿಲ್ಲ. ಎಲ್ಲ ಪಾತ್ರಗಳ ಹೆಸರನ್ನು ಬದಲಿಸಲಾಗಿದೆ. ಸುಶಾಂತ್​ ಸಿಂಗ್​ ರಜಪೂತ್​ ಪಾತ್ರಕ್ಕೆ ಮಹೇಂದ್ರ ಸಿಂಗ್​ ಎಂದು ಹೆಸರಿಡಲಾಗಿದೆ. ಅವರ ಪ್ರೇಯಸಿ ರಿಯಾ ಚಕ್ರವರ್ತಿ ಪಾತ್ರವನ್ನು ಊರ್ವಶಿ ಎಂದು ಕರೆಯಲಾಗಿದೆ!

ರಿಯಾ ಚಕ್ರವರ್ತಿ ಜೊತೆ ಆಪ್ತವಾಗಿದ್ದ ಹಿರಿಯ ನಿರ್ದೇಶಕ/ನಿರ್ಮಾಪಕ ಮಹೇಶ್​ ಭಟ್​ ಸೇರಿದಂತೆ ಬಾಲಿವುಡ್​ನ ಅನೇಕರನ್ನು ಹೋಲುವಂತಹ ಪಾತ್ರಗಳನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ‘ಅವನು ಅನೇಕ ಕನಸು ಕಟ್ಟಿಕೊಟ್ಟಿದ್ದ. ಪಾಸಿಟಿವ್​ ಆಲೋಚನೆಗಳನ್ನು ಹೊಂದಿದ್ದ. ಅಂಥ ವ್ಯಕ್ತಿ ಡಿಪ್ರೆಷನ್​ಗೆ ಹೋಗಲು ಹೇಗೆ ಸಾಧ್ಯ? ಇದೆಲ್ಲ ಆ ಊರ್ವಶಿಯ ಕೈವಾಡ. ನನ್ನ ಮಗನ ಬ್ಯಾಂಕ್​ ಖಾತೆಯಿಂದ ತುಂಬಾ ಹಣ ಬೇರೆ ಕಡೆಗೆ ಹೋಗಿದೆ’ ಎಂದು ಕಥಾನಾಯಕನ ತಂದೆ ಆರೋಪಿಸುವ ದೃಶ್ಯಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ.

‘ಅವನು ಡ್ರಗ್ಸ್​ ಸೇವಿಸುತ್ತಿದ್ದ, ಡ್ರಗ್ಸ್​ ಖರೀದಿಸುತ್ತಿದ್ದ. ಪೆಡ್ಲರ್​ಗಳ ಜೊತೆ ಅವನಿಗೆ ಸಂಬಂಧ ಇತ್ತು. ದುಡ್ಡು ವಿನಿಮಯ ಮಾಡಿಕೊಳ್ಳುತ್ತಿದ್ದ. ಇಲ್ಲಿನ ಡ್ರಗ್ಸ್​ ಅನ್ನು ಬೇರೆ ಕಡೆಗೆ ಸಾಗಿಸುತ್ತಿದ್ದ’ ಎಂಬ ಡೈಲಾಗ್​ಗಳು ಕೂಡ ಟ್ರೇಲರ್​ನಲ್ಲಿವೆ. ಇದರಿಂದ ಸುಶಾಂತ್​ ಅಭಿಮಾನಿಗಳು ಸಿಟ್ಟಾಗುವ ಸಾಧ್ಯತೆ ಕೂಡ ಹೆಚ್ಚಿದೆ. ಒಟ್ಟಾರೆ ಈ ಸಿನಿಮಾದಲ್ಲಿ ಸುಶಾಂತ್ ಅವರನ್ನು ಯಾವ ರೀತಿ ಬಿಂಬಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎನ್ನುವ ಕೌತುಕವನ್ನು ಜನರ ಮನದಲ್ಲಿ ಮೂಡಿಸಲು ಟ್ರೇಲರ್ ಯಶಸ್ವಿ ಆಗಿದೆ.

ಜುಬೇರ್​ ಕೆ. ಖಾನ್​, ಶ್ರೇಯಾ ಶುಕ್ಲಾ ‘ನ್ಯಾಯ್​: ದಿ ಜಸ್ಟೀಸ್​’ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕೋರಿ ಸುಶಾಂತ್​ ಸಿಂಗ್​ ರಜಪೂತ್​ ತಂದೆ ಕೆಕೆ ಸಿಂಗ್​ ಅವರು ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಅವರ ಅರ್ಜಿಯನ್ನು ನ್ಯಾಯಾಲಯ ತಳ್ಳಿಹಾಕಿತ್ತು. ಸದ್ಯ ಈ ಟ್ರೇಲರ್ ಬಗ್ಗೆ ​ಬಿಟೌನ್​ ವಲಯದಲ್ಲಿ ಚರ್ಚೆ ಜೋರಾಗಿದೆ.

ಇದನ್ನೂ ಓದಿ:

ಸುಶಾಂತ್​ ಸಿಂಗ್​ ರಜಪೂತ್​ ಮನೆ ಕೆಲಸದವರಿಗೆ ಗೊತ್ತಿದೆಯಾ ಡ್ರಗ್ಸ್​ ಸತ್ಯ? ಎನ್​ಸಿಬಿಯಿಂದ ವಿಚಾರಣೆ

ಸುಶಾಂತ್​ ಸಾವಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿರುವ ನೀಚರು; 3 ಮುಖ್ಯ ವಿಷಯ ತೆರೆದಿಟ್ಟ ಸಹೋದರಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us