AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್

Megastar Chiranjeevi | Kamal Haasan: ಎರಡೂ ಫೋಟೋವನ್ನು ಜೋಡಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಮಲ್​ ಹಾಸನ್​ ಹಾಗೂ ಚಿರಂಜೀವಿ ಸ್ನೇಹ ಶಾಶ್ವತವಾಗಿರಲಿ ಎಂದು ಹಾರೈಸುತ್ತಿದ್ದಾರೆ.

36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
ಕಮಲ್ ಹಾಸನ್, ಮೆಗಾಸ್ಟಾರ್ ಚಿರಂಜೀವಿ
TV9 Web
| Updated By: ಮದನ್​ ಕುಮಾರ್​|

Updated on: Jun 13, 2022 | 7:59 AM

Share

ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಕಮಲ್​ ಹಾಸನ್ (Kamal Haasan)​ ಮತ್ತು ಮೆಗಾಸ್ಟಾರ್​ ಚಿರಂಜೀವಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ಹಲವು ವರ್ಷಗಳಿಂದ ಅವರಿಬ್ಬರು ಸ್ನೇಹಿತರು. ಪರಸ್ಪರ ಬೆಂಬಲ ನೀಡುತ್ತ ಅವರು ಮುಂದುವರಿಯುತ್ತಿದ್ದಾರೆ. ಒಬ್ಬರ ಬೆಳವಣಿಗೆಯನ್ನು ನೋಡಿ ಇನ್ನೊಬ್ಬರು ಖುಷಿ ಪಡುತ್ತಿದ್ದಾರೆ. ಈಗ ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ (Vikram Movie) ಸೂಪರ್​ ಹಿಟ್​ ಆಗಿರುವುದಕ್ಕೆ ಚಿರಂಜೀವಿ ಅವರು ಪಾರ್ಟಿ ಆಯೋಜಿಸಿರುವುದು ದೊಡ್ಡ ಸುದ್ದಿ ಆಗಿದೆ. ಅಚ್ಚರಿ ಏನೆಂದರೆ ಅವರು ಈ ರೀತಿ ಮಾಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ತಮ್ಮ ಸ್ನೇಹಿತನಿಗಾಗಿ ಚಿರಂಜೀವಿ (Megastar Chiranjeevi) ಅವರು ಈ ರೀತಿ ಪಾರ್ಟಿ ಮಾಡಿದ್ದರು. ಗೆಳೆಯನ ಗೆಲುವನ್ನು ಸಂಭ್ರಮಿಸಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಕಮಲ್ ಹಾಸನ್​ ಅವರ ಸೂಪರ್​ ಹಿಟ್​ ಸಿನಿಮಾಗಳಲ್ಲಿ ‘ಸ್ವಾತಿ ಮುತ್ಯಂ’ ಕೂಡ ಒಂದು. ಆ ಚಿತ್ರ 1986ರಲ್ಲಿ ಬಿಡುಗಡೆಯಾಗಿತ್ತು. ಅದರ ಗೆಲುವನ್ನು ಸಂಭ್ರಮಿಸಲು ಚಿರಂಜೀವಿ ಅವರು ಪಾರ್ಟಿ ಆಯೋಜಿಸಿದ್ದರು. ವೇದಿಕೆಯಲ್ಲಿ ಗೆಳೆಯ ಕಮಲ್​ ಹಾಸನ್​ಗೆ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದ್ದರು. ಆ ಕಾರ್ಯಕ್ರಮಕ್ಕೆ ಬಾಲಿವುಡ್​ನ ಲೆಜೆಂಡರಿ ನಟ ರಾಜ್​ ಕಪೂರ್​ ಅವರು ಅತಿಥಿಯಾಗಿ ಬಂದಿದ್ದರು. ಈಗ ಆ ರೀತಿಯ ಘಟನೆ ಮತ್ತೆ ಮರುಕಳಿಸಿದೆ.

ಇದನ್ನೂ ಓದಿ: Kamal Haasan: ಕಮಲ್​ ಹಾಸನ್​ಗೆ ಮತ್ತೆ ರಾಜಕೀಯದ ಸೆಳೆತ; ‘ವಿಕ್ರಮ್​’ ಗೆಲುವಿನ ಬೆನ್ನಲ್ಲೇ ದೊಡ್ಡ ಅನೌನ್ಸ್​ಮೆಂಟ್​

ಇದನ್ನೂ ಓದಿ
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಿರುವ ‘ವಿಕ್ರಮ್’ ಸಿನಿಮಾ ಜಯಭೇರಿ ಬಾರಿಸಿದೆ. ಅದಕ್ಕಾಗಿ ಎಲ್ಲರನ್ನೂ ಕರೆದು ಚಿರಂಜೀವಿ ಅವರು ಪಾರ್ಟಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಸಲ್ಮಾನ್ ಖಾನ್​ ಬಂದಿದ್ದಾರೆ. ಈ ಎರಡೂ ಸಂದರ್ಭದ ಫೋಟೋವನ್ನು ಜೋಡಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇಬ್ಬರ ಸ್ನೇಹ ಚಿರವಾಗಿರಲಿ ಎಂದು ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ; ಎಂದ ಕಮಲ್​ ಹಾಸನ್​; ಏನದು?

‘ವಿಕ್ರಮ್​’ ಸಿನಿಮಾದಲ್ಲಿ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​, ಸೂರ್ಯ ಕೂಡ ನಟಿಸಿದ್ದಾರೆ. ಕಮಲ್​ ಹಾಸನ್​ ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ. ಈ ಯಶಸ್ಸಿನಿಂದ ಖುಷಿ ಆಗಿರುವ ಅವರು ನಿರ್ದೇಶಕರಿಗೆ ಮತ್ತು ನಟ ಸೂರ್ಯ ಅವರಿಗೆ ದುಬಾರಿ ಗಿಫ್ಟ್​ ನೀಡಿ ಸುದ್ದಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ