AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​

Aishwaryaa Rajinikanth | Dhanush: ‘ಧನುಷ್​ ತುಂಬ ಒಳ್ಳೆಯ ಅಳಿಯ. ಹೆಂಡತಿ ಬಗ್ಗೆ ಕಾಳಜಿ ವಹಿಸುತ್ತಾನೆ’ ಎಂದು ರಜನಿಕಾಂತ್​ ಹೇಳಿದ್ದರು. ಆದರೆ ಇಂದು ಮಗಳು-ಅಳಿಯನ ವಿಚ್ಛೇದನದಿಂದ ಅವರು ಬೇಸರಗೊಂಡಿದ್ದಾರೆ.

‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​
ರಜನಿಕಾಂತ್​, ಧನುಷ್​, ಐಶ್ವರ್ಯಾ
TV9 Web
| Edited By: |

Updated on: Jan 20, 2022 | 1:59 PM

Share

ಕೆಲವು ಸೆಲೆಬ್ರಿಟಿಗಳನ್ನು ಜನರು ತೀವ್ರವಾಗಿ ಹಚ್ಚಿಕೊಂಡಿರುತ್ತಾರೆ. ಅವರ ಖಾಸಗಿ ಬದುಕಿನ ವಿಚಾರಗಳನ್ನೂ ಅಭಿಮಾನಿಗಳು ಫಾಲೋ ಮಾಡುತ್ತಾರೆ. ನಟ ಧನುಷ್ (Dhanush)​ ಮತ್ತು ಐಶ್ವರ್ಯಾ ರಜನಿಕಾಂತ್​ ದಂಪತಿಯನ್ನು ಫ್ಯಾನ್ಸ್​ ಹೆಚ್ಚು ಇಷ್ಟಪಡುತ್ತಿದ್ದರು. ಆದರೆ ಈ ಜೋಡಿ ಏಕಾಏಕಿ ದೂರಾಗುತ್ತಿರುವ ಸುದ್ದಿ ಘೋಷಿಸಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ನಡುವೆ ರಜನಿಕಾಂತ್​ (Rajinikanth) ಅವರ ಹಳೆಯ ಒಂದು ವಿಡಿಯೋ ವೈರಲ್​ ಆಗುತ್ತಿದೆ. ಆ ವಿಡಿಯೋದಲ್ಲಿ ತಮ್ಮ ಅಳಿಯನನ್ನು ಅವರು ಮನಸಾರೆ ಹೊಗಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಧನುಷ್​ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಅಳಿಯನ ಒಳ್ಳೆಯ ಗುಣಗಳನ್ನು ರಜನಿಕಾಂತ್​ ಕೊಂಡಾಡಿದ್ದರು. ಆದರೆ ಈಗ ಏನಾಗಿದೆ? ಧನುಷ್​ ಮತ್ತು ರಜನಿಕಾಂತ್​ ಪುತ್ರಿ ಐಶ್ವರ್ಯಾ (Aishwaryaa Rajinikanth) ಸಂಸಾರದಲ್ಲಿ ಬಿರುಕು ಮೂಡಿದೆ. ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಏನೆಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಅದು ‘ಕಾಳ’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ. ರಜನಿಕಾಂತ್​ ನಟನೆಯ ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಧನುಷ್​. ವಂಡರ್​ಬಾರ್​ ಫಿಲ್ಮ್ಸ್​ ಬ್ಯಾನರ್​ನಲ್ಲಿ ಆ ಚಿತ್ರ ತಯಾರಾಗಿತ್ತು. ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ಮಾತನಾಡಿದ ರಜನಿಕಾಂತ್​ ಅವರು ಧನುಷ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ಧನುಷ್​ ತುಂಬ ಒಳ್ಳೆಯ ಹುಡುಗ. ತಂದೆ-ತಾಯಿಯನ್ನು ದೇವರಂತೆ ಕಾಣುತ್ತಾನೆ. ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೆ. ಹೆಂಡತಿ ಬಗ್ಗೆ ಕಾಳಜಿ ವಹಿಸುತ್ತಾನೆ. ಆತ ಒಳ್ಳೆಯ ಮನುಷ್ಯ, ಒಳ್ಳೆಯ ತಂದೆ, ಒಳ್ಳೆಯ ಅಳಿಯ ಮತ್ತು ಪ್ರತಿಭಾವಂತ’ ಎಂದು ರಜನಿಕಾಂತ್​ ಹೇಳಿದ್ದರು. ಆದರೆ ಇಂದು ಮಗಳು-ಅಳಿಯನ ವಿಚ್ಛೇದನದಿಂದ ಅವರು ಬೇಸರಗೊಂಡಿದ್ದಾರೆ. ಆ ಕುರಿತು ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಧನುಷ್​​ ತಂದೆ ಹೇಳೋದೇ ಬೇರೆ!

2004ರಲ್ಲಿ ಐಶ್ವರ್ಯಾ ಮತ್ತು ಧನುಷ್​ ಮದುವೆ ನೆರವೇರಿತ್ತು. ಇತ್ತೀಚಿನ ವರ್ಷಗಳಲ್ಲಿ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಹಾಗಾಗಿ ಇಬ್ಬರೂ ಪರಸ್ಪರ ಬೇರಾಗಲು ನಿರ್ಧರಿಸಿದ್ದಾರೆ. ಈ ವಿಷಯ ತಿಳಿಸಲು ಧನುಷ್​ ಮಾಡಿದ ಟ್ವೀಟ್​ನಲ್ಲಿ ಡಿವೋರ್ಸ್​ ಎಂಬ ಪದವನ್ನು ಬಳಸಿಲ್ಲ. ಅದಕ್ಕೆ ಪೂರಕ ಎಂಬಂತೆ ಈಗ ಅವರ ತಂದೆ ಕಸ್ತೂರಿ ರಾಜ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಗ-ಸೊಸೆಯ ಡಿವೋರ್ಸ್​ ಸುದ್ದಿಯನ್ನು ಕಸ್ತೂರಿ ರಾಜ ತಳ್ಳಿ ಹಾಕಿದ್ದಾರೆ. ‘ಪರಸ್ಪರ ವೈಮನಸ್ಸಿನ ಕಾರಣಕ್ಕೆ ಹೀಗೆ ಆಗಿದೆ. ಇದು ಒಂದು ಕುಟುಂಬದ ಜಗಳ ಅಷ್ಟೇ. ಗಂಡ-ಹೆಂಡತಿ ನಡುವೆ ಇದೆಲ್ಲ ಸಹಜ. ಇದು ಡಿವೋರ್ಸ್​ ಅಲ್ಲ. ಅವರಿಬ್ಬರು ಈಗ ಚೆನ್ನೈನಲ್ಲಿ ಇಲ್ಲ. ಹೈದರಾಬಾದ್​​ನಲ್ಲಿ ಇದ್ದಾರೆ. ಅವರಿಗೆ ನಾನು ಒಂದಷ್ಟು ಸಲಹೆ ನೀಡಿದ್ದೇನೆ’ ಎಂದು ಕಸ್ತೂರಿ ರಾಜ ಹೇಳಿದ್ದಾರೆ.

ಇದನ್ನೂ ಓದಿ:

ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಮಹಾಭಾರತ’ ಸೀರಿಯಲ್​​ ಕೃಷ್ಣ ಪಾತ್ರಧಾರಿ ನಿತೀಶ್​ ಭಾರದ್ವಜ್​ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ