AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​

Aishwaryaa Rajinikanth | Dhanush: ‘ಧನುಷ್​ ತುಂಬ ಒಳ್ಳೆಯ ಅಳಿಯ. ಹೆಂಡತಿ ಬಗ್ಗೆ ಕಾಳಜಿ ವಹಿಸುತ್ತಾನೆ’ ಎಂದು ರಜನಿಕಾಂತ್​ ಹೇಳಿದ್ದರು. ಆದರೆ ಇಂದು ಮಗಳು-ಅಳಿಯನ ವಿಚ್ಛೇದನದಿಂದ ಅವರು ಬೇಸರಗೊಂಡಿದ್ದಾರೆ.

‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​
ರಜನಿಕಾಂತ್​, ಧನುಷ್​, ಐಶ್ವರ್ಯಾ
TV9 Web
| Edited By: |

Updated on: Jan 20, 2022 | 1:59 PM

Share

ಕೆಲವು ಸೆಲೆಬ್ರಿಟಿಗಳನ್ನು ಜನರು ತೀವ್ರವಾಗಿ ಹಚ್ಚಿಕೊಂಡಿರುತ್ತಾರೆ. ಅವರ ಖಾಸಗಿ ಬದುಕಿನ ವಿಚಾರಗಳನ್ನೂ ಅಭಿಮಾನಿಗಳು ಫಾಲೋ ಮಾಡುತ್ತಾರೆ. ನಟ ಧನುಷ್ (Dhanush)​ ಮತ್ತು ಐಶ್ವರ್ಯಾ ರಜನಿಕಾಂತ್​ ದಂಪತಿಯನ್ನು ಫ್ಯಾನ್ಸ್​ ಹೆಚ್ಚು ಇಷ್ಟಪಡುತ್ತಿದ್ದರು. ಆದರೆ ಈ ಜೋಡಿ ಏಕಾಏಕಿ ದೂರಾಗುತ್ತಿರುವ ಸುದ್ದಿ ಘೋಷಿಸಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ನಡುವೆ ರಜನಿಕಾಂತ್​ (Rajinikanth) ಅವರ ಹಳೆಯ ಒಂದು ವಿಡಿಯೋ ವೈರಲ್​ ಆಗುತ್ತಿದೆ. ಆ ವಿಡಿಯೋದಲ್ಲಿ ತಮ್ಮ ಅಳಿಯನನ್ನು ಅವರು ಮನಸಾರೆ ಹೊಗಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಧನುಷ್​ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಅಳಿಯನ ಒಳ್ಳೆಯ ಗುಣಗಳನ್ನು ರಜನಿಕಾಂತ್​ ಕೊಂಡಾಡಿದ್ದರು. ಆದರೆ ಈಗ ಏನಾಗಿದೆ? ಧನುಷ್​ ಮತ್ತು ರಜನಿಕಾಂತ್​ ಪುತ್ರಿ ಐಶ್ವರ್ಯಾ (Aishwaryaa Rajinikanth) ಸಂಸಾರದಲ್ಲಿ ಬಿರುಕು ಮೂಡಿದೆ. ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಏನೆಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಅದು ‘ಕಾಳ’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ. ರಜನಿಕಾಂತ್​ ನಟನೆಯ ಆ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಧನುಷ್​. ವಂಡರ್​ಬಾರ್​ ಫಿಲ್ಮ್ಸ್​ ಬ್ಯಾನರ್​ನಲ್ಲಿ ಆ ಚಿತ್ರ ತಯಾರಾಗಿತ್ತು. ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ಮಾತನಾಡಿದ ರಜನಿಕಾಂತ್​ ಅವರು ಧನುಷ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ಧನುಷ್​ ತುಂಬ ಒಳ್ಳೆಯ ಹುಡುಗ. ತಂದೆ-ತಾಯಿಯನ್ನು ದೇವರಂತೆ ಕಾಣುತ್ತಾನೆ. ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೆ. ಹೆಂಡತಿ ಬಗ್ಗೆ ಕಾಳಜಿ ವಹಿಸುತ್ತಾನೆ. ಆತ ಒಳ್ಳೆಯ ಮನುಷ್ಯ, ಒಳ್ಳೆಯ ತಂದೆ, ಒಳ್ಳೆಯ ಅಳಿಯ ಮತ್ತು ಪ್ರತಿಭಾವಂತ’ ಎಂದು ರಜನಿಕಾಂತ್​ ಹೇಳಿದ್ದರು. ಆದರೆ ಇಂದು ಮಗಳು-ಅಳಿಯನ ವಿಚ್ಛೇದನದಿಂದ ಅವರು ಬೇಸರಗೊಂಡಿದ್ದಾರೆ. ಆ ಕುರಿತು ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಧನುಷ್​​ ತಂದೆ ಹೇಳೋದೇ ಬೇರೆ!

2004ರಲ್ಲಿ ಐಶ್ವರ್ಯಾ ಮತ್ತು ಧನುಷ್​ ಮದುವೆ ನೆರವೇರಿತ್ತು. ಇತ್ತೀಚಿನ ವರ್ಷಗಳಲ್ಲಿ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಹಾಗಾಗಿ ಇಬ್ಬರೂ ಪರಸ್ಪರ ಬೇರಾಗಲು ನಿರ್ಧರಿಸಿದ್ದಾರೆ. ಈ ವಿಷಯ ತಿಳಿಸಲು ಧನುಷ್​ ಮಾಡಿದ ಟ್ವೀಟ್​ನಲ್ಲಿ ಡಿವೋರ್ಸ್​ ಎಂಬ ಪದವನ್ನು ಬಳಸಿಲ್ಲ. ಅದಕ್ಕೆ ಪೂರಕ ಎಂಬಂತೆ ಈಗ ಅವರ ತಂದೆ ಕಸ್ತೂರಿ ರಾಜ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಗ-ಸೊಸೆಯ ಡಿವೋರ್ಸ್​ ಸುದ್ದಿಯನ್ನು ಕಸ್ತೂರಿ ರಾಜ ತಳ್ಳಿ ಹಾಕಿದ್ದಾರೆ. ‘ಪರಸ್ಪರ ವೈಮನಸ್ಸಿನ ಕಾರಣಕ್ಕೆ ಹೀಗೆ ಆಗಿದೆ. ಇದು ಒಂದು ಕುಟುಂಬದ ಜಗಳ ಅಷ್ಟೇ. ಗಂಡ-ಹೆಂಡತಿ ನಡುವೆ ಇದೆಲ್ಲ ಸಹಜ. ಇದು ಡಿವೋರ್ಸ್​ ಅಲ್ಲ. ಅವರಿಬ್ಬರು ಈಗ ಚೆನ್ನೈನಲ್ಲಿ ಇಲ್ಲ. ಹೈದರಾಬಾದ್​​ನಲ್ಲಿ ಇದ್ದಾರೆ. ಅವರಿಗೆ ನಾನು ಒಂದಷ್ಟು ಸಲಹೆ ನೀಡಿದ್ದೇನೆ’ ಎಂದು ಕಸ್ತೂರಿ ರಾಜ ಹೇಳಿದ್ದಾರೆ.

ಇದನ್ನೂ ಓದಿ:

ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಮಹಾಭಾರತ’ ಸೀರಿಯಲ್​​ ಕೃಷ್ಣ ಪಾತ್ರಧಾರಿ ನಿತೀಶ್​ ಭಾರದ್ವಜ್​ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ​

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್