ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

ಪ್ರಥಮ್​, ಸಿಹಿಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ತಮ್ಮದೇ ಆದಂತಹ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಈಗ ಹೊಸ ಕಾರ್ಯಕ್ರಮದ ಸಲುವಾಗಿ ಈ ಮೂವರು ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ
ಸಿಹಿಕಹಿ ಚಂದ್ರು, ಪ್ರಥಮ್​, ಅಕುಲ್​ ಬಾಲಾಜಿ
Follow us
| Updated By: ಆಯೇಷಾ ಬಾನು

Updated on:Mar 15, 2021 | 6:42 AM

ಕಿರುತೆರೆಯಲ್ಲಿ ಒಂದೆಡೆ ಧಾರಾವಾಹಿಗಳು ಸದ್ದು ಮಾಡಿದರೆ, ಇನ್ನೊಂದೆಡೆ ನಾನ್​-ಫಿಕ್ಷನ್​ ಶೋಗಳು ಗಮನ ಸೆಳೆಯುತ್ತವೆ. ಈ ಎರಡೂ ವಿಭಾಗಗಳ ನಡುವೆ ಯಾವಾಗಲೂ ಒಂದು ಬಗೆಯ ಪೈಪೋಟಿ ಇದ್ದೇ ಇರುತ್ತದೆ. ಈಗ ಸ್ಟಾರ್​ ಸುವರ್ಣ ವಾಹಿನಿಯಲ್ಲಿ ಹೊಸದೊಂದು ಕಾರ್ಯಕ್ರಮ ಶುರು ಆಗುತ್ತಿದೆ. ಅದರಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಮೂವರಿಗೂ ಕಿರುತೆರೆ ಹೊಸದೇನಲ್ಲ. ಸಿಹಿ-ಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ಅವರು ಅನೇಕ ಕಾರ್ಯಕ್ರಮಗಳ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಪ್ರಥಮ್​ ಕೂಡ ಬಿಗ್​ ಬಾಸ್​, ‘ಸಂಜು ಮತ್ತು ನಾನು’ ಮುಂತಾದ ಕಾರ್ಯಕ್ರಮಗಳ ಮೂಲಕ ಕಿರುತೆರೆ ಜೊತೆ ಒಡನಾಟ ಬೆಳೆಸಿಕೊಂಡಿದ್ದಾರೆ. ಈ ಮೂವರಿಗೆ ತಮ್ಮದೇ ಆದಂತಹ ಫ್ಯಾನ್​ ಫಾಲೋಯಿಂಗ್​ ಇದೆ. ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಈ ಮೂವರು ಒಂದಾಗುತ್ತಿದ್ದಾರೆ.

ಸ್ಟಾರ್​ ಸುವರ್ಣ ವಾಹಿನಿಯಲ್ಲಿ ‘ಕುಕ್ಕು ವಿಥ್​ ಕಿರಿಕ್ಕು’ ಎಂಬ ಕಾರ್ಯಕ್ರಮ ಶೀಘ್ರದಲ್ಲೇ ಶುರು ಆಗಲಿದೆ. ಇದೊಂದು ಅಡುಗೆ ಕಾರ್ಯಕ್ರಮ ಆಗಿದ್ದರೂ ಕೂಡ ಇದರ ಶೈಲಿ ಸಂಪೂರ್ಣ ಭಿನ್ನವಾಗಿರಲಿದೆ. ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಕೂಡ ಭಾಗವಹಿಸಲಿದ್ದಾರೆ. ಬಗೆಬಗೆಯ ಅಡುಗೆ ಮಾಡುವುದರ ಜೊತೆಗೆ ಸಿಕ್ಕಾಪಟ್ಟೆ ಕಾಮಿಡಿ ಕೂಡ ಇರಲಿದೆ ಎಂಬುದು ವಿಶೇಷ.

ಸದ್ಯಕ್ಕೆ ಈ ಕಾರ್ಯಕ್ರಮದ ಪ್ರೋಮೋ ಮಾತ್ರ ರಿಲೀಸ್​ ಆಗಿದೆ. ಸಖತ್​ ಕಲರ್​ಫುಲ್​ ಆಗಿ ಮೂಡಿಬಂದಿರುವ ಈ ಪ್ರೋಮೋ ನೋಡಿದ ಬಳಿಕ ವೀಕ್ಷಕರಲ್ಲಿ ಕೌತುಕ ಹೆಚ್ಚಿದೆ. ಈಗಾಗಲೇ ಬೊಂಬಾಟ್​ ಬೋಜನ ಕಾರ್ಯಕ್ರಮದ ಮೂಲಕ ಅನೇಕ ಅಡುಗೆಗಳನ್ನು ವೀಕ್ಷಕರಿಗೆ ಪರಿಚಯಿಸಿರುವ ಸಿಹಿ ಕಹಿ ಚಂದ್ರು ಅವರು ಈಗ ‘ಕುಕ್ಕು ವಿಥ್​ ಕಿರಿಕ್ಕು’ ಕಾರ್ಯಕ್ರಮದಲ್ಲಿ ಹೊಸದೇನನ್ನು ಹೇಳಿಕೊಡಲಿದ್ದಾರೆ? ಇಂಥ ಅಡುಗೆ ಶೋನಲ್ಲಿ ಅಕುಲ್​ ಬಾಲಾಜಿ ಮತ್ತು ಪ್ರಥಮ್​ಗೆ ಏನು ಕೆಲಸ? ಈ ಎಲ್ಲ ಪ್ರಶ್ನೆಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ಇದನ್ನೂ ಓದಿ: Kannada Serial: ಧಾರಾವಾಹಿ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದ ಸಾಧು ಕೋಕಿಲ! ಕಾಮಿಡಿ ಕಲಾವಿದನ ಹೊಸ ಸಾಹಸ

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Published On - 6:41 am, Mon, 15 March 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್