AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

ಪ್ರಥಮ್​, ಸಿಹಿಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ತಮ್ಮದೇ ಆದಂತಹ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಈಗ ಹೊಸ ಕಾರ್ಯಕ್ರಮದ ಸಲುವಾಗಿ ಈ ಮೂವರು ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ
ಸಿಹಿಕಹಿ ಚಂದ್ರು, ಪ್ರಥಮ್​, ಅಕುಲ್​ ಬಾಲಾಜಿ
ಮದನ್​ ಕುಮಾರ್​
| Edited By: |

Updated on:Mar 15, 2021 | 6:42 AM

Share

ಕಿರುತೆರೆಯಲ್ಲಿ ಒಂದೆಡೆ ಧಾರಾವಾಹಿಗಳು ಸದ್ದು ಮಾಡಿದರೆ, ಇನ್ನೊಂದೆಡೆ ನಾನ್​-ಫಿಕ್ಷನ್​ ಶೋಗಳು ಗಮನ ಸೆಳೆಯುತ್ತವೆ. ಈ ಎರಡೂ ವಿಭಾಗಗಳ ನಡುವೆ ಯಾವಾಗಲೂ ಒಂದು ಬಗೆಯ ಪೈಪೋಟಿ ಇದ್ದೇ ಇರುತ್ತದೆ. ಈಗ ಸ್ಟಾರ್​ ಸುವರ್ಣ ವಾಹಿನಿಯಲ್ಲಿ ಹೊಸದೊಂದು ಕಾರ್ಯಕ್ರಮ ಶುರು ಆಗುತ್ತಿದೆ. ಅದರಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಮೂವರಿಗೂ ಕಿರುತೆರೆ ಹೊಸದೇನಲ್ಲ. ಸಿಹಿ-ಕಹಿ ಚಂದ್ರು ಮತ್ತು ಅಕುಲ್​ ಬಾಲಾಜಿ ಅವರು ಅನೇಕ ಕಾರ್ಯಕ್ರಮಗಳ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಪ್ರಥಮ್​ ಕೂಡ ಬಿಗ್​ ಬಾಸ್​, ‘ಸಂಜು ಮತ್ತು ನಾನು’ ಮುಂತಾದ ಕಾರ್ಯಕ್ರಮಗಳ ಮೂಲಕ ಕಿರುತೆರೆ ಜೊತೆ ಒಡನಾಟ ಬೆಳೆಸಿಕೊಂಡಿದ್ದಾರೆ. ಈ ಮೂವರಿಗೆ ತಮ್ಮದೇ ಆದಂತಹ ಫ್ಯಾನ್​ ಫಾಲೋಯಿಂಗ್​ ಇದೆ. ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಈ ಮೂವರು ಒಂದಾಗುತ್ತಿದ್ದಾರೆ.

ಸ್ಟಾರ್​ ಸುವರ್ಣ ವಾಹಿನಿಯಲ್ಲಿ ‘ಕುಕ್ಕು ವಿಥ್​ ಕಿರಿಕ್ಕು’ ಎಂಬ ಕಾರ್ಯಕ್ರಮ ಶೀಘ್ರದಲ್ಲೇ ಶುರು ಆಗಲಿದೆ. ಇದೊಂದು ಅಡುಗೆ ಕಾರ್ಯಕ್ರಮ ಆಗಿದ್ದರೂ ಕೂಡ ಇದರ ಶೈಲಿ ಸಂಪೂರ್ಣ ಭಿನ್ನವಾಗಿರಲಿದೆ. ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಕೂಡ ಭಾಗವಹಿಸಲಿದ್ದಾರೆ. ಬಗೆಬಗೆಯ ಅಡುಗೆ ಮಾಡುವುದರ ಜೊತೆಗೆ ಸಿಕ್ಕಾಪಟ್ಟೆ ಕಾಮಿಡಿ ಕೂಡ ಇರಲಿದೆ ಎಂಬುದು ವಿಶೇಷ.

ಸದ್ಯಕ್ಕೆ ಈ ಕಾರ್ಯಕ್ರಮದ ಪ್ರೋಮೋ ಮಾತ್ರ ರಿಲೀಸ್​ ಆಗಿದೆ. ಸಖತ್​ ಕಲರ್​ಫುಲ್​ ಆಗಿ ಮೂಡಿಬಂದಿರುವ ಈ ಪ್ರೋಮೋ ನೋಡಿದ ಬಳಿಕ ವೀಕ್ಷಕರಲ್ಲಿ ಕೌತುಕ ಹೆಚ್ಚಿದೆ. ಈಗಾಗಲೇ ಬೊಂಬಾಟ್​ ಬೋಜನ ಕಾರ್ಯಕ್ರಮದ ಮೂಲಕ ಅನೇಕ ಅಡುಗೆಗಳನ್ನು ವೀಕ್ಷಕರಿಗೆ ಪರಿಚಯಿಸಿರುವ ಸಿಹಿ ಕಹಿ ಚಂದ್ರು ಅವರು ಈಗ ‘ಕುಕ್ಕು ವಿಥ್​ ಕಿರಿಕ್ಕು’ ಕಾರ್ಯಕ್ರಮದಲ್ಲಿ ಹೊಸದೇನನ್ನು ಹೇಳಿಕೊಡಲಿದ್ದಾರೆ? ಇಂಥ ಅಡುಗೆ ಶೋನಲ್ಲಿ ಅಕುಲ್​ ಬಾಲಾಜಿ ಮತ್ತು ಪ್ರಥಮ್​ಗೆ ಏನು ಕೆಲಸ? ಈ ಎಲ್ಲ ಪ್ರಶ್ನೆಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ಇದನ್ನೂ ಓದಿ: Kannada Serial: ಧಾರಾವಾಹಿ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದ ಸಾಧು ಕೋಕಿಲ! ಕಾಮಿಡಿ ಕಲಾವಿದನ ಹೊಸ ಸಾಹಸ

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Published On - 6:41 am, Mon, 15 March 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!