AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನ ತಂದ ಆಪತ್ತು; ಸೂರ್ಯ ಬರ್ತ್​ಡೇ ದಿನ ಇಬ್ಬರು ಅಭಿಮಾನಿಗಳ ಸಾವು

Suriya Birthday: ಸೂರ್ಯ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ಹಾಕಲಾಗುತ್ತಿತ್ತು. ಬ್ಯಾನರ್​ಗೆ ಹಾಕಲಾದ ರಾಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಭಿಮಾನ ತಂದ ಆಪತ್ತು; ಸೂರ್ಯ ಬರ್ತ್​ಡೇ ದಿನ ಇಬ್ಬರು ಅಭಿಮಾನಿಗಳ ಸಾವು
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Jul 24, 2023 | 8:24 AM

Share

ಟಾಲಿವುಡ್​ ನಟ ಸೂರ್ಯ (Suriya) ಅವರು ಜುಲೈ 23ರಂದು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ತಮಿಳು ಹೀರೋ ಆದರೂ ಅವರಿಗೆ ಎಲ್ಲಾ ಕಡೆಗಳಲ್ಲಿ ಅಭಿಮಾನಿಳು ಇದ್ದಾರೆ. ಈಗ ಅವರ ಇಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಅದೂ ಅವರ ಬರ್ತ್​ಡೇ ದಿನವೇ ಅನ್ನೋದು ಬೇಸರದ ಸಂಗತಿ. ಸೂರ್ಯ ಅವರ ಬರ್ತ್​ಡೇಗೆ ಸಂಬಂಧಸಿದ ಬ್ಯಾನರ್ ಹಾಕುವಾಗ ಅವಘಡ ಸಂಭವಿಸಿದೆ. ಬ್ಯಾನರ್​​ಗೆ ವಿದ್ಯುತ್ ತಂತಿ ಸ್ಪರ್ಶ ಆಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಪಾಲ್ನಾಡು ಜಿಲ್ಲೆಯ ನರಸರಾವ್​​ಪೇಟ್​​ನಲ್ಲಿ ಈ ಘಟನೆ ನಡೆದಿದೆ. ನಕ್ಕಾ ವೆಂಕಟೇಶ್​ ಹಾಗೂ ಪೊಲುರಿ ಸಾಯಿ ಮೃತ ಯುವಕರು. ಇವರು ದ್ವಿತೀಯ ವರ್ಷದ ಪದವಿ ಓದುತ್ತಿದ್ದರು. ಇಬ್ಬರೂ ಸೂರ್ಯ ಅವರ ಕಟ್ಟಾಭಿಮಾನಿಗಳಾಗಿದ್ದರು. ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಇವರಿಗೆ ಕಾಲೇಜಿನ ಸಮೀಪ ಸೂರ್ಯ ಅವರ ಬ್ಯಾನರ್ ಹಾಕಬೇಕು ಎಂಬ ಆಸೆ ಇತ್ತು. ಈ ಕಾರಣಕ್ಕೆ ಬ್ಯಾನರ್ ಸಿದ್ಧಮಾಡಿಕೊಂಡಿದ್ದರು.

ಸೂರ್ಯ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ಹಾಕಲಾಗುತ್ತಿತ್ತು. ಬ್ಯಾನರ್​ಗೆ ಹಾಕಲಾದ ರಾಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ರೋಲೆಕ್ಸ್​ಗಿಂತಲೂ ಹೆಚ್ಚು ಭಯಾನಕ ‘ಕಂಗುವ’; ಹೊಸ ಅವತಾರದಲ್ಲಿ ಬಂದ ಸೂರ್ಯ

ಸಾಯಿ ಅವರ ಸಹೋದರಿ ಅನನ್ಯಾ ಅವರು ಕಾಲೇಜ್​ನವರನ್ನು ದೂಷಿಸಿದ್ದಾರೆ. ‘ಅಣ್ಣನ ಸಾವಿಗೆ ಕಾಲೇಜಿನವರೇ ಕಾರಣ. ಕಾಲೇಜಿಗೆ ಸಾಕಷ್ಟು ಶುಲ್ಕ ಕಟ್ಟುತ್ತಿದ್ದೇವೆ. ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸುವುದಾಗಿ ಕಾಲೇಜಿಗೆ ಸೇರುವ ಮುನ್ನ ಭರವಸೆ ನೀಡಿದ್ದರು. ವಿದ್ಯಾರ್ಥಿಗಳ ಬಗ್ಗೆ ಹಾಸ್ಟೆಲ್‌ನಲ್ಲಿರುವವರು ನಿಗಾ ಇಡುತ್ತಿಲ್ಲ. ನಾವು ದಿನಗೂಲಿ ನೌಕರರು. ಕಾಲೇಜು ಶುಲ್ಕ ಕಟ್ಟಲು ಕಷ್ಟಪಟ್ಟಿದ್ದೇವೆ’ ಎಂದು ಅನನ್ಯಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ