AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನ ತಂದ ಆಪತ್ತು; ಸೂರ್ಯ ಬರ್ತ್​ಡೇ ದಿನ ಇಬ್ಬರು ಅಭಿಮಾನಿಗಳ ಸಾವು

Suriya Birthday: ಸೂರ್ಯ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ಹಾಕಲಾಗುತ್ತಿತ್ತು. ಬ್ಯಾನರ್​ಗೆ ಹಾಕಲಾದ ರಾಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಭಿಮಾನ ತಂದ ಆಪತ್ತು; ಸೂರ್ಯ ಬರ್ತ್​ಡೇ ದಿನ ಇಬ್ಬರು ಅಭಿಮಾನಿಗಳ ಸಾವು
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Jul 24, 2023 | 8:24 AM

Share

ಟಾಲಿವುಡ್​ ನಟ ಸೂರ್ಯ (Suriya) ಅವರು ಜುಲೈ 23ರಂದು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ತಮಿಳು ಹೀರೋ ಆದರೂ ಅವರಿಗೆ ಎಲ್ಲಾ ಕಡೆಗಳಲ್ಲಿ ಅಭಿಮಾನಿಳು ಇದ್ದಾರೆ. ಈಗ ಅವರ ಇಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಅದೂ ಅವರ ಬರ್ತ್​ಡೇ ದಿನವೇ ಅನ್ನೋದು ಬೇಸರದ ಸಂಗತಿ. ಸೂರ್ಯ ಅವರ ಬರ್ತ್​ಡೇಗೆ ಸಂಬಂಧಸಿದ ಬ್ಯಾನರ್ ಹಾಕುವಾಗ ಅವಘಡ ಸಂಭವಿಸಿದೆ. ಬ್ಯಾನರ್​​ಗೆ ವಿದ್ಯುತ್ ತಂತಿ ಸ್ಪರ್ಶ ಆಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಪಾಲ್ನಾಡು ಜಿಲ್ಲೆಯ ನರಸರಾವ್​​ಪೇಟ್​​ನಲ್ಲಿ ಈ ಘಟನೆ ನಡೆದಿದೆ. ನಕ್ಕಾ ವೆಂಕಟೇಶ್​ ಹಾಗೂ ಪೊಲುರಿ ಸಾಯಿ ಮೃತ ಯುವಕರು. ಇವರು ದ್ವಿತೀಯ ವರ್ಷದ ಪದವಿ ಓದುತ್ತಿದ್ದರು. ಇಬ್ಬರೂ ಸೂರ್ಯ ಅವರ ಕಟ್ಟಾಭಿಮಾನಿಗಳಾಗಿದ್ದರು. ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಇವರಿಗೆ ಕಾಲೇಜಿನ ಸಮೀಪ ಸೂರ್ಯ ಅವರ ಬ್ಯಾನರ್ ಹಾಕಬೇಕು ಎಂಬ ಆಸೆ ಇತ್ತು. ಈ ಕಾರಣಕ್ಕೆ ಬ್ಯಾನರ್ ಸಿದ್ಧಮಾಡಿಕೊಂಡಿದ್ದರು.

ಸೂರ್ಯ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ಹಾಕಲಾಗುತ್ತಿತ್ತು. ಬ್ಯಾನರ್​ಗೆ ಹಾಕಲಾದ ರಾಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ರೋಲೆಕ್ಸ್​ಗಿಂತಲೂ ಹೆಚ್ಚು ಭಯಾನಕ ‘ಕಂಗುವ’; ಹೊಸ ಅವತಾರದಲ್ಲಿ ಬಂದ ಸೂರ್ಯ

ಸಾಯಿ ಅವರ ಸಹೋದರಿ ಅನನ್ಯಾ ಅವರು ಕಾಲೇಜ್​ನವರನ್ನು ದೂಷಿಸಿದ್ದಾರೆ. ‘ಅಣ್ಣನ ಸಾವಿಗೆ ಕಾಲೇಜಿನವರೇ ಕಾರಣ. ಕಾಲೇಜಿಗೆ ಸಾಕಷ್ಟು ಶುಲ್ಕ ಕಟ್ಟುತ್ತಿದ್ದೇವೆ. ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸುವುದಾಗಿ ಕಾಲೇಜಿಗೆ ಸೇರುವ ಮುನ್ನ ಭರವಸೆ ನೀಡಿದ್ದರು. ವಿದ್ಯಾರ್ಥಿಗಳ ಬಗ್ಗೆ ಹಾಸ್ಟೆಲ್‌ನಲ್ಲಿರುವವರು ನಿಗಾ ಇಡುತ್ತಿಲ್ಲ. ನಾವು ದಿನಗೂಲಿ ನೌಕರರು. ಕಾಲೇಜು ಶುಲ್ಕ ಕಟ್ಟಲು ಕಷ್ಟಪಟ್ಟಿದ್ದೇವೆ’ ಎಂದು ಅನನ್ಯಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ