AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಪ್ರದರ್ಶನ ಆಗುವ ಎಲ್ಲ ಚಿತ್ರಮಂದಿರದಲ್ಲಿ ಹನುಮನಿಗೆ ಒಂದು ಸೀಟು ಮೀಸಲು; ಏನಿದು ನಂಬಿಕೆ?

Devdatta Nage: ‘ಆದಿಪುರುಷ್​’ ಸಿನಿಮಾದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗುತ್ತದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ.

Adipurush: ‘ಆದಿಪುರುಷ್​’ ಪ್ರದರ್ಶನ ಆಗುವ ಎಲ್ಲ ಚಿತ್ರಮಂದಿರದಲ್ಲಿ ಹನುಮನಿಗೆ ಒಂದು ಸೀಟು ಮೀಸಲು; ಏನಿದು ನಂಬಿಕೆ?
ದೇವದತ್ತ ನಾಗೆ
Follow us
ಮದನ್​ ಕುಮಾರ್​
|

Updated on: Jun 06, 2023 | 1:00 PM

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ (Adipurush) ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಪ್ರಭಾಸ್​ (Prabhas) ಅವರು ರಾಮನಾಗಿ ನಟಿಸಿದ್ದಾರೆ. ಜೂನ್​ 16ರಂದು ಅದ್ದೂರಿಯಾಗಿ ಈ ಸಿನಿಮಾ ಬಿಡುಗಡೆ ಆಗಲಿದೆ. ಅಚ್ಚರಿ ಏನೆಂದರೆ, ಈ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ. ಚಿತ್ರತಂಡದವರು ಈ ರೀತಿ ಮಾಡಲು ಒಂದು ಸ್ಪೆಷಲ್​ ಕಾರಣ ಇದೆ. ಇದು ಅಪ್ಪಟ ನಂಬಿಕೆಗೆ ಸಂಬಂಧಿಸಿದ ವಿಚಾರ. ರಾಮನ ಪರಮ ಭಕ್ತ ಆಂಜನೇಯನಿಗೆ (Lord Hanuman) ಗೌರವ ಸಲ್ಲಿಸುವ ಸಲುವಾಗಿ ಪ್ರತಿ ಚಿತ್ರಮಂದಿರದಲ್ಲಿ ಒಂದು ಸೀಟನ್ನು ಖಾಲಿ ಬಿಡಲಾಗುವುದು ಎಂದು ಸ್ವತಃ ‘ಆದಿಪುರುಷ್​​’ ಚಿತ್ರತಂದವರು ತಿಳಿಸಿದ್ದಾರೆ.

ಎಲ್ಲಿ ರಾಮನ ಆರಾಧನೆ ಮಾಡಲಾಗುತ್ತೋ ಅಲ್ಲಿ ಆಂಜನೇಯ ಬರುತ್ತಾನೆ ಎಂಬ ನಂಬಿಕೆ ಇದೆ. ‘ಆದಿಪುರುಷ್​’ ಸಿನಿಮಾದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗುತ್ತದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ಹಾಗಾಗಿ ಈ ಸಿನಿಮಾ ಪ್ರದರ್ಶನ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಹಲವರಿಗೆ ಇದೆ. ಆ ಕಾರಣದಿಂದ ಒಂದು ಸೀಟನ್ನು ಪವನ ಪುತ್ರನಿಗಾಗಿ ಮೀಸಲಿಡಲಾಗುವುದು ಎಂಬುದು ವಿಶೇಷ. ‘ಆದಿಪುರುಷ್​’ ಸಿನಿಮಾದಲ್ಲಿ ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ಓಂ ರಾವತ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Dharma Censor Board: ‘ಧಾರ್ಮಿಕ ಸೆನ್ಸಾರ್​ ಮಂಡಳಿ’; ಸಿನಿಮಾಗಳಲ್ಲಿ ಹಿಂದೂ ದೇವರ ಅಪಮಾನ ತಡೆಯಲು ಹೀಗೊಂದು ಪ್ರಯತ್ನ

ಪ್ರಭಾಸ್​ ಅಭಿಮಾನಿಗಳು ಈ ಚಿತ್ರಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಪ್ರಭಾಸ್​ ಪಾಲಿಗೆ ಈ ಚಿತ್ರ ಬಹಳ ಮಹತ್ವದ ಪ್ರಾಜೆಕ್ಟ್​ ಆಗಿದೆ. ‘ಆದಿಪುರುಷ್​’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ಅವರಿಗೆ ಇದೆ. ಹಾಗಾದರೆ ‘ಆದಿಪುರುಷ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಬಾಕ್ಸ್​ ಆಫೀಸ್​ ತಜ್ಞರ ಪ್ರಕಾರ ಈ ಸಿನಿಮಾ ಮೊದಲ ದಿನ ವಿಶ್ವಾದ್ಯಂತ 100 ಕೋಟಿ ರೂಪಾಯಿ ಬಾಚಿಕೊಳ್ಳುವ ಸಾಧ್ಯತೆ ಇದೆ. ಈ ಊಹೆ ನಿಜವಾಗುತ್ತಾ ಎಂಬುದನ್ನು ತಿಳಿಯಲು ಇನ್ನು ಕೆಲವೇ ದಿನಗಳು ಬಾಕಿ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಕೃತಿ ಸನೋನ್​ ನಟಿಸಿದ್ದಾರೆ.

ಇದನ್ನೂ ಓದಿ: Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?

‘ಆದಿಪುರುಷ್​’ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಎಲ್ಲ ರಾಜ್ಯಗಳಲ್ಲೂ ಉತ್ತಮ ಓಪನಿಂಗ್​ ಪಡೆದುಕೊಳ್ಳುವ ನಿರೀಕ್ಷೆ ಇದೆ. ಹಿಂದಿ ಪ್ರೇಕ್ಷಕರಲ್ಲೂ ಈ ಸಿನಿಮಾ ಬಗ್ಗೆ ಹೈಪ್​ ಕ್ರಿಯೇಟ್​ ಆಗಿದೆ. ಬಾಲಿವುಡ್​ ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದೇ ಅದಕ್ಕೆ ಕಾರಣ. ಅಲ್ಲದೇ ಪ್ರಭಾಸ್​ ಅವರಿಗೆ ಉತ್ತರ ಭಾರತದಲ್ಲಿ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಎಲ್ಲ ಕಾರಣದಿಂದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೊದಲ ದಿನ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ