AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಚಿತ್ರಕ್ಕೆ ಈವರೆಗೆ ಆಗಿರೋದು 5 ದಿನದ ಶೂಟಿಂಗ್​ ಮಾತ್ರ; ಅಭಿಮಾನಿಗಳಿಗೆ ನಿರಾಸೆ

Pushpa 2 | Sukumar: ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾಗೆ ಕೇವಲ 5 ದಿನಗಳ ಚಿತ್ರೀಕರಣ ಮಾತ್ರ ಮಾಡಲಾಗಿದೆ ಎಂದು ಸುಕುಮಾರ್​ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳಿಗೆ ನಿರಾಸೆ ಆಗಿದೆ.

Allu Arjun: ‘ಪುಷ್ಪ 2’ ಚಿತ್ರಕ್ಕೆ ಈವರೆಗೆ ಆಗಿರೋದು 5 ದಿನದ ಶೂಟಿಂಗ್​ ಮಾತ್ರ; ಅಭಿಮಾನಿಗಳಿಗೆ ನಿರಾಸೆ
ಅಲ್ಲು ಅರ್ಜುನ್
TV9 Web
| Edited By: |

Updated on:Dec 20, 2022 | 7:06 PM

Share

ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ‘ಪುಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹುದೊಡ್ಡದು. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಮಿಂಚುವಂತಾಗಿದ್ದು ಈ ಚಿತ್ರದಿಂದ. ‘ಪುಷ್ಪ’ ಸಿನಿಮಾದ ಹಿಂದಿ ವರ್ಷನ್​ ನೋಡಿ ಉತ್ತರ ಭಾರತದ ಪ್ರೇಕ್ಷಕರು ಫಿದಾ ಆಗಿದ್ದರು. 2021ರ ಡಿಸೆಂಬರ್​ನಲ್ಲಿ ಈ ಸಿನಿಮಾ ತೆರೆಕಂಡು ಧೂಳೆಬ್ಬಿಸಿತ್ತು. ಅದಾಗಿ ಒಂದು ವರ್ಷ ಕಳೆದಿದ್ದರೂ ಕೂಡ ಅದರ ಸೀಕ್ವೆಲ್​ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ‘ಪುಷ್ಪ 2’ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳಿಗೆ ನಿರ್ದೇಶಕ ಸುಕುಮಾರ್​ (Sukumar) ಅವರು ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಒಂದಿಲ್ಲೊಂದು ಕಾರಣಕ್ಕೆ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಅಚ್ಚರಿ ಎಂದರೆ, ‘ಪುಷ್ಪ 2’ (Pushpa 2) ಚಿತ್ರಕ್ಕೆ ಈವರೆಗೂ ಆಗಿರೋದು 5 ದಿನದ ಶೂಟಿಂಗ್​ ಮಾತ್ರ!

ಸುಕುಮಾರ್​ ಅವರು ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ‘ಗೀತಾ ಆರ್ಟ್ಸ್​’ ಬ್ಯಾನರ್​ ಜೊತೆ ಅವರು ನಿರ್ಮಿಸಿರುವ ‘18 ಪೇಜಸ್​’ ಸಿನಿಮಾ ಈ ವಾರ (ಡಿ.23) ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಸುಕುಮಾರ್​ ಮತ್ತು ಅಲ್ಲು ಅರ್ಜುನ್​ ಹಾಜರಿ ಹಾಕಿದ್ದರು. ಈ ವೇಳೆ ಅವರು ‘ಪುಷ್ಪ 2’ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ.

ಇದನ್ನೂ ಓದಿ: Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

ಇದನ್ನೂ ಓದಿ
Image
‘ಪುಷ್ಪ 2’ ಚಿತ್ರದಲ್ಲಿ ಅಸಲಿ ವಿಲನ್ ಯಾರು? ಅಲ್ಲು ಅರ್ಜುನ್ ಚಿತ್ರದಲ್ಲಿದೆ ದೊಡ್ಡ ಟ್ವಿಸ್ಟ್
Image
‘ಪುಷ್ಪ 2’ ಚಿತ್ರದ ಮುಹೂರ್ತಕ್ಕೆ ಗೈರಾದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ; ಕಾರಣ ಏನು?
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಈವರೆಗೂ ‘ಪುಷ್ಪ 2’ ಸಿನಿಮಾಗೆ ಕೇವಲ 5 ದಿನಗಳ ಚಿತ್ರೀಕರಣ ಮಾಡಲಾಗಿದೆ ಅಷ್ಟೇ ಎಂದು ಸುಕುಮಾರ್​ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಆದಷ್ಟು ಬೇಗ ಈ ಚಿತ್ರದ ಶೂಟಿಂಗ್​ ಮುಗಿಯಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ ಸುಕುಮಾರ್​ ಅವರು ತುಂಬ ಕಾಳಜಿ ವಹಿಸಿ ಈ ಚಿತ್ರವನ್ನು ಕಟ್ಟಿಕೊಡುತ್ತಿರುವುದರಿಂದ ಸಹಜವಾಗಿಯೇ ಶೂಟಿಂಗ್​ ವಿಳಂಬ ಆಗುತ್ತಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​

‘ಪುಷ್ಪ 2’ ಚಿತ್ರದ ಕೆಲಸಗಳು ತಡವಾಗುತ್ತಿರುವ ಬಗ್ಗೆ ಅಲ್ಲು ಅರ್ಜುನ್​ ಬೇಸರ ಮಾಡಿಕೊಂಡಿಲ್ಲ. ಸುಕುಮಾರ್​ ಅವರ ಕಾರ್ಯವೈಖರಿ ಬಗ್ಗೆ ಅಲ್ಲು ಅರ್ಜುನ್​ ಅವರಿಗೆ ಸಂಪೂರ್ಣ ಭರವಸೆ ಇದೆ. ಹಾಗಾಗಿ ಅವರ ಪ್ಲ್ಯಾನ್​ ಪ್ರಕಾರವೇ ಎಲ್ಲವೂ ನಡೆಯುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.

ಮೊದಲ ಪಾರ್ಟ್​ಗಿಂತಲೂ ‘ಪುಷ್ಟ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುವ ಸವಾಲು ಚಿತ್ರತಂಡದ ಮುಂದಿದೆ. ಅದಕ್ಕಾಗಿ ಕಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬ ಆಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:06 pm, Tue, 20 December 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ