Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್
ರೋಸಿ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Mar 05, 2024 | 8:57 AM

ಲೂಸ್ ಮಾದ ಯೋಗಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಅವರ ನಟನೆಯ 50ನೇ ಸಿನಿಮಾ ‘ರೋಜಿ’ ಬಗ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ (Sringar Kitty) ಹಾಗೂ ‘ಲಿಯೋ’ ಖ್ಯಾತಿಯ ಸ್ಯಾಂಡಿ ಕುಮಾರ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಹೊಸ ಸೇರ್ಪಡೆ ಆಗಿದೆ. ಒರಟ ಪ್ರಶಾಂತ್ ಅವರು ತಂಡ ಸೇರಿಕೊಂಡಿದ್ದಾರೆ.

ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ ಎಂದು. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕೆ ಶೂನ್ಯ ಅವರ ನಿರ್ದೇಶನ ಇದೆ. ಈ ಚಿತ್ರ ಪಕ್ಕಾ ಗ್ಯಾಂಗ್​ಸ್ಟರ್ ಡ್ರಾಮ ಸಿನಿಮಾ. ‘ಒರಟ ಪ್ರಶಾಂತ್ ನಮ್ಮ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸ್ವಾಮಿ ಅಣ್ಣ ಎಂಬುದು ಅವರ ಪಾತ್ರದ ಹೆಸರು. ಈ ಸಿನಿಮಾದಲ್ಲಿ ಇನ್ನೂ ಎರಡು ಮುಖ್ಯ ಪಾತ್ರಗಳಿವೆ. ಸದ್ಯದಲ್ಲೇ ಮಾಹಿತಿ ರಿವೀಲ್ ಮಾಡುತ್ತೇವೆ’ ಎಂದಿದ್ದಾರೆ ನಿರ್ದೇಶಕ ಶೂನ್ಯ.

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಅವರಿಗೆ ಈ ಮೊದಲು ಹಲವು ಆಫರ್​​ಗಳು ಬಂದಿದ್ದವಂತೆ. ಆದರೆ, ಯಾವುದೂ ಇಷ್ಟ ಆಗಿರಲಿಲ್ಲ. ‘ರೋಜಿ’ ಚಿತ್ರದ ಪಾತ್ರ ಅವರಿಗೆ ಸಾಕಷ್ಟು ಇಷ್ಟ ಆಗಿದೆ.

ಇದನ್ನೂ ಓದಿ: ‘ಪಕ್ಕಾ 100 ಡೇಸ್ ಅನ್ನೋದು ಬಿಟ್ಟುಬಿಡಬೇಕು’; ಕಾರಣ ತಿಳಿಸಿದ ಸಿಂಪಲ್ ಸುನಿ

‘ರೋಜಿ’ ಸಿನಿಮಾದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತವೆ’ ಎಂದು ಮಾಹಿತಿ ನೀಡಿದರು ಗುರುಕಿರಣ್. ಅವರು ಕೊರೊನಾ ಬಳಿಕ ಒಪ್ಪಿಕೊಂಡ ಮೊದಲ ಸಿನಿಮಾ ಎಂದರೆ ಅದು ‘ರೋಜಿ’ ಅನ್ನೋದು ವಿಶೇಷ. ಅವರು ಚಿತ್ರರಂಗಕ್ಕೆ ಬಂದು ಇಪ್ಪತ್ತೈದು ವರ್ಷಗಳು ಕಳೆದಿವೆ. ಈ ಸಮಯದಲ್ಲಿ ‘ಕರಿಮಣಿ ಮಾಲೀಕ’ ಮತ್ತೆ ಟ್ರೆಂಡ್ ಆಗುತ್ತಿದೆ. ಈ ಚಿತ್ರಕ್ಕೆ ಡಿ.ವೈ.ರಾಜೇಶ್, ಡಿ.ವೈ.ವಿನೋದ್ ಬಂಡವಾಳ ಹೂಡಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ