AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸ್ಕರ್​ಗೆ ಭಾರತದಿಂದ ಕಳಿಸುವ ಸಿನಿಮಾ ಆಯ್ಕೆ ಸರಿ ಇಲ್ಲ’; ಚರ್ಚೆ ಹುಟ್ಟುಹಾಕಿದ ಎ.ಆರ್​. ರೆಹಮಾನ್ ಹೇಳಿಕೆ

ಪ್ರತಿ ವರ್ಷ ಆಸ್ಕರ್​ಗೆ ಭಾರತದಿಂದ ಒಂದು ಸಿನಿಮಾನ ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಈ ವರ್ಷ ಭಾರತದಿಂದ ‘ಆರ್​ಆರ್​ಆರ್​’ ಸಿನಿಮಾ ಆಯ್ಕೆ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ಊಹೆ ತಪ್ಪಾಗಿತ್ತು.

‘ಆಸ್ಕರ್​ಗೆ ಭಾರತದಿಂದ ಕಳಿಸುವ ಸಿನಿಮಾ ಆಯ್ಕೆ ಸರಿ ಇಲ್ಲ’; ಚರ್ಚೆ ಹುಟ್ಟುಹಾಕಿದ ಎ.ಆರ್​. ರೆಹಮಾನ್ ಹೇಳಿಕೆ
ರೆಹಮಾನ್​-ಚೆಲ್ಲೋ ಶೋ
ರಾಜೇಶ್ ದುಗ್ಗುಮನೆ
|

Updated on:Mar 16, 2023 | 7:21 AM

Share

ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್ (AR Rahman) ಅವರು ಎರಡು ಬಾರಿ ಆಸ್ಕರ್ ಗೆದ್ದಿದ್ದಾರೆ. ಭಾರತದಲ್ಲಿ ಅವರಿಗೆ ಸಿಕ್ಕ ಪ್ರಶಸ್ತಿಗಳ ಸಂಖ್ಯೆ ತುಂಬಾನೇ ದೊಡ್ಡದಿದೆ. ರೆಹಮಾನ್ ಅವರ ಸಂಗೀತ ಸಂಯೋಜನೆಗೆ ಅನೇಕರು ಫಿದಾ ಆಗಿದ್ದಾರೆ. ರೆಹಮಾನ್ ಅವರು ಹಂಚಿಕೊಂಡಿರುವ ವಿಡಿಯೋ ಒಂದು ಈಗ ವೈರಲ್ ಆಗಿದೆ. ‘ಆಸ್ಕರ್​ಗೆ ತಪ್ಪಾದ ಸಿನಿಮಾಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. ಇದರಿಂದ ಸಾಕಷ್ಟು ಚರ್ಚೆ ಹುಟ್ಟಿಕೊಂಡಿದೆ.

ಪ್ರತಿ ವರ್ಷ ಆಸ್ಕರ್​ಗೆ ಭಾರತದಿಂದ ಒಂದು ಸಿನಿಮಾನ ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಈ ವರ್ಷ ಭಾರತದಿಂದ ‘ಆರ್​ಆರ್​ಆರ್​’ ಸಿನಿಮಾ ಆಯ್ಕೆ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ಊಹೆ ತಪ್ಪಾಗಿತ್ತು. ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾನ ಆಯ್ಕೆ ಮಾಡಿ ಆಸ್ಕರ್​ಗೆ ಕಳುಹಿಸಲಾಯಿತು. ಈ ಬಗ್ಗೆ ಪರ-ವಿರೋಧ ಚರ್ಚೆ ಇದ್ದೇ ಇದೆ. ಈಗ ರೆಹಮಾನ್ ಅವರು ಹಂಚಿಕೊಂಡಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ಸಂಗೀತ ಲೋಕದ ಲೆಜೆಂಡ್ ಎಲ್​. ಸುಬ್ರಮಣಿಯನ್ ಅವರ ಜೊತೆ ರೆಹಮಾನ್ ಸಂವಾದ ನಡೆಸಿದ್ದಾರೆ. ಇದರ ವಿಡಿಯೋನ ರೆಹಮಾನ್ ಅವರು ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಸಿನಿಮಾಗಳು ಆಸ್ಕರ್‌ವರೆಗೆ ಹೋಗುತ್ತವೆ. ಆದರೆ, ಅಲ್ಲಿ ಅವಾರ್ಡ್ ಗೆಲ್ಲುವುದಿಲ್ಲ. ಆಸ್ಕರ್ ಪ್ರಶಸ್ತಿಗೆ ತಪ್ಪು ಸಿನಿಮಾಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತಿದೆ. ನಾವು ಮತ್ತೊಬ್ಬರ ರೀತಿಯಲ್ಲಿ ಯೋಚಿಸಬೇಕು. ಇಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಲು ಪಾಶ್ಚಾತ್ಯರ ರೀತಿಯಲ್ಲಿ ಯೋಚಿಸಬೇಕು. ಅಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ನನ್ನ ರೀತಿಯಲ್ಲಿ ಆಲೋಚಿಸಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
Image
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

ಇದನ್ನೂ ಓದಿ: ಈ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳಿಗೆ ಒಂದು ಆಸ್ಕರ್ ಸಹ ಬಂದಿಲ್ಲ: ಚಕಿತಗೊಳಿಸುವ ಪಟ್ಟಿ ಇಲ್ಲಿದೆ

ಅಂದಹಾಗೆ ರೆಹಮಾನ್ ಹಂಚಿಕೊಂಡಿರುವ ಈ ಸಂದರ್ಶನ ಜನವರಿ 6ರಂದು ಚಿತ್ರೀಕರಿಸಲಾಗಿತ್ತು. ಸುಬ್ರಮಣಿಯನ್ ಅವರು ವಿಡಿಯೋ ಕೊನೆಯಲ್ಲಿ ರೆಹಮಾನ್​ಗೆ ಬರ್ತ್​ಡೇ ವಿಶ್ ತಿಳಿಸುತ್ತಾರೆ. ಹೀಗಾಗಿ, ಇದು ಆ ಸಂದರ್ಭದಲ್ಲಿ ಶೂಟ್ ಮಾಡಿದ್ದು ಎನ್ನಲಾಗಿದೆ.

ಇದನ್ನೂ ಓದಿ: ಆಸ್ಕರ್ ಟ್ರೋಫಿಯನ್ನು ಕಳೆದು ಹಾಕಿದ್ದ ಎ.ಆರ್​. ರೆಹಮಾನ್; ನಂತರ ಅದು ಸಿಕ್ಕಿದ್ದೆಲ್ಲಿ?

ರೆಹಮಾನ್ ಸಂಗೀತ ಸಂಯೋಜನೆ ಮಾಡಿದ ‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರ 2008ರಲ್ಲಿ ರಿಲೀಸ್ ಆಯಿತು. ಇದು ರೆಹಮಾನ್ ವೃತ್ತಿಜೀವನದಲ್ಲಿ ಮಹತ್ವದ ಸಿನಿಮಾ ಎನಿಸಿಕೊಂಡಿದೆ. ಈ ಚಿತ್ರಕ್ಕೆ ರೆಹಮಾನ್ ಅವರಿಗೆ ಎರಡು ಆಸ್ಕರ್ ಅವಾರ್ಡ್​ಗಳು ಲಭಿಸಿದ್ದವು. ಎರಡು ಆಸ್ಕರ್ ಅವಾರ್ಡ್ ಗೆದ್ದ ಏಕೈಕ ಭಾರತೀಯ ಎನ್ನುವ ಖ್ಯಾತಿ ಇವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Thu, 16 March 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ