AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​

Naatu Naatu Song | Oscar Nominations 2023: ಅಲಿಸನ್​ ವಿಲಿಯಮ್ಸ್​ ಮತ್ತು ರಿಝ್​ ಅಹ್ಮದ್​ ಅವರು ಈ ಬಾರಿಯ ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟಿಸಿದರು. ‘ನಾಟು ನಾಟು’ ಹಾಡು, ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಗಳು ಭಾರತದಿಂದ ನಾಮಿನೇಟ್​ ಆಗಿವೆ.

Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​
ಆಸ್ಕರ್ ಪ್ರಶಸ್ತಿ ನಾಮಿನೇಷನ್
ಮದನ್​ ಕುಮಾರ್​
|

Updated on:Jan 24, 2023 | 8:09 PM

Share

ಭಾರಿ ಕೌತುಕ ಮೂಡಿಸಿದ್ದ ಆಸ್ಕರ್​ ಪ್ರಶಸ್ತಿ (Oscar 2023) ನಾಮಿನೇಷನ್ಪಟ್ಟಿ ಹೊರಬಿದ್ದಿದೆ. ಮಂಗಳವಾರ (ಜ.24) ಸಂಜೆ ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್​ನಲ್ಲಿರುವ ಸ್ಯಾಮ್ಯುವೆಲ್ ಗೋಲ್ಡ್​​ವಿನ್ ಥಿಯೇಟರ್​ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನಾಮಿನೇಷನ್​ (Oscar Nominations 2023) ಲಿಸ್ಟ್​ ಅನೌನ್ಸ್​ ಮಾಡಲಾಗಿದೆ. ಭಾರತದ ಒಂದಷ್ಟು ಸಿನಿಮಾಗಳು ಈ ಬಾರಿ ಶಾರ್ಟ್​ಲಿಸ್ಟ್​ ಆಗಿದ್ದರಿಂದ ನಾಮಿನೇಷನ್​ ಪ್ರಕ್ರಿಯೆ ಮೇಲೆ ಸಖತ್​ ನಿರೀಕ್ಷೆ ಮೂಡಿತ್ತು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ (Naatu Naatu) ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ. ಅಲಿಸನ್​ ವಿಲಿಯಮ್ಸ್​ ಮತ್ತು ರಿಝ್​ ಅಹ್ಮದ್​ ಅವರು ಈ ಬಾರಿಯ ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟಿಸಿದರು.

ಆಸ್ಕರ್​ಗೆ ‘ನಾಟು ನಾಟು..’ ನಾಮಿನೇಟ್​:

‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಅವರು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದು ಭಾರತಕ್ಕೆ ಹೆಮ್ಮೆ ತಂದಿದ್ದರು. ಈಗ ಆಸ್ಕರ್​ ಪ್ರಶಸ್ತಿಗೆ ನಾಮಿನೇಟ್​ ಆಗಿರುವುದು ಭಾರತೀಯ ಸಿನಿಪ್ರಿಯರಿಗೆ ಸಂತಸ ಮೂಡಿಸಿದೆ. ಈ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

‘ಚೆಲ್ಲೋ ಶೋ’ ಚಿತ್ರಕ್ಕೆ ನಿರಾಸೆ:

ಆಸ್ಕರ್​ನ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ವಿಭಾಗಕ್ಕೆ ಭಾರತದಿಂದ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಅಧಿಕೃತವಾಗಿ ಆಯ್ಕೆ ಆಗಿತ್ತು. ‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ವತಿಯಿಂದ ಈ ಚಿತ್ರವನ್ನು ಆಯ್ಕೆ ಮಾಡಲಾಗಿತ್ತು.  ಆದರೆ ಅಂತಿಮ ಸುತ್ತಿನಲ್ಲಿ ನಾಮಿನೇಟ್​ ಆಗುವಲ್ಲಿ ‘ಚೆಲ್ಲೋ ಶೋ’ ಸಿನಿಮಾ ವಿಫಲವಾಗಿದೆ. ಇದು ಅನೇಕರಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ: Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​

‘ವಿಕ್ರಾಂತ್​ ರೋಣ’, ‘ಕಾಂತಾರ’ ಚಿತ್ರಕ್ಕೆ ಆಸ್ಕರ್​ ಕನಸು ಭಗ್ನ:

ವಿಶ್ವದ 300ಕ್ಕೂ ಅಧಿಕ ಸಿನಿಮಾಗಳು ಈ ಬಾರಿ ಆಸ್ಕರ್​ ಪ್ರಶಸ್ತಿ ಸ್ಪರ್ಧೆಯಲ್ಲಿ ಹಣಾಹಣಿ ನಡೆಸುವ ಅರ್ಹತೆ ಪಡೆದಿದ್ದವು. ಆ ಪೈಕಿ ಕನ್ನಡದ ಸಿನಿಮಾಗಳಾದ ‘ಕಾಂತಾರ’, ‘ವಿಕ್ರಾಂತ್​ ರೋಣ’ ಚಿತ್ರಗಳು ಕೂಡ ಇದ್ದವು. ಈ ಚಿತ್ರಗಳು ಯಾವುದಾದರೂ ವಿಭಾಗದಲ್ಲಿ ನಾಮಿನೇಟ್​ ಆಗಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಅದೇ ರೀತಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕೂಡ ಯಾವುದೇ ವಿಭಾಗದಲ್ಲೂ ನಾಮಿನೇಟ್​ ಆಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:23 pm, Tue, 24 January 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು