ಆಸ್ಕರ್​​ ನಾಮಿನೇಷನ್ಸ್​​ಗೆ ವೋಟ್ ಮಾಡಿದ ಎ.ಆರ್​. ರೆಹಮಾನ್​; ನಿಜವಾಗಲಿದೆಯೇ ಅಭಿಮಾನಿಗಳ ಊಹೆ?

ಆಸ್ಕರ್​​ಗೆ ವೋಟ್ ಮಾಡಿದ್ದಕ್ಕೆ ಅಕಾಡೆಮಿಯವರು ಕಳುಹಿಸಿದ ಪತ್ರದ   ಫೋಟೋವನ್ನು ಎ.ಆರ್​​. ರೆಹಮಾನ್ ಅವರು ಶೇರ್ ಮಾಡಿಕೊಂಡಿದ್ದಾರೆ.

ಆಸ್ಕರ್​​ ನಾಮಿನೇಷನ್ಸ್​​ಗೆ ವೋಟ್ ಮಾಡಿದ ಎ.ಆರ್​. ರೆಹಮಾನ್​; ನಿಜವಾಗಲಿದೆಯೇ ಅಭಿಮಾನಿಗಳ ಊಹೆ?
ಆಸ್ಕರ್​​ಗೆ ವೋಟ್ ಮಾಡಿದ ಎಆರ್​ ರೆಹಮಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 19, 2023 | 7:54 AM

ಈ ವರ್ಷದ ಆಸ್ಕರ್ ನಾಮಿನೇಷನ್ಸ್ (Oscar Nomination)​ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಭಾರತದ ‘ಆರ್​ಆರ್​ಆರ್​’, ‘ಕಾಂತಾರ’ (Kantara Movie) ಮೊದಲಾದ ಚಿತ್ರಗಳು ಆಸ್ಕರ್ ರೇಸ್​​ನ ಅರ್ಹತಾ ಸುತ್ತಿನಲ್ಲಿವೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಈ ಬಾರಿ ಆಸ್ಕರ್ ಅವಾರ್ಡ್​​​ ಗೆಲ್ಲಲಿದೆ ಎಂದು ಅನೇಕರು ಊಹಿಸುತ್ತಿದ್ದಾರೆ. ಈ ಮಧ್ಯೆ ಆಸ್ಕರ್  ನಾಮಿನೇಷನ್​​ಗೆ ವೋಟಿಂಗ್ ನಡೆದಿದೆ. ಎ.ಆರ್​​. ರೆಹಮಾನ್ ಅವರು ತಮ್ಮ ವೋಟ್​​ಅನ್ನು ಚಲಾಯಿಸಿದ್ದಾರೆ. ಅವರು ‘ನಾಟು ನಾಟು..’ ಹಾಡಿಗೆ ವೋಟ್ ಹಾಕಿದ್ದಾರೆ ಎಂದು ಅನೇಕರು ಊಹಿಸಿದ್ದಾರೆ.

ಆಸ್ಕರ್​​ಗೆ ವೋಟ್ ಮಾಡಿದ್ದಕ್ಕೆ ಅಕಾಡೆಮಿಯವರು ಕಳುಹಿಸಿದ ಪತ್ರದ   ಫೋಟೋವನ್ನು ಎ.ಆರ್​​. ರೆಹಮಾನ್ ಅವರು ಶೇರ್ ಮಾಡಿಕೊಂಡಿದ್ದಾರೆ. ‘ಧನ್ಯವಾದಗಳು. ನಿಮ್ಮ ವೋಟ್​ ಸಿಕ್ಕಿದೆ’ ಎಂದು ಅಕಾಡೆಮಿಯವರು ರೆಹಮಾನ್​ಗೆ ಕಳುಹಿಸಿದ್ದಾರೆ. ಇದರ ಜತೆಗೆ ಯಾರಿಗೆ ವೋಟ್ ಹಾಕಿದ್ದೇವೆ ಎನ್ನುವ ವಿಚಾರವನ್ನು ಎಲ್ಲಿಯೂ ರಿವೀಲ್ ಮಾಡದಂತೆ ಸೂಚಿಸಲಾಗಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಈ ಪೋಸ್ಟ್​ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆಸ್ಕರ್​​ಗೆ ‘ಆರ್​​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಶಾರ್ಟ್​​ಲಿಸ್ಟ್ ಆಗಿದೆ. ಈ ಹಾಡಿನ ಪರವಾಗಿ ರೆಹಮಾನ್ ಅವರು ವೋಟ್ ಚಲಾವಣೆ ಮಾಡಿರುತ್ತಾರೆ ಎಂದು ಅನೇಕರು ಊಹಿಸಿದ್ದಾರೆ. ಈಗಾಗಲೇ ಪ್ರತಿಷ್ಠಿತ ‘ಗೋಲ್ಡನ್​ ಗ್ಲೋಬ್ಸ್​ ಅವಾರ್ಡ್ಸ್​​’ನಲ್ಲಿ ಈ ಚಿತ್ರ ಪ್ರಶಸ್ತಿ ಗೆದ್ದಿದೆ. ‘ನಾಟು ನಾಟು..’ ಹಾಡು ಅತ್ಯುತ್ತಮ ಮೂಲ ಹಾಡು ಪ್ರಶಸ್ತಿ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ‘ಆರ್​ಆರ್​ಆರ್​​’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

View this post on Instagram

A post shared by ARR (@arrahman)

ಇದನ್ನೂ ಓದಿ: Rishab Shetty: ಆಸ್ಕರ್​ಗೆ ಕಾಂತಾರ​ ಪೈಪೋಟಿ, ಕಮಲ್​ ಪತ್ರ ಸೇರಿದಂತೆ ಅನೇಕ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ

ಆಸ್ಕರ್ ಅವಾರ್ಡ್ ಕಾರ್ಯಕ್ರಮ ಈ ವರ್ಷ ಮಾರ್ಚ್​ 12ರಂದು ಅಮೆರಿಕದ ಲಾಸ್ ಏಂಜಲೀಸ್​​ನಲ್ಲಿ ನಡೆಯಲಿದೆ. ಎ.ಆರ್​.ರೆಹಮಾನ್ ಸೇರಿ ಭಾರತದ ಐವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆ. ಆದರೆ, ಸಂಪೂರ್ಣವಾಗಿ ಭಾರತದಲ್ಲೇ ಸಿದ್ಧವಾದ ಸಿನಿಮಾಗೆ ಈ ಪ್ರಶಸ್ತಿ ಸಿಕ್ಕಿಲ್ಲ. ಈ ವರ್ಷ ಆ ರೀತಿಯ ಅಪರೂಪದ ದಾಖಲೆ ಸೃಷ್ಟಿ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ