AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

ಮಾರ್ಚ್ 12ರಂದು ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  
ಜೂ.ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Feb 21, 2023 | 9:45 AM

Share

ಜೂ.ಎನ್​ಟಿಆರ್ (Jr.Ntr) ಕುಟುಂಬದ ನಂದಮೂರಿ ತಾರಕ ರತ್ನ ಅವರು ಇತ್ತೀಚೆಗೆ ಮೃತಪಟ್ಟರು. ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಹಲವು ದಿನ ಚಿಕಿತ್ಸೆ ಪಡೆದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು. ಅವರ ಅಂತ್ಯಸಂಸ್ಕಾರ ನೆರವೇರಿದೆ. ಈ ಸಂದರ್ಭದಲ್ಲಿ ಜೂ.ಎನ್​ಟಿಆರ್ ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಜೂ.ಎನ್​ಟಿಆರ್ ಅವರ ಅಮೆರಿಕ ಟ್ರಿಪ್ ಮತ್ತಷ್ಟು ವಿಳಂಬ ಆಗಲಿದೆ.

ಈ ಬಾರಿ ಆಸ್ಕರ್ ಅವಾರ್ಡ್ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಇದಕ್ಕೆ ಕಾರಣ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್​ನಲ್ಲಿರುವುದು. ಮಾರ್ಚ್ 12ರಂದು (ಭಾರತೀಯ ಕಾಲಮಾನ ಮಾರ್ಚ್​ 13 ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ರಾಮ್ ಚರಣ್ ಅವರು ಸೋಮವಾರ (ಫೆ.20) ಅಮೆರಿಕಕ್ಕೆ ತೆರಳಿದ್ದಾರೆ. ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಕೂಡ ಶೀಘ್ರವೇ ಅಮೆರಿಕ ತಲುಪಲಿದ್ದಾರೆ. ಜೂ.ಎನ್​ಟಿಆರ್ ಕೂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಕುಟುಂಬದಲ್ಲಿ ನಡೆದ ದುರ್ಘಟನೆಯಿಂದ ಅವರು ನೊಂದುಕೊಂಡಿದ್ದಾರೆ. ಹೀಗಾಗಿ, ಅಮೆರಿಕಕ್ಕೆ ಅವರು ಪ್ರವಾಸ ಬೆಳೆಸುವುದು ಮತ್ತಷ್ಟು ವಿಳಂಬ ಆಗಲಿದೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಇದನ್ನೂ ಓದಿ: ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಅದರಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ‘ನಾಟು ನಾಟು..’ ಗೀತೆ ಹಾಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ. ಈ ಬಗ್ಗೆ ಅವರು ಕೊಂಚ ನರ್ವಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Tue, 21 February 23

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?