AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

ಮಾರ್ಚ್ 12ರಂದು ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  
ಜೂ.ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Feb 21, 2023 | 9:45 AM

Share

ಜೂ.ಎನ್​ಟಿಆರ್ (Jr.Ntr) ಕುಟುಂಬದ ನಂದಮೂರಿ ತಾರಕ ರತ್ನ ಅವರು ಇತ್ತೀಚೆಗೆ ಮೃತಪಟ್ಟರು. ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಹಲವು ದಿನ ಚಿಕಿತ್ಸೆ ಪಡೆದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು. ಅವರ ಅಂತ್ಯಸಂಸ್ಕಾರ ನೆರವೇರಿದೆ. ಈ ಸಂದರ್ಭದಲ್ಲಿ ಜೂ.ಎನ್​ಟಿಆರ್ ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಜೂ.ಎನ್​ಟಿಆರ್ ಅವರ ಅಮೆರಿಕ ಟ್ರಿಪ್ ಮತ್ತಷ್ಟು ವಿಳಂಬ ಆಗಲಿದೆ.

ಈ ಬಾರಿ ಆಸ್ಕರ್ ಅವಾರ್ಡ್ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಇದಕ್ಕೆ ಕಾರಣ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್​ನಲ್ಲಿರುವುದು. ಮಾರ್ಚ್ 12ರಂದು (ಭಾರತೀಯ ಕಾಲಮಾನ ಮಾರ್ಚ್​ 13 ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ರಾಮ್ ಚರಣ್ ಅವರು ಸೋಮವಾರ (ಫೆ.20) ಅಮೆರಿಕಕ್ಕೆ ತೆರಳಿದ್ದಾರೆ. ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಕೂಡ ಶೀಘ್ರವೇ ಅಮೆರಿಕ ತಲುಪಲಿದ್ದಾರೆ. ಜೂ.ಎನ್​ಟಿಆರ್ ಕೂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಕುಟುಂಬದಲ್ಲಿ ನಡೆದ ದುರ್ಘಟನೆಯಿಂದ ಅವರು ನೊಂದುಕೊಂಡಿದ್ದಾರೆ. ಹೀಗಾಗಿ, ಅಮೆರಿಕಕ್ಕೆ ಅವರು ಪ್ರವಾಸ ಬೆಳೆಸುವುದು ಮತ್ತಷ್ಟು ವಿಳಂಬ ಆಗಲಿದೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಇದನ್ನೂ ಓದಿ: ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಅದರಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ‘ನಾಟು ನಾಟು..’ ಗೀತೆ ಹಾಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ. ಈ ಬಗ್ಗೆ ಅವರು ಕೊಂಚ ನರ್ವಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Tue, 21 February 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ