AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  

ಮಾರ್ಚ್ 12ರಂದು ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ನಂದಮೂರಿ ಕುಟುಂಬದಲ್ಲಿ ಸೂತಕದ ಛಾಯೆ; ಆಸ್ಕರ್​ಗಾಗಿ ಜೂ.ಎನ್​ಟಿಆರ್​ ಅಮೆರಿಕಕ್ಕೆ ತೆರಳುವುದು ಮತ್ತಷ್ಟು ವಿಳಂಬ  
ಜೂ.ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Feb 21, 2023 | 9:45 AM

Share

ಜೂ.ಎನ್​ಟಿಆರ್ (Jr.Ntr) ಕುಟುಂಬದ ನಂದಮೂರಿ ತಾರಕ ರತ್ನ ಅವರು ಇತ್ತೀಚೆಗೆ ಮೃತಪಟ್ಟರು. ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಹಲವು ದಿನ ಚಿಕಿತ್ಸೆ ಪಡೆದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು. ಅವರ ಅಂತ್ಯಸಂಸ್ಕಾರ ನೆರವೇರಿದೆ. ಈ ಸಂದರ್ಭದಲ್ಲಿ ಜೂ.ಎನ್​ಟಿಆರ್ ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಜೂ.ಎನ್​ಟಿಆರ್ ಅವರ ಅಮೆರಿಕ ಟ್ರಿಪ್ ಮತ್ತಷ್ಟು ವಿಳಂಬ ಆಗಲಿದೆ.

ಈ ಬಾರಿ ಆಸ್ಕರ್ ಅವಾರ್ಡ್ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಇದಕ್ಕೆ ಕಾರಣ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್​ನಲ್ಲಿರುವುದು. ಮಾರ್ಚ್ 12ರಂದು (ಭಾರತೀಯ ಕಾಲಮಾನ ಮಾರ್ಚ್​ 13 ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗಲು ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದೆ.

ರಾಮ್ ಚರಣ್ ಅವರು ಸೋಮವಾರ (ಫೆ.20) ಅಮೆರಿಕಕ್ಕೆ ತೆರಳಿದ್ದಾರೆ. ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಕೂಡ ಶೀಘ್ರವೇ ಅಮೆರಿಕ ತಲುಪಲಿದ್ದಾರೆ. ಜೂ.ಎನ್​ಟಿಆರ್ ಕೂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಕುಟುಂಬದಲ್ಲಿ ನಡೆದ ದುರ್ಘಟನೆಯಿಂದ ಅವರು ನೊಂದುಕೊಂಡಿದ್ದಾರೆ. ಹೀಗಾಗಿ, ಅಮೆರಿಕಕ್ಕೆ ಅವರು ಪ್ರವಾಸ ಬೆಳೆಸುವುದು ಮತ್ತಷ್ಟು ವಿಳಂಬ ಆಗಲಿದೆ.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​
Image
‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಇದನ್ನೂ ಓದಿ: ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

ಮಾರ್ಚ್​ 12ರಂದು ಲಾಸ್​ ಏಂಜಲೀಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್​ನ ಅನೇಕ ದಿಗ್ಗಜರು ಅದರಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ‘ನಾಟು ನಾಟು..’ ಗೀತೆ ಹಾಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಗುತ್ತಿದೆ. ಈ ಬಗ್ಗೆ ಅವರು ಕೊಂಚ ನರ್ವಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Tue, 21 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More