AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​​ಆರ್ ಸಿನಿಮಾಕ್ಕೆ ಗೌರವ ನೀಡಿದ ಆಸ್ಕರ್, ರಾಜಮೌಳಿಗೆ ಖುಷಿ

RRR Movie: ರಾಜಮೌಳಿ ನಿರ್ದೇಶಿಸಿ, ಜೂ ಎನ್​ಟಿಆರ್-ರಾಮ್ ಚರಣ್ ನಟನೆಯ ‘ಆರ್​​ಆರ್​​ಆರ್’ ಸಿನಿಮಾ ಈಗಾಗಲೇ ಆಸ್ಕರ್ ಪ್ರಶಸ್ತಿಯೊಂದನ್ನು ಗೆದ್ದಿದೆ. ಇದೀಗ ಮತ್ತೊಮ್ಮೆ ಆಸ್ಕರ್ಸ್ ‘ಆರ್​ಆರ್​​ಆರ್’ ಸಿನಿಮಾಕ್ಕೆ ಗೌರವ ನೀಡಿದೆ. ಆಸ್ಕರ್​ ನೀಡಿರುವ ಗೌರವದಿಂದ ನಿರ್ದೇಶಕ ಎಸ್​ಎಸ್ ರಾಜಮೌಳಿ ಸಖತ್ ಥ್ರಿಲ್ ಆಗಿದ್ದಾರೆ. ಏನಿದು ವಿಷಯ? ಇಲ್ಲಿದೆ ಮಾಹಿತಿ...

ಆರ್​ಆರ್​​ಆರ್ ಸಿನಿಮಾಕ್ಕೆ ಗೌರವ ನೀಡಿದ ಆಸ್ಕರ್, ರಾಜಮೌಳಿಗೆ ಖುಷಿ
Ram Charan Rrr
ಮಂಜುನಾಥ ಸಿ.
|

Updated on:Apr 11, 2025 | 12:44 PM

Share

ರಾಜಮೌಳಿ (SS Rajamouli) ನಿರ್ದೇಶಿಸಿ ಜೂ ಎನ್​ಟಿಆರ್-ರಾಮ್ ಚರಣ್ (Jr NTR-Ram Charan) ನಟಿಸಿದ್ದ ‘ಆರ್​ಆರ್​ಆರ್’ (RRR) ಸಿನಿಮಾ ಹಲವು ದಾಖಲೆಗಳನ್ನು ಮಾಡಿದೆ. ಮುಖ್ಯವಾಗಿ ಭಾರತಕ್ಕೆ ಆಸ್ಕರ್ ತಂದುಕೊಟ್ಟಿದೆ. ವಿದೇಶಿ ಸಿನಿಮಾ ಪ್ರಮುಖರು, ನಿರ್ಮಾಣ ಸಂಸ್ಥೆಗಳು ಭಾರತ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದೆ. ಈಗಾಗಲೇ ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಧಕ್ಕಿದೆ. ಆದರೆ ಇದೀಗ ಮತ್ತೊಮ್ಮೆ ಆಸ್ಕರ್, ‘ಆರ್​ಆರ್​ಆರ್’ ಸಿನಿಮಾ ಅನ್ನು ನೆನಪು ಮಾಡಿಕೊಂಡಿದೆ. ಹೊಸ ಪ್ರಶಸ್ತಿ ಘೋಷಣೆಗೆ ‘ಆರ್​ಆರ್​ಆರ್’ ಸಿನಿಮಾದ ಐಕಾನಿಕ್ ಚಿತ್ರವೊಂದನ್ನು ಬಳಸಿಕೊಂಡಿದೆ.

ಆಸ್ಕರ್​ ಶುರುವಾದಾಗಿನಿಂದಲೂ ಆಕ್ಷನ್ ಡಿಸೈನ್ ವಿಭಾಗಕ್ಕೆ ಯಾವುದೇ ಪ್ರಶಸ್ತಿ ಇರಲಿಲ್ಲ. ಸಿನಿಮಾಗಳ ಕತೆ ಹೇಳುವಲ್ಲಿ ಆಕ್ಷನ್ ಡಿಸೈನ್ ಬಹಳ ಪ್ರಮುಖವಾದ ಪಾತ್ರ ನಿರ್ವಹಿಸುತ್ತದೆ, ಸಿನಿಮಾಗಳಿಗೆ ಆಕ್ಷನ್ ಬಹಳ ಮುಖ್ಯ ಆದರೆ ಆಸ್ಕರ್​ನಲ್ಲಿ ಈ ವರೆಗೆ ಆಕ್ಷನ್​ಗೆ ಪ್ರಶಸ್ತಿ ಇರಲಿಲ್ಲ. ಆದರೆ ಈಗ ಆಸ್ಕರ್ ಈ ಪ್ರಶಸ್ತಿಯನ್ನು ತನ್ನ ಪಟ್ಟಿಗೆ ಸೇರಿಸಲು ಮುಂದಾಗಿದೆ. ಇದರ ಘೋಷಣೆಗೆ ‘ಆರ್​​ಆರ್​ಆರ್’ ಸಿನಿಮಾದ ಆಕ್ಷನ್ ದೃಶ್ಯವೊಂದರ ಚಿತ್ರವನ್ನು ಬಳಸಿಕೊಂಡಿದೆ.

‘ಆರ್​ಆರ್​ಆರ್’ ಸಿನಿಮಾದ ಇಂಟರ್ವೆಲ್ ಫೈಟ್ ನ ಒಂದು ಅದ್ಭುತ ದೃಶ್ಯವನ್ನು ಆಸ್ಕರ್ ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ರಾಮ್ ಚರಣ್ ಹಾರಿ ಹುಲಿಗೆ ಹೊಡೆಯುವ ದೃಶ್ಯದ ಚಿತ್ರ ಇದಾಗಿದೆ. ಆ ಮೂಲಕ ‘ಆರ್​ಆರ್​ಆರ್’ ಸಿನಿಮಾದ ಫೈಟ್ ಡಿಸೈನ್​ಗೆ ಗೌರವ ನೀಡಿದೆ ಆಸ್ಕರ್. ಮತ್ತೊಂದು ವಿಶೇಷವೆಂದರೆ ‘ಆರ್​ಆರ್​ಆರ್​’ ಸಿನಿಮಾದ ಚಿತ್ರವನ್ನು ವಿಶ್ವದ ಅತ್ಯುತ್ತಮ ಆಕ್ಷನ್ ಸಿನಿಮಾಗಳಲ್ಲಿ ಮುಖ್ಯವಾದ ‘ಮಿಷನ್ ಇಂಪಾಸಿಬಲ್’ನ ಜೊತೆಗೆ ಹಂಚಿಕೊಳ್ಳಲಾಗಿದೆ. ಇದು ಸಾಮಾನ್ಯ ಗೌರವವೇನಲ್ಲ. ‘ಆರ್​ಆರ್​ಆರ್’, ‘ಮಿಷನ್ ಇಂಪಾಸಿಬಲ್’ ಜೊತೆಗೆ ಆಸ್ಕರ್ ವಿಜೇತ ‘ಎವರಿಥಿಂಗ್ ಎವರಿವೇರ್ ಆಲ್ ಅಟ್ ಒನ್ಸ್’ ಸಿನಿಮಾದ ಒಂದು ಚಿತ್ರವನ್ನು ಸಹ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
ಐಶಾರಾಮಿ ಕಾರು ಖರೀದಿ ಮಾಡಿದ ರಶ್ಮಿಕಾ ಮಂದಣ್ಣ, ಬೆಲೆ ಎಷ್ಟು ಕೋಟಿ?
Image
‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಮುಂದೂಡಿದ ಮಂಚು ಮನೋಜ್, ಯಾವುದರ ಭಯ?
Image
ರಶ್ಮಿಕಾಗೆ ಹಿಂದಿ ಕಲಿಯಲು ಆಗಲ್ಲ, ಕಾರಣ ಹೇಳಿದ ಸಲ್ಮಾನ್ ಖಾನ್
Image
ಎಲ್ 2:ಎಂಪುರಾನ್ ಕಲೆಕ್ಷನ್, ಮೂರೇ ದಿನಕ್ಕೆ ಹಳೆ ದಾಖಲೆಗಳು ಉಡೀಸ್

ಇದನ್ನೂ ಓದಿ:97ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ: ವಿನ್ನರ್ ಸಂಪೂರ್ಣ ಲಿಸ್ಟ್ ಇಲ್ಲಿದೆ

ಆಸ್ಕರ್ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ರಾಜಮೌಳಿ, ‘100 ವರ್ಷಗಳ ಕಾಯುವಿಕೆ ಬಳಿಕ ಕೊನೆಗೂ ಆಸ್ಕರ್​ನಲ್ಲಿ ಆಕ್ಷನ್ ಡಿಸೈನ್ ವಿಭಾಗಕ್ಕೆ ಪ್ರಶಸ್ತಿಯನ್ನು ಸೇರಿಸುವುದು ಬಹಳ ಖುಷಿಯ ವಿಷಯ’ ಎಂದಿರುವ ರಾಜಮೌಳಿ ಇದಕ್ಕೆ ಕಾರಣರಾದ ಕೆಲವರಿಗೆ ಧನ್ಯವಾದ ಹೇಳಿದ್ದಾರೆ. ನೆಟ್​ಫ್ಲಿಕ್ಸ್​ ಸಿಇಓಗೂ ಧನ್ಯವಾದ ಹೇಳಿದ್ದಾರೆ. ತಮ್ಮ ‘ಆರ್​ಆರ್​ಆರ್’ ಸಿನಿಮಾದ ಚಿತ್ರ ಹಂಚಿಕೊಂಡಿದ್ದು ಖುಷಿ ತಂದಿದೆ ಎಂದು ಸಹ ಅವರು ಹೇಳಿದ್ದಾರೆ. ಅಂದಹಾಗೆ ಹಾಲಿವುಡ್​ನ ನಿಕ್ ಪೋವೆಲ್ ಮತ್ತು ದಕ್ಷಿಣದ ಸ್ಟಾರ್ ಆಕ್ಷನ್ ಕೊರಿಯೋಗ್ರಫರ್ ಆಗಿರುವ ಕಿಂಗ್ ಸೋಲೊಮನ್ ಅವರುಗಳು ‘ಆರ್​ಆರ್​ಆರ್’ ಸಿನಿಮಾದ ಆಕ್ಷನ್ ಕೊರಿಯೋಗ್ರಫಿ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Fri, 11 April 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ