AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscars 2021: ಆಸ್ಕರ್​ 2021ರ ಸಮಾರಂಭಕ್ಕೆ ಮಾಸ್ಕ್​ ಧರಿಸಿ ಬಂದ್ರೆ ಇಲ್ಲ ಎಂಟ್ರಿ

ಈ ಬಾರಿ ಯಾವ ಚಿತ್ರಗಳು ಆಸ್ಕರ್ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಇದೆ. ವಿಶೇಷ ಎಂದರೆ ನೆಟ್​ಫ್ಲಿಕ್ಸ್​ನ 36 ಸಿನಿಮಾಗಳು ಆಸ್ಕರ್​ ಸ್ಪರ್ಧೆಯಲ್ಲಿ ಸ್ಥಾನ ಪಡೆದುಕೊಂಡಿವೆ.

Oscars 2021: ಆಸ್ಕರ್​ 2021ರ ಸಮಾರಂಭಕ್ಕೆ ಮಾಸ್ಕ್​ ಧರಿಸಿ ಬಂದ್ರೆ ಇಲ್ಲ ಎಂಟ್ರಿ
ಆಸ್ಕರ್​ 2021
ರಾಜೇಶ್ ದುಗ್ಗುಮನೆ
| Edited By: |

Updated on:Apr 25, 2021 | 8:56 PM

Share

ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಮುಂಚೂಣಿಯಲ್ಲಿರುವ ಆಸ್ಕರ್​​ 2021 ಪ್ರಶಸ್ತಿ ಸಮಾರಂಭ ಸೋಮವಾರ (ಏಪ್ರಿಲ್​ 26) ನಡೆಯಲಿದೆ. ಲಾಸ್​ ಏಂಜಲೀಸ್​ನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಕೊರೊನಾ ವೈರಸ್​ ಅಮೆರಿಕದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಿದ್ದರೂ, ಕಾರ್ಯಕ್ರಮಕ್ಕೆ ತೆರಳುವವರು ಮಾಸ್ಕ್​ ಧರಿಸುವಂತಿಲ್ಲ. ಕಮರ್ಷಿಯಲ್​ ಆ್ಯಡ್​ ಬ್ರೇಕ್​ನಲ್ಲಿ ಮಾತ್ರ ಮಾಸ್ಕ್​ ಧರಿಸಬಹುದಾಗಿದೆ.

ಈ ಬಾರಿ ಯಾವ ಚಿತ್ರಗಳು ಆಸ್ಕರ್ ಬಾಚಿಕೊಳ್ಳಲಿದೆ ಎನ್ನುವ ಕುತೂಹಲ ಇದೆ. ವಿಶೇಷ ಎಂದರೆ ನೆಟ್​ಫ್ಲಿಕ್ಸ್​ನ 36 ಸಿನಿಮಾಗಳು ಆಸ್ಕರ್​ ಸ್ಪರ್ಧೆಯಲ್ಲಿ ಸ್ಥಾನ ಪಡೆದುಕೊಂಡಿವೆ. ಮಾಂಕ್​ ಹೆಸರಿನ ಸಿನಿಮಾ 10 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ.

ಭಾರತೀಯ ಕಾಲಮಾನ ಮುಂಜಾನೆ 5:30ರಿಂದ 8:30ರ ವರೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಆಸ್ಕರ್​ ಕಾರ್ಯಕ್ರಮವನ್ನು ಆಸ್ಕರ್​​​ನ​ ಅಧಿಕೃತ ಯೂಟ್ಯೂಬ್​ ಚಾನೆಲ್​ನಲ್ಲಿ ವೀಕ್ಷಿಸಬಹುದು. ಸ್ಟಾರ್​ ವರ್ಲ್ಡ್​​ ಹಾಗೂ ಸ್ಟಾರ್​ ಮೂವಿಸ್​ನಲ್ಲಿ ರಾತ್ರಿ 8:30ಕ್ಕೆ ಕಾರ್ಯಕ್ರಮ ರಿ ಟೆಲಿಕಾಸ್ಟ್​ ಆಗಲಿದೆ. 93ನೇ ಪ್ರಶಸ್ತಿ ಸಮಾರಂಭವನ್ನು ರಿಜ್​ ಅಹ್ಮದ್, ವೈಲಾ ಡೇವಿಸ್​, ಬ್ರಾಡ್​ ಪಿಟ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ನಡೆಸಿಕೊಡುತ್ತಿದ್ದಾರೆ.

ಮಾಸ್ಕ್​ ಏಕೆ ಧರಿಸುವಂತಿಲ್ಲ?

ಅಮೆರಿಕದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಕೊರೊನಾ ಹೆಚ್ಚಿರುವ ರಾಷ್ಟ್ರಗಳು ಮಾಸ್ಕ್​ ಧರಿಸುವುದನ್ನು ಕಡ್ಡಾಯ ಮಾಡಿವೆ. ಆದರೆ, ಈ ಕಾರ್ಯಕ್ರಮಕ್ಕೆ ಎಂಟ್ರಿ ತೆಗೆದುಕೊಳ್ಳುವವರು ಮಾಸ್ಕ್​ ಧರಿಸುವಂತಿಲ್ಲ. ಕ್ಯಾಮೆರಾ ಎದುರಿರುವಾಗ ಮಾಸ್ಕ್​ ಧರಿಸಿ ಕೂತಿರುವುದು ಅಷ್ಟು ಸುಂದರವಾಗಿ ಕಾಣುವುದಿಲ್ಲ ಎಂಬುದು ಆಯೋಜಕರ ನಂಬಿಕೆ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ನಾಮಿನಿಗಳು, ಶೋ ನಡೆಸಿಕೊಡುವವರು ಹಾಗೂ ನಿಯಮಿತಿ ಗೆಸ್ಟ್​​ಗಳಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗುತ್ತಿದೆ. ಇವರು ಕೊರೊನಾ ಪರೀಕ್ಷೆ ಒಳಪಟ್ಟಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

Published On - 8:48 pm, Sun, 25 April 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್