AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ. ಈಗ ಅವರ ‘ದಿ ವೈಟ್​ ಟೈಗರ್’ ಸಿನಿಮಾ ಆಸ್ಕರ್​ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿದೆ.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ
ದಿ ವೈಟ್​ ಟೈಗರ್​ ಸಿನಿಮಾ
ಮದನ್​ ಕುಮಾರ್​
|

Updated on: Mar 16, 2021 | 6:39 PM

Share

ಪ್ರತಿ ವರ್ಷದಂತೆ ಈ ವರ್ಷ ಕೂಡ ಆಸ್ಕರ್​ ಪ್ರಶಸ್ತಿಗಾಗಿ ಹಣಾಹಣಿ ಜೋರಾಗಿದೆ. ಯಾವ ಯಾವ ಚಿತ್ರಕ್ಕೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ. ಕೊರೊನಾ ಕಾರಣದಿಂದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಅನೇಕ ಸಿನಿಮಾಗಳಿಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ವೈಟ್​ ಟೈಗರ್​’ ಸಿನಿಮಾ ಕೂಡ ಈ ವರ್ಷದ ಆಸ್ಕರ್​ ರೇಸ್​ನಲ್ಲಿದೆ. ಬೆಸ್ಟ್​ ಅಡಾಪ್ಟೆಡ್​ ಸ್ಕ್ರೀನ್​ ಪ್ಲೇ ವಿಭಾಗದಲ್ಲಿ ಈ ಸಿನಿಮಾ ಪೈಪೋಟಿ ನೀಡಲಿದೆ. ಈ ಬಾರಿ ಸ್ಪರ್ಧೆಗೆ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿಯನ್ನು ಮಾ.15ರಂದು ಘೋಷಿಸಲಾಯಿತು. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಸ್​ ಅವರು 23 ಕೆಟಗರಿಗಳಲ್ಲಿ ನಾಮ ನಿರ್ದೇಶನಗೊಂಡ ಸಿನಿಮಾ ಹೆಸರುಗಳನ್ನು ಘೋಷಿಸಿದರು. ಅದರಲ್ಲಿ ‘ದಿ ವೈಟ್​ ಟೈಗರ್​’ ಕೂಡ ಸ್ಥಾನ ಪಡೆದುಕೊಂಡಿದೆ,

ತಮ್ಮದೇ ಸಿನಿಮಾ ಆಸ್ಕರ್​ನಲ್ಲಿ ​ಹಣಾಹಣಿ ನಡೆಸುತ್ತಿದ್ದು, ಅದನ್ನು ಘೋಷಿಸುವಾಗ ಪ್ರಿಯಾಂಕಾ ಮೊಗದಲ್ಲಿ ಸಂಭ್ರಮ ಎದ್ದು ಕಾಣುತ್ತಿತ್ತು. 2021ರ ಜನವರಿ 22ರಂದು ‘ದಿ ವೈಟ್​ ಟೈಗರ್​’ ಚಿತ್ರ ಬಿಡುಗಡೆ ಆಗಿತ್ತು. ನಟಿಸುವುದರ ಜೊತೆ ಸಹ-ನಿರ್ಮಾಪಕಿ ಆಗಿಯೂ ಪ್ರಿಯಾಂಕಾ ಚೋಪ್ರಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಾಮಿನ್​ ಬಹ್ರಾನಿ ಅವರು ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಜೊತೆ ರಾಜ್​ಕುಮಾರ್​ ರಾವ್​ ಮತ್ತು ಆದರ್ಶ್​ ಗೌರವ್​ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.

‘ನಾವು ಈಗ ತಾನೇ ಆಸ್ಕರ್​ಗೆ ನಾಮನಿರ್ದೇಶನಗೊಂಡೆವು. ನಿರ್ದೇಶಕ ರಾಮಿನ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಈ ಚಿತ್ರದ ನಾಮನಿರ್ದೇಶನವನ್ನು ನಾನೇ ಘೋಷಿಸಿದ್ದು ಖುಷಿ ನೀಡಿತು. ಹೆಮ್ಮೆ ಎನಿಸುತ್ತಿದೆ’ ಎಂದು ಪ್ರಿಯಾಂಕಾ ಟ್ವೀಟ್​ ಮಾಡಿದ್ದಾರೆ. ಫಾದರ್​, ನೋಮಾಡ್​ಲ್ಯಾಂಡ್​, ಒನ್​ ನೈಟ್​ ಇನ್​ ಮಿಯಾಮಿ ಸಿನಿಮಾಗಳ ಜೊತೆ ಚಿತ್ರ ದಿ ವೈಟ್​ ಟೈಗರ್ ಸ್ಪರ್ಧಿಸಲಿದೆ. ಏ.25ರಂದು ಆಸ್ಕರ್​ ಪ್ರಶಸ್ತಿ ಪ್ರಕಟ ಆಗಲಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಪ್ರಿಯಾಂಕಾ ಚೋಪ್ರಾ ಫೋಟೋಗಳು

ಸೇನಾ ಪೋಷಾಕಿನಲ್ಲಿ ಪ್ರಿಯಾಂಕಾ ಚೋಪ್ರಾ: ಇದು ಹೊಸ ಸಿನಿಮಾ ಮ್ಯಾಟರ್​ ಅಲ್ಲ!

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ