AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ. ಈಗ ಅವರ ‘ದಿ ವೈಟ್​ ಟೈಗರ್’ ಸಿನಿಮಾ ಆಸ್ಕರ್​ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿದೆ.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ
ದಿ ವೈಟ್​ ಟೈಗರ್​ ಸಿನಿಮಾ
ಮದನ್​ ಕುಮಾರ್​
|

Updated on: Mar 16, 2021 | 6:39 PM

Share

ಪ್ರತಿ ವರ್ಷದಂತೆ ಈ ವರ್ಷ ಕೂಡ ಆಸ್ಕರ್​ ಪ್ರಶಸ್ತಿಗಾಗಿ ಹಣಾಹಣಿ ಜೋರಾಗಿದೆ. ಯಾವ ಯಾವ ಚಿತ್ರಕ್ಕೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ. ಕೊರೊನಾ ಕಾರಣದಿಂದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಅನೇಕ ಸಿನಿಮಾಗಳಿಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ವೈಟ್​ ಟೈಗರ್​’ ಸಿನಿಮಾ ಕೂಡ ಈ ವರ್ಷದ ಆಸ್ಕರ್​ ರೇಸ್​ನಲ್ಲಿದೆ. ಬೆಸ್ಟ್​ ಅಡಾಪ್ಟೆಡ್​ ಸ್ಕ್ರೀನ್​ ಪ್ಲೇ ವಿಭಾಗದಲ್ಲಿ ಈ ಸಿನಿಮಾ ಪೈಪೋಟಿ ನೀಡಲಿದೆ. ಈ ಬಾರಿ ಸ್ಪರ್ಧೆಗೆ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿಯನ್ನು ಮಾ.15ರಂದು ಘೋಷಿಸಲಾಯಿತು. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಸ್​ ಅವರು 23 ಕೆಟಗರಿಗಳಲ್ಲಿ ನಾಮ ನಿರ್ದೇಶನಗೊಂಡ ಸಿನಿಮಾ ಹೆಸರುಗಳನ್ನು ಘೋಷಿಸಿದರು. ಅದರಲ್ಲಿ ‘ದಿ ವೈಟ್​ ಟೈಗರ್​’ ಕೂಡ ಸ್ಥಾನ ಪಡೆದುಕೊಂಡಿದೆ,

ತಮ್ಮದೇ ಸಿನಿಮಾ ಆಸ್ಕರ್​ನಲ್ಲಿ ​ಹಣಾಹಣಿ ನಡೆಸುತ್ತಿದ್ದು, ಅದನ್ನು ಘೋಷಿಸುವಾಗ ಪ್ರಿಯಾಂಕಾ ಮೊಗದಲ್ಲಿ ಸಂಭ್ರಮ ಎದ್ದು ಕಾಣುತ್ತಿತ್ತು. 2021ರ ಜನವರಿ 22ರಂದು ‘ದಿ ವೈಟ್​ ಟೈಗರ್​’ ಚಿತ್ರ ಬಿಡುಗಡೆ ಆಗಿತ್ತು. ನಟಿಸುವುದರ ಜೊತೆ ಸಹ-ನಿರ್ಮಾಪಕಿ ಆಗಿಯೂ ಪ್ರಿಯಾಂಕಾ ಚೋಪ್ರಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಾಮಿನ್​ ಬಹ್ರಾನಿ ಅವರು ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಜೊತೆ ರಾಜ್​ಕುಮಾರ್​ ರಾವ್​ ಮತ್ತು ಆದರ್ಶ್​ ಗೌರವ್​ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.

‘ನಾವು ಈಗ ತಾನೇ ಆಸ್ಕರ್​ಗೆ ನಾಮನಿರ್ದೇಶನಗೊಂಡೆವು. ನಿರ್ದೇಶಕ ರಾಮಿನ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಈ ಚಿತ್ರದ ನಾಮನಿರ್ದೇಶನವನ್ನು ನಾನೇ ಘೋಷಿಸಿದ್ದು ಖುಷಿ ನೀಡಿತು. ಹೆಮ್ಮೆ ಎನಿಸುತ್ತಿದೆ’ ಎಂದು ಪ್ರಿಯಾಂಕಾ ಟ್ವೀಟ್​ ಮಾಡಿದ್ದಾರೆ. ಫಾದರ್​, ನೋಮಾಡ್​ಲ್ಯಾಂಡ್​, ಒನ್​ ನೈಟ್​ ಇನ್​ ಮಿಯಾಮಿ ಸಿನಿಮಾಗಳ ಜೊತೆ ಚಿತ್ರ ದಿ ವೈಟ್​ ಟೈಗರ್ ಸ್ಪರ್ಧಿಸಲಿದೆ. ಏ.25ರಂದು ಆಸ್ಕರ್​ ಪ್ರಶಸ್ತಿ ಪ್ರಕಟ ಆಗಲಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಪ್ರಿಯಾಂಕಾ ಚೋಪ್ರಾ ಫೋಟೋಗಳು

ಸೇನಾ ಪೋಷಾಕಿನಲ್ಲಿ ಪ್ರಿಯಾಂಕಾ ಚೋಪ್ರಾ: ಇದು ಹೊಸ ಸಿನಿಮಾ ಮ್ಯಾಟರ್​ ಅಲ್ಲ!

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್