AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ. ಈಗ ಅವರ ‘ದಿ ವೈಟ್​ ಟೈಗರ್’ ಸಿನಿಮಾ ಆಸ್ಕರ್​ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿದೆ.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ
ದಿ ವೈಟ್​ ಟೈಗರ್​ ಸಿನಿಮಾ
ಮದನ್​ ಕುಮಾರ್​
|

Updated on: Mar 16, 2021 | 6:39 PM

Share

ಪ್ರತಿ ವರ್ಷದಂತೆ ಈ ವರ್ಷ ಕೂಡ ಆಸ್ಕರ್​ ಪ್ರಶಸ್ತಿಗಾಗಿ ಹಣಾಹಣಿ ಜೋರಾಗಿದೆ. ಯಾವ ಯಾವ ಚಿತ್ರಕ್ಕೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ. ಕೊರೊನಾ ಕಾರಣದಿಂದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಅನೇಕ ಸಿನಿಮಾಗಳಿಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ವೈಟ್​ ಟೈಗರ್​’ ಸಿನಿಮಾ ಕೂಡ ಈ ವರ್ಷದ ಆಸ್ಕರ್​ ರೇಸ್​ನಲ್ಲಿದೆ. ಬೆಸ್ಟ್​ ಅಡಾಪ್ಟೆಡ್​ ಸ್ಕ್ರೀನ್​ ಪ್ಲೇ ವಿಭಾಗದಲ್ಲಿ ಈ ಸಿನಿಮಾ ಪೈಪೋಟಿ ನೀಡಲಿದೆ. ಈ ಬಾರಿ ಸ್ಪರ್ಧೆಗೆ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿಯನ್ನು ಮಾ.15ರಂದು ಘೋಷಿಸಲಾಯಿತು. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಸ್​ ಅವರು 23 ಕೆಟಗರಿಗಳಲ್ಲಿ ನಾಮ ನಿರ್ದೇಶನಗೊಂಡ ಸಿನಿಮಾ ಹೆಸರುಗಳನ್ನು ಘೋಷಿಸಿದರು. ಅದರಲ್ಲಿ ‘ದಿ ವೈಟ್​ ಟೈಗರ್​’ ಕೂಡ ಸ್ಥಾನ ಪಡೆದುಕೊಂಡಿದೆ,

ತಮ್ಮದೇ ಸಿನಿಮಾ ಆಸ್ಕರ್​ನಲ್ಲಿ ​ಹಣಾಹಣಿ ನಡೆಸುತ್ತಿದ್ದು, ಅದನ್ನು ಘೋಷಿಸುವಾಗ ಪ್ರಿಯಾಂಕಾ ಮೊಗದಲ್ಲಿ ಸಂಭ್ರಮ ಎದ್ದು ಕಾಣುತ್ತಿತ್ತು. 2021ರ ಜನವರಿ 22ರಂದು ‘ದಿ ವೈಟ್​ ಟೈಗರ್​’ ಚಿತ್ರ ಬಿಡುಗಡೆ ಆಗಿತ್ತು. ನಟಿಸುವುದರ ಜೊತೆ ಸಹ-ನಿರ್ಮಾಪಕಿ ಆಗಿಯೂ ಪ್ರಿಯಾಂಕಾ ಚೋಪ್ರಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಾಮಿನ್​ ಬಹ್ರಾನಿ ಅವರು ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಜೊತೆ ರಾಜ್​ಕುಮಾರ್​ ರಾವ್​ ಮತ್ತು ಆದರ್ಶ್​ ಗೌರವ್​ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.

‘ನಾವು ಈಗ ತಾನೇ ಆಸ್ಕರ್​ಗೆ ನಾಮನಿರ್ದೇಶನಗೊಂಡೆವು. ನಿರ್ದೇಶಕ ರಾಮಿನ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಈ ಚಿತ್ರದ ನಾಮನಿರ್ದೇಶನವನ್ನು ನಾನೇ ಘೋಷಿಸಿದ್ದು ಖುಷಿ ನೀಡಿತು. ಹೆಮ್ಮೆ ಎನಿಸುತ್ತಿದೆ’ ಎಂದು ಪ್ರಿಯಾಂಕಾ ಟ್ವೀಟ್​ ಮಾಡಿದ್ದಾರೆ. ಫಾದರ್​, ನೋಮಾಡ್​ಲ್ಯಾಂಡ್​, ಒನ್​ ನೈಟ್​ ಇನ್​ ಮಿಯಾಮಿ ಸಿನಿಮಾಗಳ ಜೊತೆ ಚಿತ್ರ ದಿ ವೈಟ್​ ಟೈಗರ್ ಸ್ಪರ್ಧಿಸಲಿದೆ. ಏ.25ರಂದು ಆಸ್ಕರ್​ ಪ್ರಶಸ್ತಿ ಪ್ರಕಟ ಆಗಲಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಪ್ರಿಯಾಂಕಾ ಚೋಪ್ರಾ ಫೋಟೋಗಳು

ಸೇನಾ ಪೋಷಾಕಿನಲ್ಲಿ ಪ್ರಿಯಾಂಕಾ ಚೋಪ್ರಾ: ಇದು ಹೊಸ ಸಿನಿಮಾ ಮ್ಯಾಟರ್​ ಅಲ್ಲ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ