AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ. ಈಗ ಅವರ ‘ದಿ ವೈಟ್​ ಟೈಗರ್’ ಸಿನಿಮಾ ಆಸ್ಕರ್​ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿದೆ.

ಆಸ್ಕರ್​ ರೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಿನಿಮಾ! ಹಾಲಿವುಡ್​ ಮಂದಿ ಎದುರು ‘ದಿ ವೈಟ್​ ಟೈಗರ್​’ ಪೈಪೋಟಿ
ದಿ ವೈಟ್​ ಟೈಗರ್​ ಸಿನಿಮಾ
ಮದನ್​ ಕುಮಾರ್​
|

Updated on: Mar 16, 2021 | 6:39 PM

Share

ಪ್ರತಿ ವರ್ಷದಂತೆ ಈ ವರ್ಷ ಕೂಡ ಆಸ್ಕರ್​ ಪ್ರಶಸ್ತಿಗಾಗಿ ಹಣಾಹಣಿ ಜೋರಾಗಿದೆ. ಯಾವ ಯಾವ ಚಿತ್ರಕ್ಕೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ. ಕೊರೊನಾ ಕಾರಣದಿಂದ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಅನೇಕ ಸಿನಿಮಾಗಳಿಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ವೈಟ್​ ಟೈಗರ್​’ ಸಿನಿಮಾ ಕೂಡ ಈ ವರ್ಷದ ಆಸ್ಕರ್​ ರೇಸ್​ನಲ್ಲಿದೆ. ಬೆಸ್ಟ್​ ಅಡಾಪ್ಟೆಡ್​ ಸ್ಕ್ರೀನ್​ ಪ್ಲೇ ವಿಭಾಗದಲ್ಲಿ ಈ ಸಿನಿಮಾ ಪೈಪೋಟಿ ನೀಡಲಿದೆ. ಈ ಬಾರಿ ಸ್ಪರ್ಧೆಗೆ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿಯನ್ನು ಮಾ.15ರಂದು ಘೋಷಿಸಲಾಯಿತು. ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಸ್​ ಅವರು 23 ಕೆಟಗರಿಗಳಲ್ಲಿ ನಾಮ ನಿರ್ದೇಶನಗೊಂಡ ಸಿನಿಮಾ ಹೆಸರುಗಳನ್ನು ಘೋಷಿಸಿದರು. ಅದರಲ್ಲಿ ‘ದಿ ವೈಟ್​ ಟೈಗರ್​’ ಕೂಡ ಸ್ಥಾನ ಪಡೆದುಕೊಂಡಿದೆ,

ತಮ್ಮದೇ ಸಿನಿಮಾ ಆಸ್ಕರ್​ನಲ್ಲಿ ​ಹಣಾಹಣಿ ನಡೆಸುತ್ತಿದ್ದು, ಅದನ್ನು ಘೋಷಿಸುವಾಗ ಪ್ರಿಯಾಂಕಾ ಮೊಗದಲ್ಲಿ ಸಂಭ್ರಮ ಎದ್ದು ಕಾಣುತ್ತಿತ್ತು. 2021ರ ಜನವರಿ 22ರಂದು ‘ದಿ ವೈಟ್​ ಟೈಗರ್​’ ಚಿತ್ರ ಬಿಡುಗಡೆ ಆಗಿತ್ತು. ನಟಿಸುವುದರ ಜೊತೆ ಸಹ-ನಿರ್ಮಾಪಕಿ ಆಗಿಯೂ ಪ್ರಿಯಾಂಕಾ ಚೋಪ್ರಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಾಮಿನ್​ ಬಹ್ರಾನಿ ಅವರು ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಜೊತೆ ರಾಜ್​ಕುಮಾರ್​ ರಾವ್​ ಮತ್ತು ಆದರ್ಶ್​ ಗೌರವ್​ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.

‘ನಾವು ಈಗ ತಾನೇ ಆಸ್ಕರ್​ಗೆ ನಾಮನಿರ್ದೇಶನಗೊಂಡೆವು. ನಿರ್ದೇಶಕ ರಾಮಿನ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಈ ಚಿತ್ರದ ನಾಮನಿರ್ದೇಶನವನ್ನು ನಾನೇ ಘೋಷಿಸಿದ್ದು ಖುಷಿ ನೀಡಿತು. ಹೆಮ್ಮೆ ಎನಿಸುತ್ತಿದೆ’ ಎಂದು ಪ್ರಿಯಾಂಕಾ ಟ್ವೀಟ್​ ಮಾಡಿದ್ದಾರೆ. ಫಾದರ್​, ನೋಮಾಡ್​ಲ್ಯಾಂಡ್​, ಒನ್​ ನೈಟ್​ ಇನ್​ ಮಿಯಾಮಿ ಸಿನಿಮಾಗಳ ಜೊತೆ ಚಿತ್ರ ದಿ ವೈಟ್​ ಟೈಗರ್ ಸ್ಪರ್ಧಿಸಲಿದೆ. ಏ.25ರಂದು ಆಸ್ಕರ್​ ಪ್ರಶಸ್ತಿ ಪ್ರಕಟ ಆಗಲಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಟಿ ಪ್ರಿಯಾಂಕಾ ಚೋಪ್ರಾ ಫೋಟೋಗಳು

ಸೇನಾ ಪೋಷಾಕಿನಲ್ಲಿ ಪ್ರಿಯಾಂಕಾ ಚೋಪ್ರಾ: ಇದು ಹೊಸ ಸಿನಿಮಾ ಮ್ಯಾಟರ್​ ಅಲ್ಲ!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ