AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ‘19.20.21’ ಸಿನಿಮಾ; ಈ ಚಿತ್ರದಲ್ಲಿದೆ ಕನ್ನಡದ ಮಣ್ಣಿನ ನೈಜ ಕಥೆ

‘19.20.21’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆದ ಬಗ್ಗೆ ನಿರ್ದೇಶಕ ಮಂಸೋರೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಶೃಂಗ ಬಿ.ವಿ. ಅಭಿನಯಿಸಿದ್ದಾರೆ. ಹಲವು ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಸಿನಿಮಾ ಲಭ್ಯವಾಗಿದೆ.

ಒಟಿಟಿಗೆ ಬಂತು ‘19.20.21’ ಸಿನಿಮಾ; ಈ ಚಿತ್ರದಲ್ಲಿದೆ ಕನ್ನಡದ ಮಣ್ಣಿನ ನೈಜ ಕಥೆ
19.20.21 ಸಿನಿಮಾ
ಮದನ್​ ಕುಮಾರ್​
|

Updated on: Jan 12, 2024 | 7:43 PM

Share

ಕಳೆದ ವರ್ಷ ಮಾರ್ಚ್​ ತಿಂಗಳಲ್ಲಿ ಕನ್ನಡದ ‘19.20.21’ ಸಿನಿಮಾ (19.20.21 Kannada Movie) ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ನೋಡಿದ ಎಲ್ಲರೂ ಈ ಸಿನಿಮಾಗೆ ಮೆಚ್ಚುಗೆ ಸೂಚಿಸಿದರು. ವಿಮರ್ಶಕರು ಕೂಡ ಪ್ರಶಂಸೆ ವ್ಯಕ್ತಪಡಿಸಿದರು. ನೈಜ ಘಟನೆ ಆಧಾರಿತ ಈ ಚಿತ್ರವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದ ಸಿನಿಪ್ರಿಯರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ಇಂದಿನಿಂದ (ಜನವರಿ 12) ಒಟಿಟಿ ಅಂಗಳಕ್ಕೆ ‘19.20.21’ ಸಿನಿಮಾ ಕಾಲಿಟ್ಟಿದೆ. ಈ ಸಿನಿಮಾಗೆ ಮಂಸೋರೆ (Mansore) ನಿರ್ದೇಶನ ಮಾಡಿದ್ದಾರೆ. ರಿಯಲಿಸ್ಟಿಕ್​ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಒಟಿಟಿ (OTT Platform) ಮೂಲಕ ಈ ಚಿತ್ರ ಇನ್ನೂ ಹೆಚ್ಚಿನ ಪ್ರೇಕ್ಷಕರನ್ನು ತಲುಪುತ್ತಿದೆ.

‘19.20.21’ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡದವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಕನ್ನಡದ ಚಿತ್ರಗಳಿಗೆ ಒಟಿಟಿಯಲ್ಲಿ ಸರಿಯಾದ ರೀತಿಯ ಮನ್ನಣೆ ದೊರೆಯುತ್ತಿಲ್ಲ. ಅದರಲ್ಲೂ ಸ್ವಲ್ಪ ನಿಷ್ಠುರವಾದ ಕಥೆಗಳು ಇದ್ದರಂತೂ ಒಟಿಟಿ ಸಂಸ್ಥೆಗಳು ಮೀನಾಮೇಷ ಎನಿಸುತ್ತವೆ. ಈ ರೀತಿ ಎದುರಾದ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ‘19.20.21’ ಚಿತ್ರ ಈಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿದೆ.

ಒಟಿಟಿಯಲ್ಲಿ ಬಿಡುಗಡೆ ಆದ ಬಗ್ಗೆ ನಿರ್ದೇಶಕ ಮಂಸೋರೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಿಮ್ಮ ಅಂಗೈಯಲ್ಲಿ ನಮ್ಮ ಸಿನಿಮಾ. ಹಲವು ವಿಘ್ನಗಳನ್ನು ದಾಟಿ ನಿಮ್ಮ ಬಳಿಗೆ ನಮ್ಮ ಸಿನಿಮಾ ಬಂದಿದೆ. ನಮ್ಮದೇ ನೆಲದ ಪುಟ್ಟ ಸಮುದಾಯ ಮಲೆಕುಡಿಯರ ಸ್ಫೂರ್ತಿದಾಯಕ ಕತೆಯನ್ನು ಎಲ್ಲರಿಗೂ ತಲುಪಿಸಬೇಕೆಂಬ ಕನಸು ನನಸಾಗಿದೆ. ಜೊತೆಗೆ ನಮ್ಮ ಇನ್ನೊಂದು ಸಿನಿಮಾ ಕೂಡ ಇದೆ. ನೋಡಿ, ಹಂಚಿ, ಪ್ರೋತ್ಸಾಹಿಸಿ’ ಎಂದು ಮಂಸೋರೆ ಬರೆದುಕೊಂಡಿದ್ದಾರೆ.

ಅಪ್ಪಟ ಕನ್ನಡದ ಮಣ್ಣಿನ ಕಥೆಗಳು ಈಗ ಹಿಟ್​ ಆಗುತ್ತಿವೆ. ‘ಕಾಟೇರ’, ‘ಕಾಂತಾರ’ ಮುಂತಾದ ಚಿತ್ರಗಳ ರೀತಿಯೇ ‘19.20.21’ ಚಿತ್ರದ್ದು ಕೂಡ ಅಪ್ಪಟ ಕನ್ನಡದ ನೆಲದ ಕಥೆ. ನೆಲದ ಹಕ್ಕುಗಳ ಜೊತೆಗೆ ಅಂಟಿಕೊಂಡಿರುವ ಕಥೆ. ಹಾಗಾಗಿ ಒಟಿಟಿಯಲ್ಲಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ ಎಂಬ ನಿರೀಕ್ಷೆ ಇದೆ. ‘Bcineet’ ಒಟಿಟಿ ಮೂಲಕ ಹಲವು ಪ್ಲಾಟ್​ಫಾರ್ಮ್​ಗಳಲ್ಲಿ ಈ ಸಿನಿಮಾ ಲಭ್ಯವಾಗಿದೆ. ಏರ್​ಟೆಲ್​ ಎಕ್ಸ್​ಸ್ಟ್ರೀಮ್​, ಅಮೇಜಾನ್​ ಪ್ರೈಂ ವಿಡಿಯೋ, ಮೂವೀಫ್ಲೆಕ್ಸ್​, ಜಸ್ಟ್​ ವಾಚ್​, ಒನ್​ಪ್ಲಸ್​ ಟಿವಿ, ಹಂಗಾಮಾ ಪ್ಲೇ, ಎಬಿಸಿ ಟಾಕೀಸ್​ ಮುಂತಾದ ಕಡೆಗಳಲ್ಲಿ ಈ ಸಿನಿಮಾ ನೋಡಬಹುದು.

ಇದನ್ನೂ ಓದಿ: 19 20 21 Movie Review: ನಾಡಿನ ಜನ ನೋಡಲೇಬೇಕಾದ ಕಾಡಿನ ಮಕ್ಕಳ ಕಥೆ ಮತ್ತು ಘನತೆ

‘19.20.21’ ಸಿನಿಮಾದಲ್ಲಿ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಶೃಂಗ ಬಿ.ವಿ. ಅಭಿನಯಿಸಿದ್ದಾರೆ. ಮಹದೇವ್​ ಹಡಪದ, ಕೃಷ್ಣ ಹೆಬ್ಬಾಳೆ, ಸಂಪತ್​ ಮೈತ್ರೇಯ, ಎಂ.ಡಿ. ಪಲ್ಲವಿ, ರಾಜೇಶ್​ ನಟರಂಗ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಬಿಂದು ಮಾಲಿನಿ ಸಂಗೀತ ನೀಡಿದ್ದಾರೆ. ಶಿವ ಬಿ.ಕೆ. ಕುಮಾರ್​ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ