AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಒಟಿಟಿ’: ಡೇಂಜರ್ ಜೋನ್​ನಲ್ಲಿ 7 ಮಂದಿ; ಸೋನು ಶ್ರೀನಿವಾಸ್ ಗೌಡ ಬಚಾವ್​

ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು ಕ್ಯಾಪ್ಟನ್ ಜಶ್ವಂತ್ ಅವರು ನೇರವಾಗಿ ನಾಮಿನೇಟ್ ಮಾಡಿದರು.

‘ಬಿಗ್ ಬಾಸ್ ಒಟಿಟಿ’: ಡೇಂಜರ್ ಜೋನ್​ನಲ್ಲಿ 7 ಮಂದಿ; ಸೋನು ಶ್ರೀನಿವಾಸ್ ಗೌಡ ಬಚಾವ್​
TV9 Web
| Edited By: |

Updated on:Aug 22, 2022 | 10:48 PM

Share

‘ಬಿಗ್ ಬಾಸ್​ ಒಟಿಟಿ’ (Bigg Boss OTT) ಮೂರನೇ ವಾರಕ್ಕೆ ಕಾಲಿಟ್ಟಿದೆ. ವಾರದ ಮೊದಲ ದಿನ ಅಂದರೆ ಸೋಮವಾರ (ಆಗಸ್ಟ್ 22) ಎಲಿಮಿನೇಷನ್​ಗೆ ನಾಮಿನೇಷನ್​ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ 7 ಜನರ ಮೇಲೆ ನಾಮಿನೇಷನ್ ತೂಗುಗತ್ತಿ ಇದೆ. ಕಳೆದ ಎರಡು ವಾರಗಳ ಕಾಲ ನಾಮಿನೇಟ್ ಆಗಿದ್ದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಬಚಾವ್ ಆಗಿದ್ದಾರೆ. ಈ ವಾರ ಮನೆಯಿಂದ ಯಾರು ಹೊರ ಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ.

ಬಿಗ್ ಬಾಸ್ ಕಡೆಯಿಂದ ಎಲ್ಲರಿಗೂ ಒಂದು ಬಾಕ್ಸ್ ಕಳಿಸಲಾಗಿತ್ತು. ಆ ಬಾಕ್ಸ್​ನಲ್ಲಿ ಎರಡು ವಸ್ತು ಇತ್ತು. ಒಂದರಲ್ಲಿ ಕಣ್ಣಿನ ಚಿತ್ರ ಇತ್ತು, ಮತ್ತೊಂದು ಬಾಕ್ಸ್​ನಲ್ಲಿ ಕನ್ಫೆಷನ್ ರೂಮ್ ಎಂದು ಇತ್ತು. ಕಣ್ಣಿನ ಚಿತ್ರ ಇದ್ದವರು ಎಲ್ಲರ ಎದುರು ಸ್ಪರ್ಧಿಗಳನ್ನು ನಾಮಿನೇಟ್​ಗೆ ಮಾಡಬೇಕು. ಕನ್ಫೆಷನ್ ರೂಮ್ ಎಂದು ಬರೆದುಕೊಂಡಿದ್ದವರು ಕನ್ಫೆಷನ್ ರೂಮ್​ಗೆ ತೆರಳಿ ನಾಮಿನೇಟ್​ ಮಾಡಬೇಕು.

ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು ಕ್ಯಾಪ್ಟನ್ ಜಶ್ವಂತ್ ಅವರು ನೇರವಾಗಿ ನಾಮಿನೇಟ್ ಮಾಡಿದರು. ಎರಡು ಹಂತದಲ್ಲಿ ನಾಮಿನೇಟ್​ ಪ್ರಕ್ರಿಯೆ ನಡೆಯಿತು.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಮೂರನೇ ಹಂತದಲ್ಲಿ ನಾಮಿನೇಷ್​​​​ನಿಂದ ಒಬ್ಬರನ್ನು ಸೇವ್​ ಮಾಡುವ ಪ್ರಕ್ರಿಯೆ ನಡೆಯಿತು. ಈ ಪ್ರಕ್ರಿಯೆಯಲ್ಲಿ ನಂದಿನಿ ಸೇವ್ ಆದರು. ಈ ಮೂಲಕ ಉದಯ್, ರೂಪೇಶ್, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀ, ಸೊಮಣ್ಣ ಮೇಲೆ ನಾಮಿನೇಷನ್ ತೂಗುಗತ್ತಿ ಇದೆ. ಇವರಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಅತಿ ಹೆಚ್ಚು ವೋಟ್ ಬಿದ್ದಿದ್ದು ಉದಯ್​ಗೆ. ಅವರು ಡಬಲ್​ ಗೇಮ್ ಆಡುತ್ತಾರೆ, ಹೆಣ್ಣುಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಬಹುತೇಕರು ಅವರನ್ನು ನಾಮಿನೇಟ್ ಮಾಡಿದರು. ಈಗ ವೀಕ್ಷಕರಿಂದ ಯಾರು ಕಡಿಮೆ ವೋಟ್ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ನಾಮಿನೇಟ್ ಆಗದೇ ಇದ್ದರೂ ಬಿಗ್ ಬಾಸ್ ಮನೆಯಿಂದ ಅರ್ಜುನ್ ಔಟ್​; ಏನಿದು ಟ್ವಿಸ್ಟ್?

ಆರಂಭದಲ್ಲಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದ ಸೋನು ಶ್ರೀನಿವಾಸ್​ ಗೌಡ ಅವರು ಮೊದಲ ಎರಡು ವಾರ ನಾಮಿನೇಟ್ ಆಗಿದ್ದರು. ಆದರೆ, ಈ ವಾರ ಅವರಿಗೆ ಯಾರೂ ವೋಟ್ ಮಾಡಿಲ್ಲ. ಹೀಗಾಗಿ, ಅವರ ಹೆಸರು ನಾಮಿನೇಷನ್​​ ಲಿಸ್ಟ್​ನಲ್ಲಿ ಇಲ್ಲ. ಇದು ಅವರ ಖುಷಿಯನ್ನು ಹೆಚ್ಚಿಸಿದೆ.

Published On - 10:38 pm, Mon, 22 August 22

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು