AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಒಟಿಟಿಗೆ ಬರಲಿದೆ ಪೃಥ್ವಿರಾಜ್ ನಟನೆಯ ‘ಆಡು ಜೀವಿತಂ’ ಸಿನಿಮಾ? ಇಲ್ಲಿದೆ ಬ್ಯಾಡ್ ನ್ಯೂಸ್

ಸಿನಿಮಾ ಬಿಡುಗಡೆ ಆದ ಬಳಿಕ ಒಟಿಟಿ ಬಗ್ಗೆ ಚರ್ಚೆ ಶುರುವಾಗುತ್ತದೆ. ಥಿಯೇಟರ್​ನಲ್ಲಿ ಸಿನಿಮಾ ಮೆಚ್ಚುಗೆ ಪಡೆದು, ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದರೆ ಸಿನಿಮಾ ಒಟಿಟಿ ರಿಲೀಸ್ ದಿನಾಂಕ ವಿಳಂಬ ಆಗುತ್ತದೆ. ಅದೇ ರೀತಿ ‘ಆಡು ಜೀವಿತಂ’ ಸಿನಿಮಾಗಾಗಿ ಕೆಲವರು ಕಾಯುತ್ತಿದ್ದಾರೆ.

ಯಾವಾಗ ಒಟಿಟಿಗೆ ಬರಲಿದೆ ಪೃಥ್ವಿರಾಜ್ ನಟನೆಯ ‘ಆಡು ಜೀವಿತಂ’ ಸಿನಿಮಾ? ಇಲ್ಲಿದೆ ಬ್ಯಾಡ್ ನ್ಯೂಸ್
ಆಡು ಜೀವಿತಂ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:May 07, 2024 | 1:07 PM

ಮಲಯಾಳಂ ಸೂಪರ್‌ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅಭಿನಯದ ‘ಆಡು ಜೀವಿತಂ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬ್ಲೆಸ್ಸಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಾರ್ಚ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಆಡು ಜೀವಿತಂ’ ಸಿನಿಮಾ ಮೆಚ್ಚುಗೆ ಪಡೆಯಿತು. 100 ಕೋಟಿ ರೂಪಾಯಿ ಗಳಿಕೆ ಮಾಡಿದ ಮಲಯಾಳಂನ ಕೆಲವೇ ಕೆಲವು ಸಿನಿಮಾಗಳಲ್ಲಿ ಇದು ಕೂಡ ಒಂದು. ಈ ಸಿನಿಮಾದ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿದೆ.

ಸಿನಿಮಾ ಬಿಡುಗಡೆ ಆದ ಬಳಿಕ ಒಟಿಟಿ ಬಗ್ಗೆ ಚರ್ಚೆ ಶುರುವಾಗುತ್ತದೆ. ಥಿಯೇಟರ್​ನಲ್ಲಿ ಸಿನಿಮಾ ಮೆಚ್ಚುಗೆ ಪಡೆದು, ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದರೆ ಸಿನಿಮಾ ಒಟಿಟಿ ರಿಲೀಸ್ ದಿನಾಂಕ ವಿಳಂಬ ಆಗುತ್ತದೆ. ಅದೇ ರೀತಿ ‘ಆಡು ಜೀವಿತಂ’ ಸಿನಿಮಾಗಾಗಿ ಕೆಲವರು ಕಾಯುತ್ತಿದ್ದಾರೆ. ಜನಪ್ರಿಯ OTT ಪ್ಲಾಟ್‌ಫಾರ್ಮ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಪೃಥ್ವಿರಾಜ್ ನಟನೆಯ ಈ ಸಿನಿಮಾದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.

ಮೇ 10ಕ್ಕೆ ‘ಆಡು ಜೀವಿತಂ’ ಸಿನಿಮಾ ಒಟಿಟಿಗೆ ಬರಲಿದೆ ಎಂದು ಸುದ್ದಿ ಆಗಿತ್ತು. ಆದರೆ ಈಗ ದಿನಾಂಕ ಬದಲಾಗಿದೆ. ಈ ಬ್ಲಾಕ್‌ಬಸ್ಟರ್ ಚಿತ್ರ ಮೇ 26ರಿಂದ ಸ್ಟ್ರೀಮ್ ಆಗಲಿದೆಯಂತೆ. ಈ ಸಿನಿಮಾ ಮಲಯಾಳಂ ಜೊತೆ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಕಾಣಲಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆಯಂತೆ. ಡಿಸ್ನಿ ಪ್ಲಸ್ ಹಾಟ್​ಸ್ಟಾರ್ 30 ಕೋಟಿ ರೂಪಾಯಿ ಪಡೆದುಕೊಂಡಿದೆ.

ಇದನ್ನೂ ಓದಿ: ‘ಸಲಾರ್​’ಗೆ ಎರಡು ಬಾರಿ ನೋ ಅಂದಿದ್ದ ಪೃಥ್ವಿರಾಜ್ ಸುಕುಮಾರ್ ಕೊನೆಗೆ ಒಪ್ಪಿದ್ದು ಏಕೆ?

ಪೃಥ್ವಿರಾಜ್ ಸುಕುಮಾರ್ ನಟನೆಯ ಈ ಸಿನಿಮಾದಲ್ಲಿ ಅಮಲಾ ಪೌಲ್ ನಟಿಸಿದ್ದಾರೆ. ಅಲ್ಲದೆ, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್, ಕೆಆರ್ ಗೋಕುಲ್, ಅರಬ್ ನಟರಾದ ತಾಲಿಬ್ ಅಲ್ ಬಲೂಶಿ, ರಿಕ್ ಅಬೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕನ್ನಡದಲ್ಲಿ ‘ಹೊಂಬಾಳೆ ಫಿಲ್ಮ್ಸ್’ ಬಿಡುಗಡೆ ಮಾಡಿದೆ. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರಕ್ಕಾಗಿ 31 ಕೆಜಿ ತೂಕ ಇಳಿಸಿಕೊಂಡಿದ್ದರು. ಈ ಸಿನಿಮಾಗೆ ನಿರ್ದೇಶಕರು ಹಲವು ವರ್ಷ ಮುಡಿಪಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:07 pm, Tue, 7 May 24

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ